ಲಾಕ್‌ಡೌನ್‌ ಜಾರಿ ಬಳಿಕ ಕೌಟುಂಬಿಕ ದೌರ್ಜನ್ಯ ಕೇಸ್ ಹೆಚ್ಚಳ

Kannadaprabha News   | Asianet News
Published : Apr 03, 2020, 11:28 AM ISTUpdated : Apr 03, 2020, 01:05 PM IST
ಲಾಕ್‌ಡೌನ್‌ ಜಾರಿ ಬಳಿಕ ಕೌಟುಂಬಿಕ ದೌರ್ಜನ್ಯ ಕೇಸ್ ಹೆಚ್ಚಳ

ಸಾರಾಂಶ

ಭಾರತದಲ್ಲಿ ಲಾಕ್‌ಡೌನ್ ಬಳಿಕ ಮತ್ತೊಂದು ಸಮಸ್ಯೆ ತಲೆದೂರಿದ್ದು, ಕೌಟುಂಬಿಕ ದೌರ್ಜನ್ಯ ಕೇಸ್‌ಗಳ ಸಂಖ್ಯೆ ಹೆಚ್ಚಾಗಲಾರಂಭಿಸಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.

ನವದೆಹಲಿ(ಏ.03): ಕೊರೋನಾ ವೈರಸ್‌ ಸೋಂಕು ಹರಡಲು ಆರಂಭವಾದ ನಂತರ ಜಗತ್ತಿನಾದ್ಯಂತ ಕೌಟುಂಬಿಕ ದೌರ್ಜನ್ಯ ಹಾಗೂ ವಿಚ್ಛೇದನದ ಸಂಖ್ಯೆ ಹೆಚ್ಚಳವಾದ ಬಗ್ಗೆ ವರದಿಯಾಗಿತ್ತು. ಭಾರತದಲ್ಲೂ ಈಗ ಇದೇ ಟ್ರೆಂಡ್‌ ಆರಂಭವಾಗಿದ್ದು, ಲಾಕ್‌ಡೌನ್‌ ಜಾರಿಯಾದ ನಂತರ ಮಹಿಳೆಯರ ಮೇಲಿನ ಗೃಹಹಿಂಸೆ ಪ್ರಕರಣಗಳು ಜಾಸ್ತಿಯಾಗಿವೆ.

ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಜಾರಿಯಾದ ಮಾ.24ರಿಂದ ಏ.1ರ ನಡುವೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ 257 ದೂರು ಸಲ್ಲಿಕೆಯಾಗಿದೆ. ಇವುಗಳ ಪೈಕಿ 69 ದೂರುಗಳು ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದ್ದಾಗಿವೆ. ಹೆಚ್ಚಿನ ಮಹಿಳೆಯರು ಅಂಚೆ ಮೂಲಕ ದೂರು ಸಲ್ಲಿಸಿದ್ದಾರೆ. ಕೆಲ ಪ್ರಕರಣಗಳಲ್ಲಿ ಮಗಳ ಪರವಾಗಿ ತಂದೆ ದೂರು ಸಲ್ಲಿಸಿದ್ದಾರೆ.

ಲಾಕ್‌ಡೌನ್‌ಗೂ ಕ್ಯಾರೇ ಎನ್ನುತ್ತಿಲ್ಲ ಜನ: ಅಪಾಯ ತಪ್ಪಿದ್ದಲ್ಲ!

‘ಗೃಹಹಿಂಸೆ ಪ್ರಕರಣಗಳ ಸಂಖ್ಯೆ ಬಹುಶಃ ಇನ್ನೂ ಜಾಸ್ತಿಯಿದೆ. ಆದರೆ, ಲಾಕ್‌ಡೌನ್‌ನಿಂದಾಗಿ ಮಹಿಳೆಯರಿಗೆ ದೂರು ನೀಡಲು ಸಾಧ್ಯವಾಗುತ್ತಿಲ್ಲ ಅಥವಾ ದೂರು ನೀಡಿದ ಮೇಲೂ ಬೇರೆಲ್ಲೂ ಹೋಗಲು ಸಾಧ್ಯವಿಲ್ಲದೆ ಗಂಡನ ಜೊತೆಗೇ ಇರಬೇಕು ಎಂಬ ಕಾರಣಕ್ಕೆ ಅನೇಕ ಮಹಿಳೆಯರು ದೂರು ನೀಡುತ್ತಿಲ್ಲ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ.

ಮಾ.24ರ ನಂತರ ಮಹಿಳಾ ಆಯೋಗಕ್ಕೆ 69 ಕೌಟುಂಬಿಕ ದೌರ್ಜನ್ಯದ ದೂರುಗಳು ಬಂದಿವೆ. ಅವುಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಹಿಂದೆ ಪತಿಯ ಮನೆಯಲ್ಲಿ ದೌರ್ಜನ್ಯ ನಡೆದರೆ ಮಹಿಳೆಯರು ಪೊಲೀಸರಿಗೆ ದೂರು ನೀಡಿ ತವರು ಮನೆಗೆ ಹೋಗುತ್ತಿದ್ದರು. ಆದರೆ ಈಗ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ತವರಿಗೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಗಂಡನ ಮನೆಯಲ್ಲೇ ಇರಬೇಕಾಗುತ್ತದೆ. ದೂರು ಕೊಟ್ಟರೆ ಆತ ಇನ್ನೂ ಹಿಂಸೆ ನೀಡುತ್ತಾನೆ ಎಂದು ಬಹಳಷ್ಟುಮಹಿಳೆಯರು ದೂರು ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!