ಹಿಂದೂಗಳ ಮನೆಗೆ ತೆರಳಿ ಮತಾಂತರಕ್ಕೆ ಯತ್ನ? ಕ್ರಿಶ್ಚಿಯನ್ ಮಹಿಳೆಯರನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Published : Aug 21, 2024, 12:04 AM ISTUpdated : Aug 21, 2024, 12:13 AM IST
ಹಿಂದೂಗಳ ಮನೆಗೆ ತೆರಳಿ ಮತಾಂತರಕ್ಕೆ ಯತ್ನ? ಕ್ರಿಶ್ಚಿಯನ್ ಮಹಿಳೆಯರನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಸಾರಾಂಶ

ಮನೆ ಮನೆಗೆ ತೆರಳಿ ಕ್ರೈಸ್ತ್ ಧರ್ಮದ ಕರಪತ್ರ ಹಂಚಿ ಬಲವಂತವಾಗಿ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪ ಹಿನ್ನೆಲೆ ಸ್ಥಳೀಯರು ಕ್ರಿಶ್ಚಿಯನ್ ಮಹಿಳೆಯನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಯಾದಗಿರಿ ನಗರದ ಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ.

ಯಾದಗಿರಿ (ಆ.21) ಮನೆ ಮನೆಗೆ ತೆರಳಿ ಕ್ರೈಸ್ತ್ ಧರ್ಮದ ಕರಪತ್ರ ಹಂಚಿ ಬಲವಂತವಾಗಿ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪ ಹಿನ್ನೆಲೆ ಸ್ಥಳೀಯರು ಕ್ರಿಶ್ಚಿಯನ್ ಮಹಿಳೆಯನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಯಾದಗಿರಿ ನಗರದ ಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ.

ರೇಚಲ್ ರಾಬರ್ಟ್, ಕರುಣಾ ಎಂಬ ಮಹಿಳೆಯರಿಂದ ಮತಾಂತರ ಯತ್ನ. ಇಬ್ಬರು ಬೆಂಗಳೂರು ಮೂಲದವರಾಗಿದ್ದರು ಯಾದಗಿರಿ ನಗರದಲ್ಲಿ ಹಿಂದೂಗಳ ಮನೆಮನೆಗೆ ತೆರಳಿ ಬೈಬಲ್ ಪುಸ್ತಕ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದರು ಎನ್ನಲಾಗಿದೆ. 

ಬಾಂಗ್ಲಾ ಮಾದರಿ ದಾಳಿ ನಡೆಸುತ್ತೇವೆ ಅನ್ನೋದಕ್ಕೆ ಎಷ್ಟು ಧೈರ್ಯ ಅವನಿಗೆ ; ಐವನ್ ಡಿಸೋಜಾ ವಿರುದ್ಧ ಶಾಸಕ ಎ ಮಂಜು ಕೆಂಡ

 ಹಿಂದೂ ದೇವರ ಬಗ್ಗೆ ಕೇವಲವಾಗಿ ಮಾತನಾಡಿರುವ ಮಹಿಳೆಯರು. ಭೂಮಿ ಮೇಲೆ ದೇವರು ಅಂತಾ ಇದ್ರೆ ಅದು ಏಸುಕ್ರಿಸ್ತ ಒಬ್ಬನೇ. ನಿಮ್ಮ ದೇವರುಗಳು ನಿಮಗೆ ರಕ್ಷಣೆ ನೀಡುವುದಿಲ್ಲ. ನಿಮ್ಮ ಹಿಂದೂ ಧರ್ಮ ತ್ಯಜಿಸಿ ಕ್ರೈಸ್ತ ಧರ್ಮಕ್ಕೆ ಬನ್ನಿ. ನಿಜವಾದ ದೇವರು ಏಸು ಕ್ರಿಸ್ತನನ್ನು ಅನುಸರಿಸಲು ಹಿಂದೂ ಧರ್ಮ ತ್ಯಜಿಸುವಂತೆ ಒತ್ತಾಯ. ಮನೆ ಮನೆಗೆ ತೆರಳಿ ಮುಗ್ಧ ಜನರ ತಲೆಕೆಡಿಸಿ ಮಾತಾಂತರ ಮಾಡುತ್ತಿರುವ ಮಿಷನರಿಗಳು.  

ಫ್ರೀ ಫ್ರೀ ಫ್ರೀ ಯಾರಿಗೆ ಬೇಕು ಫ್ರೀ... ಮಳೆಗೆ ಸೋರುತ್ತಿರುವ ಪೀಣ್ಯ ಫ್ಲೈಓವರ್ ಅಧ್ವಾನ ನೋಡಿ ಪುನೀತ್ ಕೆರೆಹಳ್ಳಿ ವ್ಯಂಗ್ಯ!

ಬೆಂಗಳೂರಿನಿಂದ ಬಂದು ಇಬ್ಬರು ಮಹಿಳೆಯರು ಮತಾಂತರ ಮಾಡುತ್ತಿರುವ ಬಗ್ಗೆ ಸ್ಥಳೀಯರಿಗೆ ಮಾಹಿತಿ ಸಿಕ್ಕ ಹಿನ್ನೆಲೆ ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಇಂತಹ ಕೃತ್ಯವೆಸಗಿದ ಇಬ್ಬರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಸ್ಥಳೀಯ ಸುರೇಶ್ ಎಂಬಾತ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು