ಸವದತ್ತಿ: ಪ್ರೀತಿಗಾಗಿ ಸಿಆರ್‌ಪಿಎಫ್‌ ಯೋಧ ಆತ್ಮಹತ್ಯೆ

Kannadaprabha News   | Asianet News
Published : Sep 13, 2021, 02:44 PM ISTUpdated : Sep 13, 2021, 02:45 PM IST
ಸವದತ್ತಿ: ಪ್ರೀತಿಗಾಗಿ ಸಿಆರ್‌ಪಿಎಫ್‌ ಯೋಧ ಆತ್ಮಹತ್ಯೆ

ಸಾರಾಂಶ

*  ಬೆಳಗಾವಿ ಜಿಲ್ಲೆಯ ಸವ​ದ​ತ್ತಿ ತಾಲೂಕಿನ ಹಿರೇ ಉಳ್ಳಿಗೇರಿ ಗ್ರಾಮದಲ್ಲಿ ನಡೆದ ಘಟನೆ *  ಸಿಆರ್‌ಪಿಎಫ್‌ಯೋಧ ಶ್ರೀಶೈಲ್‌ಸೊಗಲದ ಆತ್ಮಹತ್ಯೆಗೆ ಶರಣಾದ ಯೋಧ *  ಡೆತ್‌ನೋಟ್‌ಬರೆದಿಟ್ಟು ಆತ್ಮಹತ್ಯೆ   

ಸವದತ್ತಿ(ಸೆ.13):  ಪ್ರೀತಿಯ ಬಲೆಗೆ ಬಿದ್ದ ಸಿಆರ್‌ಪಿಎಫ್‌ ಯೋಧನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ​ಗಾವಿ ಜಿಲ್ಲೆಯ ಸವ​ದ​ತ್ತಿ ತಾಲೂಕಿನ ಹಿರೇ ಉಳ್ಳಿಗೇರಿ ಗ್ರಾಮದಲ್ಲಿ ಸಂಭವಿಸಿದೆ.

ಸವ​ದತ್ತಿ ಪಟ್ಟ​ಣದ ಪದಕಿ ಓಣಿಯ ನಿವಾಸಿ ಹಾಗೂ ಸಿಆರ್‌ಪಿಎಫ್‌ ಯೋಧ ಶ್ರೀಶೈಲ್‌ಸೊಗಲದ (31) ಎಂಬಾತ ಮೃತ ಯೋಧ. ಈತ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದ. ಮನೆಯಲ್ಲಿ ಮದುವೆಗೆ ಒಪ್ಪಿಗೆ ನೀಡದಿದ್ದಾಗ ಹಾಗೂ ಯುವತಿಯು ಮದುವೆ ಮಾಡಿಕೊಳ್ಳಲು ಹಠ ಹಿಡಿದಾಗ ಮಾನಸಿಕ ಸಂದಿಗ್ಧ ಸ್ಥಿತಿಗೆ ಒಳಗಾಗಿದ್ದಾನೆ ಎನ್ನಲಾಗಿದೆ.

ರಾಮದುರ್ಗ: ವಿಷಕಾರಿ ಪದಾರ್ಥ ಸೇವಿಸಿ ರೈತ ಆತ್ಮಹತ್ಯೆ

ಇಬ್ಬರು ಸೇರಿ ಸೆ. 7ರಂದು ಸವದತ್ತಿ ಸಬ್‌ರಜಿಸ್ಟರ್‌ ಕಚೇರಿಗೆ ಮದುವೆ ಮಾಡಿಕೊಳ್ಳಲು ಹೋಗಿದ್ದಾರೆ. ಆದರೆ ಆ ದಿವಸ ಮದುವೆ ಆಗದೆ ಇರುವದರಿಂದ ಸೆ. 8ರಂದು ಧಾರವಾಡಕ್ಕೆ ತೆರಳಿದ್ದಾರೆ. ನಂತರದಲ್ಲಿ ಮಾನಸಿಕ ಮಾಡಿಕೊಂಡಿದ್ದ ಶ್ರೀಶೈಲ್‌ ಮನೆಗೆ ಬಾರದೆ ಹಿರೇ ಉಳ್ಳಿಗೇರಿ ಗ್ರಾಮದ ವ್ಯಾಪ್ತಿಯ ಜಮೀನಿನೊಂದರಲ್ಲಿ ಡೆತ್‌ನೋಟ್‌ ಬರೆದಿಟ್ಟು ತನ್ನಷ್ಟಕ್ಕೆ ತಾನೆ ವಿಷ ಸೇವನೆ ಮಾಡಿಕೊಂಡಿದ್ದಾನೆ. ಈತನ ಸಾವಿನಲ್ಲಿ ಯುವತಿಯ ಮೇಲಾಗಲಿ ಹಾಗೂ ಬೇರೆ ಯಾರ ಮೇಲೂ ಯಾವುದೇ ಸಂಶಯ ಇಲ್ಲ ಎಂದು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!