ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!

Published : May 26, 2026, 02:37 PM IST
Couple Arrested for Stealing Gold from Visually Impaired Friend s House RR nagar bengaluru

ಸಾರಾಂಶ

ಬೆಂಗಳೂರಿನಲ್ಲಿ ನಂಬಿಕೆದ್ರೋಹದ ಪ್ರಕರಣ ಬೆಳಕಿಗೆ ಬಂದಿದೆ. ರಾಜರಾಜೇಶ್ವರಿನಗರದಲ್ಲಿ ವಾಸವಿರುವ ಅಂಧ ಮಹಿಳೆಯ ಮನೆಗೆ ಸ್ನೇಹಿತರಂತೆ ಮನೆಗೆ ಬರುತ್ತಿದ್ದ ದಂಪತಿಗಳು ಚಿನ್ನಾಭರಣ ದೋಚಿದ್ದಾರೆ, ವರ್ಷದ ಬಳಿಕ ಕಳ್ಳತನ ಗೊತ್ತಾಗಿ ಎಫ್‌ಐಆರ್ ದಾಖಲಿಸಿದಾಗ ಪೊಲೀಸರು ಖದೀಮರನ್ನ ಹೇಗೆ ಪತ್ತೆಹಚ್ಚಿದರು ಗೊತ್ತಾ?.

ಈ ಕಾಲದಲ್ಲಿ ಸ್ನೇಹ ಸಂಬಂಧಗಳೆಲ್ಲ ಹಳಸಲು, ಯಾರನ್ನೂ ನಂಬುವಂತಿಲ್ಲ, ನಂಬಿಕೆದ್ರೋಹ ಎಸಗುವ ಪ್ರಕರಣಗಳು ದಿನೇದಿನೆ ನಡೆಯುತ್ತಲೇ ಇವೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅಂಥದ್ದೊಂದು ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತೆಯ ಮನೆಗೆ ಆಗಾಗ್ಗೆ ಓಡಾಡುತ್ತಿದ್ದ ದಂಪತಿ, ಅದೇ ಮನೆಯಲ್ಲಿದ್ದ ಚಿನ್ನಾಭರಣದ ಮೇಲೆ ಕಣ್ಣಿಟ್ಟಿದ್ದರು. ಮನೆಯಾಕೆಯ ನಂಬಿಕೆ ಗಳಿಸಿದ್ದ ಈ ಜೋಡಿ, ಯಾರಿಗೂ ಅನುಮಾನ ಬಾರದಂತೆ ಪ್ಲ್ಯಾನ್ ಮಾಡಿಕೊಂಡು ಚಿನ್ನಾಭರಣ ಎಗರಿಸಿದ್ದರು.

ಕಣ್ಣು ಕಾಣದ ಮಹಿಳೆಗೆ ಚಿನ್ನಾಭರಣ ಕದ್ದಿದ್ದು ಗೊತ್ತಾಗಲೇ ಇಲ್ಲ

ಪದ್ಮಜಾರಾವ್ ಎಂಬ ಮಹಿಳೆಗೆ ಕಣ್ಣು ಕಾಣಿಸುತ್ತಿರಲಿಲ್ಲ. ಇದನ್ನೇ ದುರುಪಯೋಗ ಮಾಡಿಕೊಂಡ ಆರೋಪಿಗಳಾದ ಶರ್ಮಿಳಾ ಮತ್ತು ಗಣೇಶ್ ಕುಮಾರ್, ಒಂದು ವರ್ಷದ ಹಿಂದೆಯೇ ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣವನ್ನು ಸ್ವಲ್ಪ ಸ್ವಲ್ಪವಾಗಿ ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಮನೆಯಲ್ಲೇ ಓಡಾಡುತ್ತಿದ್ದವರ ಮೇಲೆ ಅನುಮಾನವೇ ಬರಲಿಲ್ಲ. ಚಿನ್ನ ಕಣ್ಮರೆಯಾಗಿದ್ದರೂ, ಪದ್ಮಜಾರಾವ್ ಅವರಿಗೆ ಚಿನ್ನ ಕಳುವು ಆಗಿರುವ ಬಗ್ಗೆ ಸುಳಿವೇ ಇರಲಿಲ್ಲ.

ಒಂದು ವರ್ಷ ಬಳಿಕ ಅನುಮಾನ... ಠಾಣೆ ಮೆಟ್ಟಿಲೇರಿದ ಮಹಿಳೆ!

ಇತ್ತೀಚೆಗೆ ಮನೆಯಲ್ಲಿದ್ದ ಚಿನ್ನಾಭರಣ ಸಂಪೂರ್ಣ ಕಾಣೆಯಾಗಿರುವ ಅನುಮಾನ ಬಂದು, ಇದೇ ಮೇ ತಿಂಗಳಲ್ಲಿ ಪದ್ಮಜಾರಾವ್ ಆರ್‌ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮನೆಯವರ ಓಡಾಟ ಮತ್ತು ಪರಿಚಯಸ್ಥರ ಮಾಹಿತಿ ಆಧರಿಸಿ ತನಿಖೆ ಆರಂಭಿಸಿದರು.

ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ದಂಪತಿ

ತನಿಖೆ ವೇಳೆ ಶರ್ಮಿಳಾ ಮತ್ತು ಗಣೇಶ್ ಕುಮಾರ್ ಮೇಲೆಯೇ ಪೊಲೀಸರಿಗೆ ಅನುಮಾನ ಗಟ್ಟಿಯಾಗುತ್ತಾ ಹೋಯ್ತು. ಈ ದಂಪತಿಗಳು ಪದ್ಮಜಾರಾವ್ ಮನೆಗೆ ಹೆಚ್ಚು ಬರುತ್ತಿದ್ದಿದ್ದು ಯೋಗಕ್ಷೇಮ ವಿಚಾರಿಸುವುದಕ್ಕಿಂತಲೂ ಮನೆಯಲ್ಲಿದ್ದ ಚಿನ್ನಾಭರಣ ದೋಚಲು ಎಂಬುದು ಖಾತ್ರಿ ಆಗಿತ್ತು. ಕೊನೆಗೆ ಇಬ್ಬರನ್ನೂ ಬಂಧಿಸಿದ ಆರ್‌ಆರ್ ನಗರ ಪೊಲೀಸರು. ಮೊದಲಿಗೆ ದಂಪತಿ ತಾವು ಕಳ್ಳತನ ಮಾಡಿಲ್ಲ ಎಂದು ಸಾಚಾತನ ತೋರಿಸಿದ್ದರು. ಆದರೆ ಆದರೆ ಪೊಲೀಸರು ತನಿಖೆ ಯಾವ ರೀತಿ ಇರುತ್ತೆ ಅನ್ನೋದು ಗೊತ್ತಿರುತ್ತಲ್ಲ? ಕೊನೆಗೆ ಚಿನ್ನ ಕದ್ದಿದ್ದು ಬಾಯಿಬಿಟ್ಟಿದ್ದಾರೆ. ಬಳಿಕ ಪೊಲೀಸರು ದಂಪತಿಯಿಂದ ಸುಮಾರು 230 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ನಂಬಿಕೆ ಇಟ್ಟು ಮನೆಗೆ ಒಳಗೆ ಕರೆದುಕೊಂಡ ಸ್ನೇಹಿತರೇ ಕಳ್ಳರಾಗಿದ್ದ ವಿಚಾರ ತಿಳಿದು ಪದ್ಮಜಾರಾವ್ ಕುಟುಂಬ ಬೆಚ್ಚಿಬಿದ್ದಿದೆ. ಅದಕ್ಕೆ ಹೇಳಿದ್ದು, ಯಾರನ್ನೂ ನಂಬದ ಕಾಲವಿದು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎದೆ ಮೇಲೆ ಬೈಬಲ್ ಇಟ್ಟು ಸತ್ತ ಮಗನಿಗೆ ಜೀವ ತುಂಬಲು ಹೆತ್ತ ತಾಯಿ ಪರದಾಟ, ಮುಂದೆ ಆಗಿದ್ದು ಇದೇ!
ಕಣ್ಣಮುಂದೆ ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋಲ್ಲ! ಬೆಂಗಳೂರಲ್ಲಿ ವಿಚಿತ್ರ ಕಳ್ಳರ ಗ್ಯಾಂಗ್‌ಗೆ ಪೊಲೀಸರೇ ಶಾಕ್!