ಬೆಂಗಳೂರು: ಇನ್‌ಸ್ಪೆಕ್ಟರ್‌, ಎಸಿಪಿಯನ್ನು ಇರಿದು ಕೊಲ್ಲುವುದಾಗಿ ಪೇದೆ ಬೆದರಿಕೆ?

Published : May 22, 2024, 06:00 AM IST
ಬೆಂಗಳೂರು: ಇನ್‌ಸ್ಪೆಕ್ಟರ್‌, ಎಸಿಪಿಯನ್ನು ಇರಿದು ಕೊಲ್ಲುವುದಾಗಿ ಪೇದೆ ಬೆದರಿಕೆ?

ಸಾರಾಂಶ

ಎಸಿಪಿ ಮತ್ತು ಇನ್‌ಪೆಕ್ಟರ್ ಅವರಿಗೆ ಚಾಕುವಿನಿಂದ ಇರಿದು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ಬಾಣಸವಾಡಿ ಠಾಣೆ ಕಾನ್‌ಸ್ಟೇಬಲ್‌ವೊಬ್ಬರ ವಿರುದ್ಧ ಆರೋಪ ಕೇಳಿ ಬಂದಿದೆ.

ಬೆಂಗಳೂರು(ಮೇ. 22):  ಇತ್ತೀಚೆಗೆ ರೌಡಿ ಕಾರ್ತಿಕೇಯನ್‌ ಕೊಲೆ ಪ್ರಕರಣ ಸಂಬಂಧ ತಮ್ಮನ್ನು ಕರ್ತವ್ಯ ಲೋಪದಡಿ ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ್ದರು ಎಂದು ಎಸಿಪಿ ಮತ್ತು ಇನ್‌ಪೆಕ್ಟರ್ ಅವರಿಗೆ ಚಾಕುವಿನಿಂದ ಇರಿದು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ಬಾಣಸವಾಡಿ ಠಾಣೆ ಕಾನ್‌ಸ್ಟೇಬಲ್‌ವೊಬ್ಬರ ವಿರುದ್ಧ ಆರೋಪ ಕೇಳಿ ಬಂದಿದೆ. ಕಾನ್‌ಸ್ಟೇಬಲ್ ರೇಣುಕ ನಾಯಕ್‌ ಮೇಲೆ ಆರೋಪ ಬಂದಿದ್ದು, ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ಇತ್ತೀಚೆಗೆ ಬಾಣಸವಾಡಿ ವ್ಯಾಪ್ತಿಯಲ್ಲಿ ರೌಡಿ ಕಾರ್ತಿಕೇಯನ್‌ ಕೊಲೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದ ಮೇರೆಗೆ ಕಾನ್‌ಸ್ಟೇಬಲ್‌ಗಳಾದ ಸಂತೋಷ್‌, ಪುಟ್ಟಸ್ವಾಮಿ ಹಾಗೂ ವಿನೋದ್ ಅವರನ್ನು ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್‌.ಆರ್‌.ಜೈನ್‌ ಅಮಾನತುಗೊಳಿಸಿದ್ದರು. ಆದರೆ ಅಮಾನತು ಶಿಕ್ಷೆಗೆ ಶಿಫಾರಸುಗೊಂಡಿದ್ದ ರೇಣುಕ ನಾಯಕ್ ಅವರಿಗೆ ಮಾತ್ರ ಕಡ್ಡಾಯ ರಜೆ ಶಿಕ್ಷೆ ವಿಧಿಸಲಾಗಿತ್ತು. ಇದರ ಹಿಂದೆ ಕಾನ್‌ಸ್ಟೇಬಲ್ ಬೆದರಿಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಹಾವೇರಿ: ವಿವಾಹಿತ ಮಹಿಳೆ ಮನೆಗೆ ನುಗ್ಗಿ, ಲೈಂಗಿಕ ದೌರ್ಜನ್ಯಕ್ಕೆ ಯತ್ನ, ಕೊಲೆ ಬೆದರಿಕೆ

ತನ್ನ ಹೆಸರನ್ನು ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ ಕಾರಣಕ್ಕೆ ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್‌ಸ್ಪೆಕ್ಟರ್ ಅವರಿಗೆ ರೇಣುಕ ಕೊಲೆ ಬೆದರಿಕೆ ಹಾಕಿದ್ದರು. ಇದರಿಂದ ಆತಂಕಗೊಂಡು ಎಸಿಪಿ ಅವರು, ಕೊನೆ ಕ್ಷಣದಲ್ಲಿ ತಮ್ಮ ಶಿಫಾರಸು ವರದಿಯನ್ನು ಹಿಂಪಡೆದಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ