ಉತ್ತರ ಕನ್ನಡ: ಅಂಕೋಲಾ ಬ್ಯಾಂಕಲ್ಲಿ ಹ್ಯಾಕ್‌ ಮಾಡಿ 33 ಲಕ್ಷ ದೋಚಿದ ಸೈಬರ್‌ ಕಳ್ಳರು

Published : Jan 30, 2025, 11:02 AM IST
ಉತ್ತರ ಕನ್ನಡ: ಅಂಕೋಲಾ ಬ್ಯಾಂಕಲ್ಲಿ ಹ್ಯಾಕ್‌ ಮಾಡಿ 33 ಲಕ್ಷ ದೋಚಿದ ಸೈಬರ್‌ ಕಳ್ಳರು

ಸಾರಾಂಶ

ಆರ್‌ಟಿಜಿಎಸ್ ಮೂಲಕ ಬೇರೆ ಖಾತೆದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್‌ ಕಳ್ಳರು ಹ್ಯಾಕ್‌ ಮಾಡಿ 33,42,845 ಲಕ್ಷವನ್ನು ದೋಚಿರುವ ಘಟನೆ ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ನಡೆದಿದೆ.

ಅಂಕೋಲಾ(ಜ.30): ಆರ್‌ಟಿಜಿಎಸ್ ಮೂಲಕ ಬೇರೆ ಖಾತೆದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್‌ ಕಳ್ಳರು ಹ್ಯಾಕ್‌ ಮಾಡಿ 33,42,845 ಲಕ್ಷವನ್ನು ದೋಚಿರುವ ಘಟನೆ ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ ನಡೆದಿದೆ. ಜ.24, 27ರಂದು ನಡೆದಿದೆ ಎಂದು ಅಂದಾಜಿಸಲಾಗಿದೆ.

ಕಾರವಾರದಲ್ಲಿ ಸೈಬರ್‌ ಕ್ರೈಂ ವಿಭಾಗದ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಕೋಲಾ ಕೇಂದ್ರ ಕಚೇರಿಯಲ್ಲಿ ಖಾತೆದಾರರಾದ ಮೀನಾಕ್ಷಿ ಕೃಷ್ಣಗೌಡರಿಂದ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಆರ್‌ಟಿಜಿಎಸ್ ಮಾಡಿದ ₹5 ಲಕ್ಷ, ವೆಂಕ ಟೇಶ್ವರ ಗ್ಯಾಸ್ ಸೆಂಟರ್‌ನಿಂದ ವೆಂಕಟೇಶ್ವರ ಗ್ರಾಸ್ ಸೆಂಟರ್‌ಗೆ ಆರ್‌ಟಿಜಿಎಸ್‌ ₹5,46,000 ಲಕ್ಷ, ಇವರದೇ ಮತ್ತೊಂದು ಖಾತೆಗೆ ₹6,60,000 ಲಕ್ಷ, ಸವಿತಾ ವೆಂಕಟರಮಣ ನಾಯ್ಕರಿಂದ ಟಾಫೆ ಆಕೆಸ್ ಲಿ.ಗೆ ಆರ್‌ಟಿಜಿಎಸ್ ಮಾಡಿದ ₹16, 36,895 ಲಕ್ಷ ಸೇರಿ ಒಟ್ಟು ₹33,42,895 ಲಕ್ಷ ಹಣವು ಖಾತೆಗೆ ಜಮೆ ಆಗದೇ ಹ್ಯಾಕ್ ಆಗಿದೆ ಎಂದು ದೂರು ನೀಡಲಾಗಿದೆ.

ಮುಂಬೈಯಲ್ಲಿ ದೋಸ್ತಿ, ಮಂಗ್ಳೂರಲ್ಲಿ ದರೋಡೆ: ಕೋಟೆಕಾರ್‌ ಬ್ಯಾಂಕ್‌ ರಾಬರಿಯ ರೋಚಕ ಕಥೆ!

ಎಟಿಎಂ ಅನ್ನೇ ಹೊತ್ತೊಯ್ದರು!

ಹಾಸನ:ದುಷ್ಕರ್ಮಿಗಳು ಇಂಡಿಯಾ ಒನ್ ಎಟಿಎಂ ಯಂತ್ರವನ್ನೇ ಕಳವು ಮಾಡಿರುವ ಘಟನೆ ಮಂಗಳವಾರ ಹಾಸನದ ಪಂಚಮುಖಿ ಬೃಹತ್ ಆಂಜನೇಯ ವಿಗ್ರಹದ ಸಮೀಪ ದಲ್ಲೇ ಇರುವ ಇಂಡಿಯಾ ಒನ್ ಎಟಿಎಂ ಯಂತ್ರ ಕಳ್ಳರು ಕದ್ದೊ ಯ್ದಿದ್ದಾರೆ. ಮೊದಲೇ ಸಂಚು ಮಾಡಿ ಎಟಿಎಂ ಪಕ್ಕದಲ್ಲಿರುವ ಮನೆಗಳ ಚಿಲಕ ಹಾಕಿ ಎಟಿಎಂಗೆ ನುಗ್ಗಿದ್ದಾರೆ. ಸೈರನ್ ಬಾರದಂತೆ ನಿಗಾ ವಹಿಸಿದ್ದು, ನಂತರ ಹಣದ ಸಮೇತ ಎಟಿಎಂ ಸಮೇತ ಬಾಕ್ಸನ್ನೇ ಕದ್ದೊಯ್ದಿದ್ದಾರೆ. ಬೆಳಗಿನ ವೇಳೆ ಜನರಿಗೆ ಎಟಿಎಂ ಕಳ್ಳತನ ಆಗಿರುವ ಬಗ್ಗೆ ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು