ಆನ್‌ಲೈನ್‌ ಶಾಪಿಂಗ್‌ ಮಾಡೋ ಮುನ್ನ ಇರಲಿ ಎಚ್ಚರ: ಖರೀದಿ ನೆಪದಲ್ಲಿ ಕ್ಯೂಆರ್‌ ಕೋಡ್‌ ಕಳುಹಿಸಿ ವಂಚನೆ

Kannadaprabha News   | Asianet News
Published : Nov 04, 2020, 09:28 AM IST
ಆನ್‌ಲೈನ್‌ ಶಾಪಿಂಗ್‌ ಮಾಡೋ ಮುನ್ನ ಇರಲಿ ಎಚ್ಚರ: ಖರೀದಿ ನೆಪದಲ್ಲಿ ಕ್ಯೂಆರ್‌ ಕೋಡ್‌ ಕಳುಹಿಸಿ ವಂಚನೆ

ಸಾರಾಂಶ

1 ಲಕ್ಷ ದೋಚಿದ ಸೈಬರ್‌ ಖದೀಮರು,ದೂರು ದಾಖಲು| ಆನ್‌ಲೈನ್‌ ಮೂಲಕ ಹಣ ಸಂದಾಯ ಮಾಡುವುದಾಗಿ ಹೇಳಿ, ಮೊಬೈಲ್‌ಗೆ ಕ್ಯೂಆರ್‌ ಕೋಡ್‌ ಕಳುಹಿಸಿದ್ದ ಖದೀಮರು| ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದ ಪೊಲೀಸರು| 

ಬೆಂಗಳೂರು(ನ.04): ಹಳೇ ಹಾಸಿಗೆಗಳನ್ನು ಆನ್‌ಲೈನ್‌ ಮಾರ್ಕೆಟ್‌ನಲ್ಲಿ ಮಾರಾಟಕ್ಕೆ ಮುಂದಾಗಿದ್ದ ಯುವತಿಯರ ಬ್ಯಾಂಕ್‌ ಖಾತೆಯಿಂದ ಸೈಬರ್‌ ವಂಚಕರು ಒಂದು ಲಕ್ಷ ರು.ಕನ್ನ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕಸವನಹಳ್ಳಿ ನಿವಾಸಿ ತೇಜಸ್ವಿ ಸಿಂಗ್‌ ಮತ್ತು ಸಪ್ನಾ ವಂಚನೆಗೊಳಗಾಗಿದ್ದು, ಈ ಸಂಬಂಧ ಕನ್ಹಯ್ಯ ಕುಮಾರ್‌ ಮತ್ತು ಉದಯ್‌ಭಾನ್‌ ಸಿಂಗ್‌ ಎಂಬುವರ ವಿರುದ್ಧ ವೈಟ್‌ಫೀಲ್ಡ್‌ ವಿಭಾಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

ತೇಜಸ್ವಿ ಸಿಂಗ್‌ ಹಾಗೂ ಸಪ್ನಾ ಅವರು ಹಳೇ ಹಾಸಿಗೆಗಳನ್ನು ಮಾರಾಟ ಮಾಡಲು ಒಎಲ್‌ಎಕ್ಸ್‌ನಲ್ಲಿ ಜಾಹೀರಾತು ಪ್ರಕಟಿಸಿದ್ದರು. ಇದನ್ನು ಗಮನಿಸಿ ಕರೆ ಮಾಡಿದ್ದ ಅಪರಿಚಿತರು, ಹಾಸಿಗೆಗಳನ್ನು ಖರೀದಿಸುತ್ತೇವೆ. ಆನ್‌ಲೈನ್‌ ಮೂಲಕ ಹಣ ಸಂದಾಯ ಮಾಡುವುದಾಗಿ ಹೇಳಿ, ಮೊಬೈಲ್‌ಗೆ ಕ್ಯೂಆರ್‌ ಕೋಡ್‌ ಕಳುಹಿಸಿದ್ದರು.

ಆನ್‌ಲೈನ್‌ ಶಾಪಿಂಗ್ ಮಾಡೋ ಮುನ್ನ ಇರಲಿ ಎಚ್ಚರ: ಐ ಫೋನ್‌ ಬದಲು ಬಂದಿದ್ದೇ ಬೇರೆ?

ಅದನ್ನು ಸ್ಕ್ಯಾನ್‌ ಮಾಡಿದ ತೇಜಸ್ವಿ ಸಿಂಗ್‌ ಅವರ ಬ್ಯಾಂಕ್‌ ಖಾತೆಯಿಂದ ಹಂತ ಹಂತವಾಗಿ 46,900 ಬೇರೆ ಖಾತೆಗೆ ವರ್ಗಾವಣೆಯಾಗಿದೆ. ಇದೇ ರೀತಿ ಸಪ್ನಾ ಅವರ ಬ್ಯಾಂಕ್‌ ಖಾತೆಯಿಂದಲೂ 60 ಸಾವಿರ ಕಡಿತವಾಗಿದೆ. ಈ ಬಗ್ಗೆ ವಿಚಾರಿಸಲು ಕರೆ ಮಾಡಿದಾಗ, ಸಂಪರ್ಕಕ್ಕೆ ಸಿಕ್ಕಿಲ್ಲ. ಸೈಬರ್‌ ವಂಚನೆ ಎಂಬುದು ಗೊತ್ತಾಗಿ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ