₹1.45 ಕೋಟಿ ಹವಾಲಾ ಹಣ ಕದ್ದ ಪೊಲೀಸರು!

Kannadaprabha News   | Kannada Prabha
Published : Oct 11, 2025, 04:52 AM IST
KSRP

ಸಾರಾಂಶ

ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಹಾಗೆ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬನಿಂದ ವಶಪಡಿಸಿಕೊಳ್ಳಬೇಕಿದ್ದ 1.45 ಕೋಟಿ ರು. ಹಣವನ್ನು ಪೊಲೀಸರು ಜಪ್ತಿ ಮಾಡದೆ ತಾವೇ ದೋಚಿರುವ ಘಟನೆ ನಡೆದಿದೆ. ಈ ಸಂಬಂಧ ಉಪವಿಭಾಗಾಧಿಕಾರಿ ಸೇರಿ 10 ಮಂದಿ ಪೊಲೀಸರು ಅಮಾನತುಗೊಂಡಿದ್ದಾರೆ.

ಸಿಯೋನಿ (ಮ.ಪ್ರ.) : ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಹಾಗೆ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬನಿಂದ ವಶಪಡಿಸಿಕೊಳ್ಳಬೇಕಿದ್ದ 1.45 ಕೋಟಿ ರು. ಹಣವನ್ನು ಪೊಲೀಸರು ಜಪ್ತಿ ಮಾಡದೆ ತಾವೇ ದೋಚಿರುವ ಘಟನೆ ನಡೆದಿದೆ. ಈ ಸಂಬಂಧ ಉಪವಿಭಾಗಾಧಿಕಾರಿ ಸೇರಿ 10 ಮಂದಿ ಪೊಲೀಸರು ಅಮಾನತುಗೊಂಡಿದ್ದಾರೆ.

ಉದ್ಯಮಿಯೊಬ್ಬರಿಗೆ ಸೇರಿದ್ದ 1.45 ಕೋಟಿ ರು. ಹಣವನ್ನು ಲಾರಿಯಲ್ಲಿ ಸಾಗಿಸುತ್ತಿದ್ದಾಗ ಹವಾಲಾ ಹಣ ಎಂಬ ಆರೋಪದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದರು. ಆದರೆ ಹಣವನ್ನು ಜಪ್ತಿ ಲೆಕಕ್ಕೆ ತೋರಿಸುವ ಬದಲು ಚಾಲಕನಿಗೆ ಥಳಿಸಿ ದುಡ್ಡನ್ನು ದೋಚಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಉದ್ಯಮಿ ಮತ್ತು ಚಾಲಕ ದೂರಿನ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಹಣ ವಶಪಡಿಸಿಕೊಂಡ ಪೊಲೀಸರು ಅದರ ಬಗ್ಗೆ ಹಿರಿಯ ಅಧಿಕಾರಿಗಳಿಗೆ ತಿಳಿಸಿರಲಿಲ್ಲ ಎನ್ನಲಾಗಿದೆ, ಇನ್ನು ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿ ಬರುತ್ತಿದ್ದಂತೆ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಲಾರಿಯಲ್ಲಿ 2.96 ಕೋಟಿ ರು. ಹಣವಿತ್ತು ಎನ್ನುವ ಶಂಕೆ ವ್ಯಕ್ತವಾಗಿತ್ತು, ತನಿಖೆ ನಿಖರ ಅಂಕಿ ಅಂಶ ಗೊತ್ತಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!