ಪ್ರಿಯತಮೆ ದೂರ ಆಗಿದ್ದಕ್ಕೆ ನೊಂದ ದಾವಣಗೆರೆ ಮೂಲದ ಪ್ರಿಯಕರ ಬೆಂಗಳೂರಿನಲ್ಲಿ ಸಾವು!

Published : Mar 08, 2024, 05:28 PM IST
 ಪ್ರಿಯತಮೆ ದೂರ ಆಗಿದ್ದಕ್ಕೆ ನೊಂದ ದಾವಣಗೆರೆ ಮೂಲದ ಪ್ರಿಯಕರ ಬೆಂಗಳೂರಿನಲ್ಲಿ ಸಾವು!

ಸಾರಾಂಶ

ಬೆಂಗಳೂರಿನಲ್ಲಿ ಪ್ರಿಯತಮೆ ದೂರ ಆಗಿದ್ದಕ್ಕೆ ನೊಂದ ಪ್ರಿಯಕರ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುದೈವಿ ದಾವಣಗೆರೆ ಮೂಲದವನೆಂದು ತಿಳಿದುಬಂದಿದೆ.

ಬೆಂಗಳೂರು (ಮಾ.8): ಬೆಂಗಳೂರಿನಲ್ಲಿ ಪ್ರಿಯತಮೆ ದೂರ ಆಗಿದ್ದಕ್ಕೆ ನೊಂದ ಪ್ರಿಯಕರ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿಯಾಗಿದ್ದು,  ಬೆಂಗಳೂರು ನಗರದ ನಂದಿನಿ ಲೇಔಟ್ ನಲ್ಲಿ ಘಟನೆ ನಡೆದಿದೆ.

ದಾವಣಗೆರೆ ಮೂಲದ ಚೇತನ್ ಎರಡು ವರ್ಷದಿಂದ ಜನನಿ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಇಬ್ಬರು ಪಿಯುಸಿ ಓದುವಾಗ  ಪರಿಚಯವಾಗಿ ಸ್ನೇಹವಾಗಿ ಸ್ನೇಹ  ಪ್ರೀತಿಗೆ ತಿರುಗಿತ್ತು. ಈ ವಿಷಯ ಹುಡುಗಿ ಕಡೆಯವರಿಗೆ ಗೊತ್ತಾಗಿತ್ತು. ಹುಡುಗಿಯ ಚಿಕ್ಕಪ್ಪ ಚೇತನ್ ಜೊತೆ ಮದುವೆಗೆ ಒಪ್ಪಿರಲಿಲ್ಲ.

ಪ್ರೇಮಿಗಳು ಹಲವು ಬಾರಿ ಭೇಟಿಯಾಗಿ ಓಡಾಡಿದ್ರು. ಕೆಲ ದಿನಗಳ ಹಿಂದೆ ನಮ್ಮ ಚಿಕ್ಕಪ್ಪ ಮದುವೆಗೆ ಒಪ್ಪುತ್ತಿಲ್ಲ ಎಂದು ಜನನಿ ಹೇಳಿದ್ದಳು.  ನೀನು ಬೇರೆ ಹುಡುಗಿ ಮದುವೆಯಾಗು ಎಂದು ಚೇತನ್‌ ಗೆ ಹೇಳಿದ್ದಳು. ಪ್ರಿಯತಮೆ ಜನನಿಯಿಂದ ದೂರವಾಗಿದಕ್ಕೆ ಮನನೊಂದಿದ್ದ ಚೇತನ್ ಈಗ ಸಾವು ಕಂಡಿದ್ದಾನೆ.

Rameshwaram Cafe Blast ಬೆಂಗಳೂರಲ್ಲಿ ಸ್ಫೋಟಿಸಿ, ಬಳ್ಳಾರಿಯಲ್ಲಿ ಓಡಾಟ! ಚಹರೆ ಕೊನೆಗೂ ಪತ್ತೆ!

ಪ್ರೀತಿ ಕಳೆದುಕೊಳ್ಳುವ ನೋವಿನಲ್ಲಿ  ನಿನ್ನೆ ರಾತ್ರಿ 11 ಗಂಟೆಗೆ  ಚೇತನ್ ಹುಡುಗಿ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದ. ಈ ವೇಳೆ ಜನನಿ ಸಿಗದಿದ್ರೆ, ಸಾಯುವುದಾಗಿ ಹೇಳಿದ್ದ. ಆಗ ಕತ್ತರಿಯಿಂದ ಹೊಟ್ಟೆಗೆ ಚೇತನ್ ತಿವಿದುಕೊಂಡಿದ್ದು, ಬಳಿಕ ಚೇತನ್ ತಂದೆ ತಾಯಿಗೆ ಜನನಿ ಕಡೆಯವರು ವಿಷಯ ತಿಳಿಸಿದ್ದರು.

ರಂಜಾನ್ ತಿಂಗಳು, ಶಾಲಾ ವೇಳಾಪಟ್ಟಿ ಬದಲಿಸಿ ರಾಜ್ಯ ಸರ್ಕಾರ ಸುತ್ತೋಲೆ

ಸ್ಥಳಕ್ಕೆ ಪೋಷಕರು ಬಂದು ನೋಡುವಾಗ ಆಟೋದಲ್ಲಿ ಚೇತನ್ ಬಿದ್ದಿದ್ದ, ಬಳಿಕ ನಾಗರಬಾವಿ ಖಾಸಗಿ ಆಸ್ಪತ್ರೆಗೆ ಚೇತನ್ ದಾಖಲಿಸಿದ್ರು. ಚಿಕಿತ್ಸೆ ಫಲಕಾರಿಯಾಗದೇ ಚೇತನ್ ಸಾವು ಕಂಡಿದ್ದಾನೆ. ಆದರೆ ಚೇತನ್ ಕುಟುಂಬಸ್ಥರು ಇದು ಕೊಲೆ ಎಂಬ  ಆರೋಪ ಮಾಡಿದ್ದಾರೆ.  ಹುಡುಗಿ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ನಂದಿನಿ ಲೇಔಟ್ ಪೊಲೀಸರು ಸದ್ಯ ಅನುಮಾನಸ್ಪಾದ ಸಾವು ಎಂದು ಪ್ರಕರಣ ದಾಖಲಸಿಕೊಂಡಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್