ಪೊಲೀಸ್ ದೂರು ನೀಡಿದ್ದಕ್ಕೆ ಹಲ್ಲೆ ಮಾಡಿ ಮೂತ್ರ ಕುಡಿಸಲು ಮುಂದಾದ್ರು!

Published : Oct 13, 2020, 06:32 PM IST
ಪೊಲೀಸ್ ದೂರು ನೀಡಿದ್ದಕ್ಕೆ ಹಲ್ಲೆ ಮಾಡಿ ಮೂತ್ರ ಕುಡಿಸಲು ಮುಂದಾದ್ರು!

ಸಾರಾಂಶ

ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ/ ದಲಿತ ವ್ಯಕ್ತಿಯ ಮೇಲೆ ಹಲ್ಲೆ/ ಮೂತ್ರ ಕುಡಿಸಲು ಮುಂದಾದ ಆರೋಪಿಗಳು/ ಪೊಲೀಸ್ ದೂರು ನೀಡಿದ್ದೆ ಕಾರಣ

ಲಕ್ನೋ(ಅ. 13)   ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದುಹೋಗಿದೆ. ಪೊಲೀಸ್ ದೂರು ನೀಡಿದ ಎಂಬ ಕಾರಣಕ್ಕೆ ದಲಿತರೊಬ್ಬರ  ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಮೂತ್ರ ಕುಡಿಸಲಾಗಿದೆ.

ಉತ್ತರ ಪ್ರದೇಶದ ಲಲಿತಪುರದ ರೋಡಾ ಗ್ರಾಮದಲ್ಲಿ 65 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ದೌರ್ಜನ್ಯ ನಡೆದಿರುವುದು ವರದಿಯಾಗಿದೆ.

ಆರೋಪಿ ಸೋನು ಯಾದವ್ ಕೆಲವು ದಿನಗಳ ಹಿಂದೆ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯ ಮಗನ ಮೇಲೆ ಹಲ್ಲೆ ಕೊಡಲಿಯಿಂದ  ಹಲ್ಲೆ ಮಾಡಿದ್ದ. ಇದಾದ ಮೇಲೆ ತಂದೆ ಮಗ ಪೊಲೀಸರಿಗೆ ದೂರು ನೀಡಿದ್ದರು.  ಆದರೆ ಸೋನು ಯಾದವ್ ದೂರು ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಬೆದರಿಕೆ ಹಾಕಿದ್ದ.

ಪೈಶಾಚಿಕ ಕೃತ್ಯ; ಅಪ್ರಾಪ್ತೆ ಮೇಲೆ ಆಸಿಡ್ ಎರಚಿದ್ರು

ಇದ್ದಕ್ಕಿದಂತೆ ತಂದೆ ಅಮರ್ ಮೇಲೆ  ಮಂಗಳವಾರ ದಾಳಿ ಮಾಡಿದ ಯಾದವ್ ಕೋಲಿನಿಂದ ಹೊಡೆದಿದ್ದು ಅಲ್ಲದೆ ಮೂತ್ರ ಕುಡಿಸಲು ಮುಂದಾಗಿದ್ದಾನೆ. ಸಂತ್ರಸ್ತ ವ್ಯಕ್ತಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ಲಲಿತಪುರ ಎಸ್ ಪಿ ಮಿರ್ಜಾ ಮಂಜಾರ್ ಬೇಗ್ ಅವರು ಎಫ್ಐಆರ್ ದಾಖಲಿಸಲಾಗಿದ್ದು, ಯಾದವ್ ಹುಡುಕಾಟ ನಡೆಯುತ್ತಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿ ಊರಿನ ಇಬ್ಬರು ಪ್ರಭಾವಿಗಳನ್ನು ಬಂಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಟಲ್ ಅರೆಸ್ಟ್‌ಗೆ ಹೆದರಿ ಕೋಟಿಗಟ್ಟಲೆ ಬೆಲೆಬಾಳುವ ಸೈಟ್, ಮನೆ ಮಾರಿದ ಬೆಂಗಳೂರು ಮಹಿಳಾ ಟೆಕ್ಕಿ!
ಮೂಡಿಗೆರೆ: ಮನೆ ಭೋಗ್ಯ ವಿಚಾರಕ್ಕೆ ಜಗಳ, ಮಹಿಳೆಯ ಜಡೆ ಹಿಡಿದು ಎಳೆದು ಬಿಸಾಡಿ ಹಲ್ಲೆ.!