
ರಾಮನಗರ(ಫೆ. 07) ನಾಡಬಾಂಬ್ ತಿಂದು ಹಸುವಿನ ಬಾಯಿ ಸಂಪೂರ್ಣ ಛಿದ್ರ ಛಿದ್ರವಾಗಿದೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕಾಶಿಗೌಡ ಎಂಬುವವರ ಜಮೀನಿನಲ್ಲಿ ಆಕ್ರಮವಾಗಿ ಇಡಲಾಗಿತ್ತು. ಕಾಡುಪ್ರಾಣಿಗಳನ್ನ ಭೇಟಿಯಾಡಲು ನಾಡಬಾಂಬ್ ಇಡಲಾಗಿತ್ತು. ಮೇವು ತಿನ್ನಲು ಹೋದಂತಹ ಸಂದರ್ಭದಲ್ಲಿ ನಾಡಬಾಂಬ್ ತಿಂದ ಹಸು ಗಂಭೀರ ಗಾಯಗೊಂಡಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಆನೆಗೆ ಬೆಂಕಿ ಇಟ್ಟ ಕಿರಾತಕರಿಗೆ ಯಾವ ಶಿಕ್ಷೆ ಕೊಡಬೇಕು?
ಕಾಡು ಪ್ರಾಣಿಗಳ ಕಾಟ ತಪ್ಪಿಸಲು ಈ ರೀತಿಯ ಕೆಲಸ ಮಾಡಲಾಗುತ್ತಿದೆ. ಈ ಹಿಂದೆ ತಮಿಳುನಾಡಿನಲ್ಲಿ ಆನೆಯೊಂದು ಇಂಥದ್ದೆ ಘಟನೆಗೆ ಬಲಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳು ಪ್ಲಾಸ್ಟಿಕ್ ತಿಂದು ಅಪಾಯಕ್ಕೆ ಸಿಲುಕುತ್ತಿವೆ ಎಂಬ ವಿಚಾರವನ್ನು ನಟ ಅನಿರುದ್ಧ ಗಮನಕ್ಕೆ ತಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ