
ಬೆಳಗಾವಿ(ಜೂ.10): ವಿಷಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿದ ಪತ್ನಿ ಕೂಡ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಜಿಲ್ಲೆ ಬೈಲಹೊಂಗಲದಲ್ಲಿ ನಡೆದಿದೆ. ಗುರುನಾಥ್ ತಾವರೆ(45) ಹಾಗೂ ಮೀನಾಕ್ಷಿ(35) ಎಂಬುವರೇ ಮೃತ ದುರ್ದೈವಿಗಳಾಗಿದ್ದಾರೆ.
ಏನಿದು ಪ್ರಕರಣ..?
ಮೃತ ಗುರುನಾಥ್ ಮೂಲತಃ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ನಿವಾಸಿಯಾಗಿದ್ದು ಅಮಟೂರು ಗ್ರಾಮದಲ್ಲಿ ಸರ್ಕಾರಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದರು. ಗುರುನಾಥ್ ಅವರಿಗೆ ಕಳೆದ 13 ವರ್ಷಗಳ ಹಿಂದೆ ಬೆಳಗಾವಿಯ ಮೀನಾಕ್ಷಿ ಜೊತೆ ವಿವಾಹವಾಗಿತ್ತು. ಕೆಲ ವರ್ಷಗಳಿಂದ ಕೌಟುಂಬಿಕ ಕಲಹ ಹಿನ್ನೆಲೆ ಪರಸ್ಪರ ಜಗಳಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಕಂಪ್ಲಿ: ಹೆಂಡ್ತಿ ಕೊಲೆಗೈದ ಆರೋಪ, ನೇಣಿಗೆ ಶರಣಾದ ಗಂಡ
ಮೃತ ದಂಪತಿಗೆ 10 ವರ್ಷದ ಗಂಡು ಮಗು, ಮೂರು ವರ್ಷದ ಹೆಣ್ಣು ಮಗು ಇದೆ. ಪತಿ ಪತ್ನಿ ಮಧ್ಯೆ ಕೌಟುಂಬಿಕ ಕಲಹದ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಈ ವಿಷಯದಿಂದ ಬಹಳ ನೊಂದಿದ್ದ ಗುರುನಾಥ್ ತಾವರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಗಂಡ ಅತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿದ ಪತ್ನಿ ಮೀನಾಕ್ಷಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಂಪತಿಯಆತ್ಮಹತ್ಯೆಯಿಂದ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿವೆ. ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ