ನಿಧಿ ಆಸೆಗೆ ಪುರಾತನ ಕಾಲದ ಆಂಜನೇಯ ದೇವಾಲಯದ ಗರ್ಭಗುಡಿ ಅಗೆದ ದುಷ್ಕರ್ಮಿಗಳು!

Published : Jan 22, 2023, 02:40 PM IST
ನಿಧಿ ಆಸೆಗೆ ಪುರಾತನ ಕಾಲದ ಆಂಜನೇಯ ದೇವಾಲಯದ ಗರ್ಭಗುಡಿ ಅಗೆದ ದುಷ್ಕರ್ಮಿಗಳು!

ಸಾರಾಂಶ

ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಪುರಾತನ ದೇವಸ್ಥಾನದ ಗರ್ಭಗುಡಿಯನ್ನೇ ಅಗೆದಿರು ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗುಮ್ಮನಹಳ್ಳಿ ಅಂಜನೇಯ ದೇವಸ್ಥಾನದಲ್ಲಿ ನಡೆದಿದೆ.

ತುಮಕೂರು (ಜ.22) : ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಪುರಾತನ ದೇವಸ್ಥಾನದ ಗರ್ಭಗುಡಿಯನ್ನೇ ಅಗೆದಿರು ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗುಮ್ಮನಹಳ್ಳಿ ಅಂಜನೇಯ ದೇವಸ್ಥಾನದಲ್ಲಿ ನಡೆದಿದೆ.

ಆಂಜನೇಯ ದೇವಸ್ಥಾನ ಪುರಾತನ ಕಾಲದ್ದಾಗಿದ್ದು, ಶಿರಾ ದೊಡ್ಡಕೆರೆಗೆ ನೀರು ಹರಿಯುವ ಹಳ್ಳದ ದಂಡೆಗೆ ಇದೆ. ಹಲವು ವರ್ಷಗಳಿಂದ ಪೂಜಾ ಕೈಂಕರ್ಯ ನಡೆಯದ ಕಾರಣ ದೇವಾಲಯದ ಸುತ್ತಮುತ್ತ ಗಿಡಗಂಟಿ ಬೆಳೆದು ಮುಚ್ಚಿಹೋಗಿತ್ತು. ಇದನ್ನೇ ಅವಕಾಶವಾಗಿ ಬಳಸಿಕೊಂಡಿರುವ ದುಷ್ಕರ್ಮಿಗಳು, ದೇವಾಲಯದ ಗರ್ಭಗುಡಿ ಅಗೆದಿದ್ದಾರೆ.

ನಿಧಿ ಆಸೆಗಾಗಿ ಐತಿಹಾಸಿಕ ಸಿದ್ದೇಶ್ವರ ದೇಗುಲ ಅಗೆದ ಕಳ್ಳರು!

 ಇಂದು ಬೆಳಗ್ಗೆ ಕೆಲ ಯುವಕರು ದೇವಾಲಯದ ಬಳಿ ಹೋದಾಗ ಗರ್ಭಗುಡಿ ಮತ್ತು ಒಳ ಆವರಣದಲ್ಲಿ ಹತ್ತಾರು ಅಡಿ ಅಗೆದಿರುವುದು ಬೆಳಕಿಗೆ ಬಂದಿದೆ. ನಿಧಿ ಆಸೆಗಾಗಿ ಕಳ್ಳರು ದೇವಾಲಯದ ಗರ್ಭಗುಡಿ ಅಗೆದಿರುವುದಾಗಿ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.  ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ, ಗರ್ಭಗುಡಿ ಅಗೆದಿರುವ ಸುತ್ತಮುತ್ತ ಸ್ಥಳ ಪರಿಶೀಲನೆ ನಡೆಸಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ