
ಬೆಂಗಳೂರು(ಏ. 28) ಕೊರೋನಾ ಸೋಂಕಿತ ತಾಯಿಯನ್ನು ಆಸ್ಪತ್ರೆಗೆ ಸೇರಿಸಿದ್ದ ಮಗ ಆಸ್ಪತ್ರೆಯ ಟೆರೆಸ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಹಾಸನದಿಂದ ವರದಿಯಾಗಿತ್ತು. ಈಗ ಅಂಥದ್ದೇ ಒಂದು ಪ್ರಕರಣ ಬೆಂಗಳೂರಿನಿಂದ.
ಕ್ಟೋರಿಯಾ ಆಸ್ಪತ್ರೆ ಕಟ್ಟಡದಿಂದ ಜಿಗಿದು ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಾರು 35 ವರ್ಷದ ಕೊರೊನಾ ಸೊಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಕ್ಟೋರಿಯಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ ನಡೆದಿದೆ. ಸ್ಥಳಕ್ಕೆ ವಿವಿ ಪುರಂ ಪೋಲಿಸರು ಭೇಟಿ ನೀಡಿ ಸೋಂಕಿತ ವ್ಯಕ್ತಿ ಯಾರು ಎಂಬ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಬಟ್ಟೆ ತೊಳೆಯಲು ಹೋದ ಸಹೋದರರು ನೀರು ಪಾಲು
ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮುಂದುವರಿದೆ ಇದೆ. ಒಂದು ಕಡೆ ಕರ್ನಾಟಕ ಸರ್ಕಾರ ಹದಿನಾಲ್ಕು ದಿನಗಳ ನಿಷೇಧಾಜ್ಞೆ ಜಾರಿ ಮಾಡಿದೆ. ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ.
ಈ ನಿಷೇಧಾಜ್ಞೆಯ ಪರಿಣಾಮ ಗೊತ್ತಾಗಲು ಕೆಲ ದಿನ ಕಾಯಲೇಬೇಕು. ಮುಂಬೈ ಮತ್ತು ದೆಹಲಿಯಲ್ಲಿಯೂ ಕೊರೋನಾ ನಿಧಾನಕ್ಕೆ ನಿಯಂತ್ರಣಕ್ಕೆ ಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ