ಬೆಳಗಾವಿ ಘಟನೆ ಬೆನ್ನಲ್ಲೇ ಮತ್ತೊಂದು ಅಮಾನವೀಯ ಕೃತ್ಯ; ಪ್ರೀತಿಸಿದವನೊಂದಿಗೆ ಓಡಿಹೋದ ಮಗಳು; ಯುವಕನ ಕುಟುಂಬಸ್ಥರಿಗೆ ಥಳಿತ!

Published : Dec 19, 2023, 01:31 PM ISTUpdated : Dec 19, 2023, 03:08 PM IST
ಬೆಳಗಾವಿ ಘಟನೆ ಬೆನ್ನಲ್ಲೇ ಮತ್ತೊಂದು ಅಮಾನವೀಯ ಕೃತ್ಯ; ಪ್ರೀತಿಸಿದವನೊಂದಿಗೆ ಓಡಿಹೋದ ಮಗಳು; ಯುವಕನ ಕುಟುಂಬಸ್ಥರಿಗೆ ಥಳಿತ!

ಸಾರಾಂಶ

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಬೆಳಗಾವಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣವನ್ನು ನೆನಪಿಸುವ ಆತಂಕಕಾರಿ ಘಟನೆಯೊಂದು ಮಂಗಳವಾರ ಹಾವೇರಿ ಜಿಲ್ಲೆಯಲ್ಲಿ ವರದಿಯಾಗಿದೆ.

ಹಾವೇರಿ (ಡಿ.19): ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಬೆಳಗಾವಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣವನ್ನು ನೆನಪಿಸುವ ಆತಂಕಕಾರಿ ಘಟನೆಯೊಂದು ಮಂಗಳವಾರ ಹಾವೇರಿ ಜಿಲ್ಲೆಯಲ್ಲಿ ವರದಿಯಾಗಿದೆ.

ತಮ್ಮ ಮಗಳು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಪೋಷಕರು ಮತ್ತು ಸಂಬಂಧಿಕರು ಸೋಮವಾರ ರಾತ್ರಿ ಯುವಕನ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಮನೆಗೆ ನುಗ್ಗಿ ಯುವಕನ ಚಿಕ್ಕಪ್ಪನನ್ನು ಅಪಹರಿಸಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಚಳಗೇರಿ ಗ್ರಾಮದ ಸಂಗೀತಾ ಡಿಸೆಂಬರ್ 15ರಂದು ಮುದೇನೂರು ಗ್ರಾಮದ ಪ್ರಕಾಶ್ ಎಂಬುವವರ ಜತೆ ಓಡಿ ಹೋಗಿದ್ದರು. ಎರಡೂ ಕುಟುಂಬಗಳ ತೀವ್ರ ವಿರೋಧದ ನಡುವೆಯೂ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ.

 

ಬೆಳಗಾವಿ ಮಹಿಳೆಗೆ ಹಲ್ಲೆ ಪ್ರಕರಣ: ಮೂಕಪ್ರೇಕ್ಷಕರಾಗಿದ್ದ ಗ್ರಾಮಸ್ಥರಿಗೆ 'ಪುಂಡ ದಂಡ' ಸಂಗ್ರಹಿಸಿ; ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ಪ್ರಕಾಶ್ ಅವರ ಪೋಷಕರು ಮತ್ತು ಸಂಬಂಧಿಕರು ಆತನಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಯುವತಿ ಮನೆಯವರು ಶಂಕಿಸಿದ್ದಾರೆ. ಹೀಗಾಗಿ, ಪ್ರಕಾಶ್ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. 

ಕಾಶ್ ಚಿಕ್ಕಪ್ಪ ಪ್ರಶಾಂತ್ ಅವರನ್ನು ತಮ್ಮ ವಾಹನದಲ್ಲಿ ರಾಣೇಬೆನ್ನೂರು ಪಟ್ಟಣಕ್ಕೆ ತಮ್ಮೊಂದಿಗೆ ಕರೆತಂದಿದ್ದಾರೆ ಎನ್ನಲಾಗಿದೆ.
ವರದಿಗಳ ಪ್ರಕಾರ, ಪ್ರಶಾಂತ್ ಅವರ ಅಂಗಿಯನ್ನು ಬಿಚ್ಚಿ ಹಲವು ಬಾರಿ ಥಳಿಸಲಾಗಿದೆ. ಪೊಲೀಸ್ ಠಾಣೆ ಎದುರಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಯುವಕನ ಮನೆಯವರು ರಾಣೆಬೆನ್ನೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಬೆಳಗಾವಿ ಸಂತ್ರಸ್ಥೆ ಮಹಿಳೆ ಕೇಸ್ ವಿಚಾರಣೆಯಲ್ಲಿ ಮಾನವೀಯತೆ, ಸ್ತ್ರೀ ಗೌರವ ಎತ್ತಿಹಿಡಿದ ಹೈಕೋರ್ಟ್!

ಈ ಹಿಂದೆ ಎರಡು ಕುಟುಂಬಗಳು ಸಾಲದ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದವು ಎಂದು ಮೂಲಗಳು ತಿಳಿಸಿವೆ.

ದಂಪತಿ ಎಲ್ಲಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಯುವತಿ ಮನೆಯವರು ಹಲಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು