
ಕೆಆರ್ ಪುರ (ಏ.2): ಸಿಲಿಂಡರ್ ಶೇಖರಿಸಿಟ್ಟಿದ್ದ ಸಣ್ಣ ಕೊಠಡಿಗಳಲ್ಲಿ ಏಕಾಏಕಿ ಸ್ಫೋಟಗೊಂಡ ಘಟನೆ ಬೆಂಗಳೂರಿನ ಪೂರ್ವ ತಾಲೂಕಿನ ಬಿದರಹಳ್ಳಿಯಲ್ಲಿ ನಡೆದಿದ್ದು, ಸ್ಫೋಟದ ತೀವ್ರತೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಮುನಿಸ್ವಾಮಪ್ಪ ಎಂಬುವವರಿಗೆ ಸೇರಿದ ಜಾಗದಲ್ಲಿ ಶಿವಣ್ಣ ಎಂಬುವವರು ಆರಂಭಿಸಿದ್ದ ಸಿಲಿಂಡರ್ ಸರ್ವಿಸ್. ಕೊಠಡಿಯಲ್ಲಿ ಹತ್ತಕ್ಕೂ ವಿವಿಧ ಕಂಪನಿಗಳ ಸಿಲಿಂಡರ್ ಶೇಖರಣೆ ಮಾಡಲಾಗಿತ್ತು. ಯಾವುದೇ ಪರವಾನಗಿ ಇಲ್ಲದೆ ವಿವಿಧ ಕಂಪನಿಗಳ ಸಿಲಿಂಡರ್ ಶೇಖರಣೆ ಮಾಡಲಾಗಿತ್ತು. ಆದರೆ ಏಕಾಏಕಿ ಸ್ಫೋಟಗೊಂಡು ಸ್ಫೋಟದ ಭೀಕರತೆ ಆಕಾಶಕ್ಕೆ ಹಾರಿ ಸಿಲಿಂಡರ್ಗಳು. ಭಾರೀ ಶಬ್ದಕ್ಕೆ ಅಕ್ಕಪಕ್ಕದ ಜನ ಬೆಚ್ಚಿಬಿದ್ದು ಓಡಿದ್ದಾರೆ. ಈ ಘಟನೆಯಲ್ಲಿ ಓರ್ವನಿಗೆ ಸಣ್ಣಪುಟ್ಟ ಗಾಯವಾಗಿದೆ.
ವಿಜಯಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ನಾಲ್ವರು ಗಂಭೀರ ಗಾಯ!
.
ಅಕ್ರಮವಾಗಿ ಸಿಲಿಂಡರ್ ಗಳ ಶೇಖರಿಸಿದ ಮಾಲೀಕ
ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಮಾಹಿತಿ ಪಡೆಯದೆ ಸಿಲಿಂಡರ್ ಗಳ ಶೇಖರಣೆ ಮಾಡಿರುವ ಮಾಲೀಕ. ಅಕ್ರಮವಾಗಿ ಸಿಲಿಂಡರ್ ಗಳ ರಿಫೀಲಿಂಗ್ ಮಾಡುತ್ತಿರುವ ಬಗ್ಗೆ ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಬುಧವಾರವಷ್ಟೇ ಆರಂಭಿಸಿದ ಸಿಲಿಂಡರ್ ಗೋಡೋನ್. ಹೋಟೆಲ್ ಮಾಡುವ ಉದ್ದೇಶದಿಂದ ಜಾಗ ಪಡೆದು , ಅಕ್ರಮ ಗ್ಯಾಸ್ ರಿಫೀಲಿಂಗ್ ಮಾಡುತ್ತಿದ್ದ ಮಾಲೀಕ. ಆವಲಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ