ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಹೋಗಿ 45000 ಕಳಕೊಂಡ ಪುಣ್ಯಾತ್ಮ..!

Kannadaprabha News   | Asianet News
Published : Apr 25, 2021, 07:45 AM IST
ಆನ್‌ಲೈನ್‌ನಲ್ಲಿ ಮದ್ಯ ಖರೀದಿಸಲು ಹೋಗಿ 45000 ಕಳಕೊಂಡ ಪುಣ್ಯಾತ್ಮ..!

ಸಾರಾಂಶ

ಯತ್ನಿಸಿದವನಿಗೆ  ವಂಚನೆ| ಮನೆಗೇ ಮದ್ಯ ಕೊಡೋದಾಗಿ ಜಾಹೀರಾತು| ಆನ್‌ಲೈನ್‌ನಲ್ಲಿ ಹುಡುಕಾಟ ನಡೆಸಿದಾಗ ಮದ್ಯವನ್ನು ಮನೆಗೆ ತಲುಪಿಸುವುದಾಗಿ ಅಮನ್‌ ದೀಪ್‌ ಜಾಹೀರಾತು ನೀಡಿದ್ದ ವಂಚಕ| ಮುಂಗಡ ಹಣ ಪಾವತಿ ಮಾಡಬೇಕೆಂದು ಹಂತ ಹಂತವಾಗಿ 44,700 ಪಾವತಿ| 

ಬೆಂಗಳೂರು(ಏ.25): ಕೊರೋನಾ ಭೀತಿ ಹಿನ್ನೆಲೆಯಲ್ಲಿ ಮನೆಯಿಂದಲೇ ಮದ್ಯ ಖರೀದಿಗೆ ಯತ್ನಿಸಿದ ಗ್ರಾಹಕರೊಬ್ಬರಿಗೆ ಸೈಬರ್‌ ಕಳ್ಳರು ಟೋಪಿ ಹಾಕಿದ್ದಾರೆ.

ವಂಚನೆಗೆ ಒಳಗಾಗಿರುವ ಎಲೆಕ್ಟ್ರಾನಿಕ್‌ ಸಿಟಿಯ ರಾಜರ್ಷಿ ಜೈನ್‌ ಎಂಬುವರು ನೀಡಿದ ದೂರಿನ ಮೇರೆಗೆ ಆರೋಪಿ ಅಮನ್‌ ದೀಪ್‌ ವಿರುದ್ಧ ಆಗ್ನೇಯ ವಿಭಾಗದ ಸಿಇಎನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನ ಮರಳೋ ಜಾತ್ರೆ ಮರಳೋ: ಜೈ ಶ್ರೀರಾಮ್‌ ಘೋಷಣೆ ಕೂಗಿಸಿ ಚಿನ್ನಾಭರಣ ಎಗರಿಸಿದ..!

ಕೊರೋನಾ ಸೋಂಕಿನ ಭೀತಿಯಿಂದ ಮನೆಯಲ್ಲಿಯೇ ಉಳಿದುಕೊಂಡಿದ್ದ ರಾಜರ್ಷಿ, ಆನ್‌ಲೈನ್‌ನಲ್ಲಿ ಹುಡುಕಾಟ ನಡೆಸಿದಾಗ ಮದ್ಯವನ್ನು ಮನೆಗೆ ತಲುಪಿಸುವುದಾಗಿ ಅಮನ್‌ ದೀಪ್‌ ಜಾಹೀರಾತು ನೀಡಿದ್ದ. ಇದನ್ನು ಗಮನಿಸಿದ ರಾಜರ್ಷಿ, ಆರ್ಡರ್‌ ಮಾಡಿದ್ದರು. ಅದಕ್ಕೆ ಅಮನ್‌ ದೀಪ್‌, ಮುಂಗಡ ಹಣ ಪಾವತಿ ಮಾಡಬೇಕೆಂದು ಹಂತ ಹಂತವಾಗಿ 44,700 ಪಾವತಿ ಮಾಡಿಸಿಕೊಂಡಿದ್ದಾರೆ. ಮತ್ತೆ ಹಣ ಕೇಳಿದಾಗ ಅನುಮಾನ ಬಂದು ರಾಜರ್ಷಿ, ವಾಪಸ್‌ ಹಣ ಕೇಳಿದ್ದಾರೆ. ಅಷ್ಟೊತ್ತಿಗೆ ಆರೋಪಿ ಮೊಬೈಲ್‌ ನಂಬರ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದಾನೆ. ಕೊನೆಗೆ ವಂಚನೆಗೆ ಒಳಗಾಗಿರುವುದು ಖಚಿತವಾಗಿ ಠಾಣೆಗೆ ಬಂದು ದೂರು ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?