
ಬೆಂಗಳೂರು(ಸೆ. 01) ಮ್ಯಾಟ್ರಿಮೋನಿ ಸೈಟ್ ಮೂಲಕ ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.
ಹೆಣ್ಣು ಮಕ್ಕಳಿಂದ ಹಣ ಒಡವೆ ಪಡೆದು ಮದುವೆಯಾಗದೇ ನಂಬರ್ ಬ್ಲಾಕ್ ಮಾಡ್ತಿದ್ದ. ರಮೇಶ್, ವಿಜಯ್ ಹೀಗೆ ಬೇರೆ ಬೇರೆ ಹೆಸರಲ್ಲಿ ನಕಲಿ ಖಾತೆ ಕ್ರಿಯೆಟ್ ಮಾಡಿಕೊಂಡು ವಂಚನೆ ಮಾಡುತ್ತಿದ್ದ ಜಗನ್ನಾಥ್ (34) ಬಂಧನವಾಗಿದೆ.
30 ವರ್ಷ ಮೇಲ್ಪಟ್ಟ ವಿಚ್ಛೇದನ ಆಗಿರುವ ಯುವತಿಯರನ್ನ ಟಾರ್ಗೆಟ್ ಮಾಡಿ ಸಂಪರ್ಕ ಬೆಳೆಸಿಕೊಳ್ಳುತ್ತಿದ್ದ. ಆಕ್ಸಿಡೆಂಟ್ ಆಗಿದೆ, ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗಿದೆ, ಸೈಟ್ ಖರೀದಿ ಮಾಡಲಿಕ್ಕೆ ಹಣ ಬೇಕು ಅಂತ ನೆಪ ಹೇಳಿ ಹಣ ಪಡೆದುಕೊಳ್ಳುತ್ತಿದ್ದ.
ಲೋಹಕ್ಕೆ ಚಿನ್ನದ ಲೇಪ ಮಾಡಿ ಸಾಲ ಪಡೆದಿದ್ದ ಸ್ಯಾಂಡಲ್ವುಡ್ ನಿರ್ದೇಶಕ
ಹತ್ತು ಮಂದಿ ಯುವತಿಯರಿಗೆ ವಂಚಿಸಿರುವ ಆರೋಪಿ ಮೂಲತ: ಬಿಜಾಪುರ ಜಿಲ್ಲೆಯವನು. ಸಿವಿಲ್ ಎಂಜಿನಿಯರ್ ಅಂತ ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ ವಿರುದ್ದ ಇದುವರೆಗೂ ಮೂರು ಯುವತಿಯರು ದೂರು ದಾಖಲಿಸಿದ್ದಾರೆ. ಬನಶಂಕರಿ, ಹೆಣ್ಣೂರು, ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ಕಾರಿನಲ್ಲಿ ಆಕ್ಸಿಡೆಂಟ್ ಆಗಿದ್ದ ಪೊಟೊ ಬಳಸಿ ಹಣ ವಸೂಲಿ ಮಾಡಿದ್ದ ಮೊದಲೆರಡು ಬಾರಿ ಯುವತಿಯರನ್ನ ಭೇಟಿ ಆಗಿ ಮದುವೆಯಾಗುವುದಾಗಿ ನಂಬಿಸ್ತಿದ್ದ ನಂತರ ಬೇರೆ ಬೇರೆ ಕಾರಣ ಹೇಳಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಇಂಜಿನಿಯರ್ ಬಲೆಗೆ ಬಿದ್ದಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ