ಕೈ ಬಿಡಿ ಎಂದರೂ ಬಿಡದೆ ಎಳೆದಾಡಿ ಪುಂಡರು, ಲೇಡಿ ಸಿಪಿಐ ಮೇಲೆ ಅಸಭ್ಯವಾಗಿ ವರ್ತಿಸಿದ ಹುಸೇನ್ ಗ್ಯಾಂಗ್ ವಿಡಿಯೋ ವೈರಲ್!

Published : Feb 01, 2026, 04:41 PM IST
Davanagere congress leader s sons assaults lady cpi video viral

ಸಾರಾಂಶ

ದಾವಣಗೆರೆಯಲ್ಲಿ, ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಮಹಿಳಾ ಸಿಪಿಐ ಗಾಯತ್ರಿ ಸೇರಿದಂತೆ ಪೊಲೀಸ್ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಪುತ್ರರು ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು, ಓರ್ವ ಆರೋಪಿ ಬಂಧನ.

ದಾವಣಗೆರೆ (ಫೆ. 1): ಬೆಣ್ಣೆ ನಗರಿ ದಾವಣಗೆರೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ಸಾಕ್ಷಿ ಎಂಬ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ ಪೊಲೀಸ್ ಅಧಿಕಾರಿಗಳ ಮೇಲೆ ಕಾಂಗ್ರೆಸ್ ಮುಖಂಡನ ರೌಡಿ ಪುತ್ರ ಮತ್ತವನ ಗ್ಯಾಂಗ್ ಅಟ್ಟಹಾಸ ಮೆರೆದಿದ್ದಾರೆ.

ಮಹಿಳಾ ಸಿಪಿಐ ಮೇಲೆ ಹಲ್ಲೆ ಯತ್ನ: ವೈರಲ್ ಆಯ್ತು ವಿಡಿಯೋ!

ದಾವಣಗೆರೆ ನಗರದ ಇಮಾಮ್ ನಗರದಲ್ಲಿರುವ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಎಂಬುವವರ ಮನೆಯ ಮುಂದೆ ನಿನ್ನೆ ಈ ಅಮಾನವೀಯ ಘಟನೆ ನಡೆದಿದೆ. ಬಡಾವಣೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗಾಯತ್ರಿ ಅವರು ಕರ್ತವ್ಯದ ಮೇಲೆ ತೆರಳಿದ್ದಾಗ, ಅವರ ಮೇಲೆಯೇ ಹಲ್ಲೆಗೆ ಯತ್ನಿಸಲಾಗಿದೆ. ಇನ್ಸ್‌ಪೆಕ್ಟರ್ ಅವರು 'ಕೈ ಬಿಡಿ.. ಕೈ ಬಿಡಿ..' ಎಂದು ಕಿರುಚಾಡುತ್ತಿದ್ದರೂ ಪುಂಡರು ಕಿಂಚಿತ್ತೂ ಕೇರ್ ಮಾಡದೆ ದರ್ಪ ತೋರಿದ್ದಾರೆ. ಪೊಲೀಸ್ ಪೇದೆ ಹರೀಶ್ ಕೊರಳಪಟ್ಟಿ ಹಿಡಿದಿರುವ ಆತಂಕಕಾರಿ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ.

ಕಾಂಗ್ರೆಸ್ ಮುಖಂಡನ ಪುತ್ರನಿಂದ ಹಲ್ಲೆ ಪೇದೆಗಳಿಗೆ ಗಂಭೀರ ಗಾಯ

ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಪುತ್ರರಾದ ಹಸನ್ ಮತ್ತು ಹುಸೇನ್ ಎಂಬುವವರೇ ಈ ಕೃತ್ಯವೆಸಗಿದ ರೌಡಿಗಳು. ಸಿಪಿಐ ಗಾಯತ್ರಿ ಅವರ ಮೊಬೈಲ್ ಕಿತ್ತುಕೊಂಡು ಅಸಭ್ಯವಾಗಿ ವರ್ತಿಸಿದ ಪುಂಡರು, ಜೊತೆಗಿದ್ದ ಪೊಲೀಸ್ ಪೇದೆಗಳ ಮುಖದ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ರೌಡಿಗಳ ಅಟ್ಟಹಾಸಕ್ಕೆ ಪೊಲೀಸ್ ಪೇದೆಗಳು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರಿಂದ ಸ್ವಯಂ ಪ್ರೇರಿತ ದೂರು: ಓರ್ವನ ಬಂಧನ

ಕರ್ತವ್ಯನಿರತ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಾವಣಗೆರೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಸದ್ಯ ಹಲ್ಲೆ ನಡೆಸಿದ ಆರೋಪಿಗಳಲ್ಲಿ ಒಬ್ಬನಾದ ಕಾಂಗ್ರೆಸ್ ಮುಖಂಡನ ಪುತ್ರ ಹಸನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಹುಸೇನ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಪುಟ್ಟ ಕಾರಣಕ್ಕೆಲ್ಲಾ ಆತ್ಮ*ಹತ್ಯೆ ಮಾಡಿಕೊಳ್ಳಲ್ಲ, ಹೇಳಲಾಗದ್ದೇ ಇತ್ತು; ನೆಟ್ಟಿಗರು ಯಾಕೆ ಹೀಗಂತಿದಾರೆ ಗೊತ್ತಾ?
ಕ್ಯಾಬ್ ತಗೋಬೇಕೆಂದು ಗೂಡ್ಸ್ ಆಟೋ ಮಾರಿದ ಸ್ನೇಹಿತನ ಹಣಕ್ಕೆ ಸ್ಕೆಚ್; ಅಣ್ಣನ ಪ್ರಾಣ ಹೋಗೋದು ಜಸ್ಟ್ ಮಿಸ್!