Hassan: ಕಲುಷಿತ ಆಹಾರ ಸೇವಿಸಿ ಮೃತಪಟ್ಟ ದಂಪತಿ ಸಾವಿನ ರಹಸ್ಯ ಬಯಲು: ಮಗನೇ ತಂದೆ-ತಾಯಿಗೆ ವಿಷ ಹಾಕಿದ

Published : Aug 28, 2023, 09:45 AM ISTUpdated : Aug 28, 2023, 11:19 AM IST
Hassan: ಕಲುಷಿತ ಆಹಾರ ಸೇವಿಸಿ ಮೃತಪಟ್ಟ ದಂಪತಿ ಸಾವಿನ ರಹಸ್ಯ ಬಯಲು: ಮಗನೇ ತಂದೆ-ತಾಯಿಗೆ ವಿಷ ಹಾಕಿದ

ಸಾರಾಂಶ

ಇತ್ತಿಚೆಗಷ್ಟೇ ಅರಕಲಗೂಡು ತಾಲ್ಲೂಕಿನ, ಬಿಸಿಲಹಳ್ಳಿ ಗ್ರಾಮದಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ದಂಪತಿ ಸಾವಿನ ರಹಸ್ಯ ಬಯಲಾಗಿದೆ. 

ಹಾಸನ (ಆ.28): ಇತ್ತಿಚೆಗಷ್ಟೇ ಅರಕಲಗೂಡು ತಾಲ್ಲೂಕಿನ, ಬಿಸಿಲಹಳ್ಳಿ ಗ್ರಾಮದಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ದಂಪತಿ ಸಾವಿನ ರಹಸ್ಯ ಬಯಲಾಗಿದೆ. ಪುತ್ರನೇ ತನ್ನ ಪೋಷಕರಿಗೆ ವಿಷ ಹಾಕಿ ಕೊಲೆ ಮಾಡಿರುವ ಅಘಾತಕಾರಿ ಸತ್ಯ ಬಹಿರಂಗವಾಗಿದೆ.

ಹೌದು! ಪುತ್ರ ಮಂಜುನಾಥ್ (27) ತಿಂಡಿಗೆ ವಿಷ ಬೆರೆಸಿ ತಂದೆ ತಾಯಿಗೆ ತಿನ್ನಿಸಿ ಕೊಲೆ ಮಾಡಿದ್ದಾನೆ. ಪುತ್ರ ಮಂಜುನಾಥ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೊಲೆ‌ ಮಾಡಿರುವ ವಿಷಯ ಬಯಲಾಗಿದೆ. ವಿಧವೆ ಜೊತೆ ಪುತ್ರ ಮಂಜುನಾಥ್‌ ಅಕ್ರಮ ಸಂಬಂಧ ಹೊಂದಿದ್ದು, ಇದಕ್ಕೆ ಮಂಜುನಾಥ್ ತಾಯಿ ಉಮಾ ವಿರೋಧ ವ್ಯಕ್ತಪಡಿಸಿದ್ದರು. ಸಹಕಾರ ಸಂಘಗಳಲ್ಲಿ ತಾಯಿ ಉಮಾ ಮಾಡಿದ್ದ ಸಾಲದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದ. ಅಕ್ರಮ ಸಂಬಂಧಕ್ಕೆ ವಿರೋಧ ಹಾಗೂ ಹಣ ನೀಡುವಂತೆ ಪದೇ ಪದೇ ತಾಯಿ ಉಮಾ ಒತ್ತಾಯಿಸುತ್ತಿದ್ದರು. 

Bengaluru: ತೆಲಂಗಾಣ ಕಾಂಗ್ರೆಸ್​ ನಾಯಕನ ವಿರುದ್ಧ ನಗರದಲ್ಲಿ ಅತ್ಯಾಚಾರ ಪ್ರಕರಣ ದಾಖಲು!

ಇದರಿಂದ ಕೋಪಗೊಂಡು ತಾಯಿಯ ಹತ್ಯೆಗೆ ನೀಚ ಮಂಜುನಾಥ್ ಸ್ಕೆಚ್ ಹಾಕಿದ್ದ. ಆ.15 ರಂದು ಮನೆಯಲ್ಲಿ ಬೆಳಿಗ್ಗೆ ತಿಂಡಿಗೆ ಉಮಾ ಪಲಾವ್ ಮಾಡಿದ್ದರು. ತಂದೆ, ತಾಯಿಗಿಂತ ಮೊದಲೇ ತಿಂಡಿ ತಿಂದು ಆನಂತರ ಪಲಾವ್‌ಗೆ ಕಳೆನಾಶಕವನ್ನು ಮಂಜುನಾಥ್ ಬೆರೆಸಿದ್ದ. ತಂದೆ, ತಾಯಿ ತಿಂಡಿ ತಿಂದ ವೇಳೆ ಔಷಧಿ ವಾಸನೆ ಬರುತ್ತಿದೆ ಎಂದು ಕೊಲೆಗಾರ ಮಂಜುನಾಥ್ ವಾಂತಿ ಮಾಡಿ ನಾಟಕವಾಡಿದ್ದ. ಆಗಸ್ಟ್ 15 ರಂದು ಮನೆಯಲ್ಲಿ ತಿಂಡಿ ಮಾಡಿದ ಬಳಿಕ ದಂಪತಿ ಅಸ್ವಸ್ಥಗೊಂಡಿದ್ದರು. ಕಳೆದ ಗುರುವಾರ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಬರುವ ವೇಳೆ ಇಬ್ಬರೂ ದಿಢೀರ್ ಸಾವಿಗೀಡಾಗಿದ್ದರು. 

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಹೆಣಕ್ಕೆ ಬಳಸುವ ಉಪ್ಪು ಕೈದಿಗಳ ಆಹಾರಕ್ಕೆ?: ವಿಡಿಯೋ ವೈರಲ್‌

ಉಮಾ (48), ನಂಜುಂಡಪ್ಪ (55) ಮೃತಪಟ್ಟಿದ್ದ ದಂಪತಿ. ದಂಪತಿಗಳ ಹಠಾತ್ ಸಾವಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ದಂಪತಿಯ ಕಿರಿಯ ಪುತ್ರ. ಗುರುವಾರ ಅಂತ್ಯಕ್ರಿಯೆಗೆ ಸಿದ್ದತೆ ಮಾಡಿಕೊಂಡಿದ್ದ‌ ವೇಳೆ‌ ಗ್ರಾಮಕ್ಕೆ ಆಗಮಿಸಿ ಅಂತ್ಯಕ್ರಿಯೆಯನ್ನು ಪೊಲೀಸರು ತಡೆದಿದ್ದರು. ಕುಟುಂಬ ಸದಸ್ಯರ ಮನವೊಲಿಸಿ ಬಳಿಕ‌ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಪೊಲೀಸರು ಕೊಂಡೊಯ್ದಿದ್ದರು. ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದರು. ಇದೀಗ ಪೋಷಕರನ್ನೇ ಕೊಲೆ ಮಾಡಿರುವ ಸತ್ಯವನ್ನು ಮಗ ಬಾಯ್ಬಿಟ್ಟಿದ್ದು, ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!