ಮಗಳ ಅನುಮಾನಾಸ್ಪದ ಸಾವು; ನ್ಯಾಯಕ್ಕಾಗಿ ಎಸ್‌ಪಿ ಕಚೇರಿ ಮುಂದೆ ಕುಟುಂಬಸ್ಥರು ಕಣ್ಣೀರು!

Published : Jul 17, 2023, 01:45 PM IST
ಮಗಳ ಅನುಮಾನಾಸ್ಪದ ಸಾವು; ನ್ಯಾಯಕ್ಕಾಗಿ ಎಸ್‌ಪಿ ಕಚೇರಿ ಮುಂದೆ ಕುಟುಂಬಸ್ಥರು ಕಣ್ಣೀರು!

ಸಾರಾಂಶ

ಮಂಡ್ಯ ಮೂಲದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು (ಜು.17) : ಮಂಡ್ಯ ಮೂಲದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ರುಕ್ಮಿಣಿ  (31) ಮೃತ ದುರ್ದೈವಿ. ನಿನ್ನೆ ಮಧ್ಯಾಹ್ನ 12 ಗಂಟೆಗೆ ಸಾವನ್ನಪ್ಪಿರುವ ರುಕ್ಮಿಣಿ.
 ಮಗಳ ಸಾವಿನ ಸುದ್ದಿ ತಿಳಿದು ಮಂಡ್ಯದಿಂದ ಬಂದ ರುಕ್ಮಿಣಿ ಕುಟುಂಬಸ್ಥರಿಂದ ಗೋಳಾಟ. ಇದು ಸಾವಲ್ಲ, ಕೊಲೆ ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಎಸ್ಪಿ ಕಚೇರಿ ಮುಂದೆ ಕಣ್ಣೀರಿಟ್ಟ ಕುಟುಂಬ

ಮಂಡ್ಯ ಜಿಲ್ಲೆ ರಾಗಿಮುದ್ದನಹಳ್ಳಿ ಮೂಲದ ರುಕ್ಮಿಣಿ. ಕಳೆದ 13 ವರ್ಷಗಳ ಹಿಂದೆ ಕಡೂರಿನ ಕಣ್ಣನ್ ಗೆ ಮದುವೆ ಮಾಡಿಕೊಟ್ಟಿದ್ದ ಸಂಬಂಧಿಕರು. ಆದರೆ ಮದುವೆ ಆದಾಗಿನಿಂದಲೂ ಅತ್ತೆ-ಮಾವ, ಗಂಡನಿಂದ ಕಿರುಕುಳ ಕೊಡುತ್ತಿದ್ದರೆಂದು ರುಕ್ಷಿಣಿ ಗಂಡ ಕಣ್ಣನ್ ವಿರುದ್ಧ ಕೊಲೆ ಆರೋಪ ಮಾಡುತ್ತಿರುವ ಕುಟುಂಬಸ್ಥರು. 

Chikkaballapur: ಕಾಲೇಜಿನ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ರುಕ್ಮಿಣಿ ಸಾವಿನ ನಂತರ ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿರುವ ಕಣ್ಣನ್  ಆಡಿಯೋ ಲಭ್ಯವಾಗಿದೆ. ಆದರೂ ದೂರು ದಾಖಲಿಸಿಕೊಳ್ಳದೇ ಕಡೂರು ಪೊಲೀಸರು ಆತ್ಮಹತ್ಯೆ ಪ್ರಕರಣವೆಂದು ಕೊಲೆ ಕೇಸ್ ಮುಚ್ಚಿಹಾಕಲು ಯತ್ನಿಸಿದ್ದಾರೆ ಆರೋಪ. ಹೀಗಾಗಿ ನ್ಯಾಯಕ್ಕಾಗಿ ಎಸ್‌ಪಿ ಕಚೇರಿ ಮುಂದೆ ಅಂಗಲಾಚುತ್ತಿರುವ ಕುಟಂಬ. ಮಗಳ ಸಾವಿಗೆ ನ್ಯಾಯ ನೀಡುವಂತೆ ಕಣ್ಣೀರಿಟ್ಟ ಕುಟುಂಬ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!