
ಬೆಂಗಳೂರು(ಮೇ.02): ಅನಾರೋಗ್ಯಕ್ಕೆ ತುತ್ತಾಗಿದ್ದೇನೆ ಎಂದು ಖಾಸಗಿ ಕಂಪನಿ ಉದ್ಯೋಗಿಗೆ ವಿದೇಶದಲ್ಲಿ ನೆಲೆಸಿರುವ ಅವರ ಬಾಲ್ಯ ಸ್ನೇಹಿತನ ಹೆಸರಿನಲ್ಲಿ ಸೈಬರ್ ವಂಚಕರು ಸಂದೇಶ ಕಳುಹಿಸಿ ಲಕ್ಷಾಂತರ ರುಪಾಯಿ ಹಣವನ್ನು ಪಡೆದುಕೊಂಡ ಪ್ರಕರಣ ವರದಿಯಾಗಿದೆ. ವೈಟ್ಫೀಲ್ಡ್ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈಟ್ಫೀಲ್ಡ್ನಲ್ಲಿ ನೆಲೆಸಿರುವ ಖಾಸಗಿ ಕಂಪನಿ ಉದ್ಯೋಗಿಯ ಗೆಳೆಯನೊಬ್ಬ ಮಲೇಷಿಯಾದಲ್ಲಿ ನೆಲೆಸಿದ್ದಾನೆ. ಈ ಗೆಳೆಯರು ನಿರಂತರ ಸಂಪರ್ಕದಲ್ಲಿದ್ದು, ಆಗಾಗ್ಗೆ ಕರೆ ಮಾಡಿ ಮಾತನಾಡುತ್ತಿದ್ದರು. ಏ.29ರಂದು ಮಲೇಷಿಯಾದ ವ್ಯಕ್ತಿಯ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಿರುವ ಸೈಬರ್ ಕಳ್ಳರು, ಅವರ ಹೆಸರಿನಲ್ಲಿ ವೈಟ್ಫೀಲ್ಡ್ನಲ್ಲಿದ್ದ ಗೆಳೆಯನಿಗೆ ತ್ವರಿತವಾಗಿ ಹಣ ಕಳುಹಿಸುವಂತೆ ಸಂದೇಶ ಕಳುಹಿಸಿದ್ದಾರೆ.
ಮುದ್ರಾ ಸಾಲ ಕೊಡಿಸುವ ನೆಪದಲ್ಲಿ 62 ಲಕ್ಷ ವಂಚನೆ
ಸ್ನೇಹಿತ ಸಂಕಷ್ಟದಲ್ಲಿರುವುದನ್ನು ಕಂಡು ಮರುಗಿದ ಅವರು, ಕೂಡಲೇ ಆ ಸಂದೇಶಕ್ಕೆ ಪ್ರತಿಕ್ರಿಯಿಸಿ 98 ಸಾವಿರ ವರ್ಗಾಯಿಸಿದ್ದಾರೆ. ಬಳಿಕ ಗೆಳೆಯನಿಗೆ ಕರೆ ಮಾಡಿದಾಗ ವಂಚನೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ