ರಾಮನಗರ: ಶೌಚಾಲಯ ಗುಂಡಿಗೆ ನವಜಾತ ಶಿಶು ಶವ ಪತ್ತೆ

Published : Nov 29, 2024, 09:45 AM IST
ರಾಮನಗರ: ಶೌಚಾಲಯ ಗುಂಡಿಗೆ ನವಜಾತ ಶಿಶು ಶವ ಪತ್ತೆ

ಸಾರಾಂಶ

ಆಸ್ಪತ್ರೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆಗೆ ಒಳಪಡಿಸಿ ಇನ್ನಷ್ಟು ವಿಚಾರಗಳು ತನಿಖೆಯಿಂದ ತಿಳಿದು ಬರಬೇಕಿದೆ. ಡಾ.ಚಂದ್ರಮ್ಮ ದಯಾನಂದ ಸಾಗರ್ ಆಸ್ಪತ್ರೆಯ ಆಡಳಿತ ವಿಭಾಗದ ವೈದ್ಯಕೀಯ ಅಧೀಕ್ಷಕ ಡಾ.ಎಸ್. ಮಧು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  

ಹಾರೋಹಳ್ಳಿ(ನ.29):  ನವಜಾತ ಶಿಶುವೊಂದನ್ನು ಶೌಚಾಲಯ ಗುಂಡಿಗೆ ಹಾಕಿ ಫ್ಲಶ್ ಮಾಡಿರುವ ಅಮಾನವೀಯ ಘಟನೆ ತಾಲೂಕಿನ ದೇವರಕಗ್ಗಲಹಳ್ಳಿಯಲ್ಲಿನ ದಯಾನಂದ ವಿವಿಯ ಡಾ.ಚಂದ್ರಮ್ಮ ದಯಾನಂದ ಸಾಗರ್‌ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಅಂಡ್ ರಿಸರ್ಚ್ ಸೆಂಟರ್‌ನಲ್ಲಿ ನಡೆದಿದೆ. 

ಆಗ ತಾನೆ ಜನಿಸಿದ ನವಜಾತ ಶಿಶುವನ್ನು ದುರುಳರು ಬುಧವಾರ ರಾತ್ರಿ 10.30ರ ಸಮಯದಲ್ಲಿ ಶೌಚಾಲಯದ ಗುಂಡಿಯಲ್ಲಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಆಸ್ಪತ್ರೆಯ ಎಫ್ ಬ್ಲಾಕ್ ಕಟ್ಟಡದ ನೆಲಮಹಡಿಯಲ್ಲಿರುವ ರೇಡಿಯಾಲಜಿ ಡಿಪಾರ್ಟ್‌ ಮೆಂಟ್ ಪಕ್ಕದಲ್ಲಿ ರುವ ಮಹಿಳೆಯರ ಶೌಚಾಲಯಕ್ಕೆ ತೆರಳಿದ್ದ ವೈದ್ಯಕೀಯ ಸಿಬ್ಬಂದಿಗೆ ಟಾಯ್ಲೆಟ್‌ನಲ್ಲಿ ನೀರು ನಿಂತಿರುವುದು ಗಮನಕ್ಕೆ ಬಂದಿದೆ. ನೀರು ಫ್ಲಶ್ ಆಗದ ಕಾರಣ ವೈದ್ಯಕೀಯ ಸಿಬ್ಬಂದಿ ಟಾಯ್ಲೆಟ್ ಅನ್ನು ಸ್ವಚ್ಛಗೊಳಿಸಲು ಹೌಸ್ ಕೀಪಿಂಗ್ ಸಿಬ್ಬಂದಿಗೆ ಸೂಚನೆ ನೀಡಿದ್ದರು. ಅದರಂತೆ, ಸಿಬ್ಬಂದಿ ವ್ಯಾಕ್ಯೂಮ್‌ನಿಂದ ಶೌಚಾಲಯ ಗುಂಡಿ ಕ್ಲೀನ್ ಮಾಡಿದ್ದಾರೆ. ಆಗ, ಏನೋ ವಸ್ತು ಅಡ್ಡ ಇರುವುದು ಪತ್ತೆಯಾಗಿದೆ.

ವಂಶವಾಹಿ ಸಮಸ್ಯೆ ಇದ್ದ ಮಗು ಜನನ : ಸಮಸ್ಯೆ ಗುರುತಿಸುವಲ್ಲಿ ವಿಫಲರಾದ ವೈದ್ಯರ ವಿರುದ್ಧ ಕೇಸು!

ಆರಂಭದಲ್ಲಿ, ಬಟ್ಟೆ ಅಥವಾ ಏನಾದರು ಕೊಳೆ ಇರಬಹುದೆಂದು ಶಂಕಿಸಿದ್ದಾರೆ. ಗುಂಡಿಯಲ್ಲಿ ಸಿಕ್ಕಿಕೊಂಡಿದ್ದ ಶಿಶುವಿನ ದೇಹ: ಶೌಚಾಲಯ ಶುಚಿಗೊಳಿಸುವ ಪರಿಕರ ಬಳಸಿ ಒಳಗೆ ಸಿಕ್ಕಿಹಾಕಿಕೊಂಡಿದ್ದ ವಸ್ತುವನ್ನು ಶುಚಿ ಮಾಡಿ, ಯಾವ ವಸ್ತು ಎಂದು ತಿಳಿದುಕೊಳ್ಳಲು ಹಿಂಭಾಗದಲ್ಲಿ ರುವಫಿಟ್ ಕಡೆಗೆ ಹೋಗಿ ನೋಡಿದಾಗ ನವಜಾತ ಶಿಶುವಿನ ದೇಹ ಸಿಕ್ಕಿದೆ. ಶಿಶು ಜನಿಸಿ ಒಂದೆರಡು ದಿನ ಆಗಿರಬಹುದು ಎಂದು ಅಂದಾಜಿಸಲಾಗಿದೆ. 

ಟಾಯ್ಲೆಟ್ ಒಳಗೆ ನವಜಾತ ಶಿಶು ಹೇಗೆ ಬಂದಿರಬಹುದು ಎಂದು ಆಸ್ಪತ್ರೆ ಸಿಬ್ಬಂದಿ ಶಾಕ್ ಆಗಿದ್ದಾರೆ. ಯಾವ ತಾಯಿ ಕೂಡ ಹೀಗೆ ಮಾಡಲು ಸಾಧ್ಯವೇ ಎಂದು ಸ್ಥಳದಲ್ಲಿದ್ದವರು ಕಳವಳ ವ್ಯಕ್ತಪಡಿಸಿದ್ದಾರೆ. ಅದೇ ಆಸ್ಪತ್ರೆಯಲ್ಲಿ ನವಜಾತ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 

ಮಗುವಿನ ಡಿಎನ್‌ಎ ವರದಿ ಆಧರಿಸಿ ಪೋಷಕರ ಪತ್ತೆ ಹಚ್ಚುವುದರ ಜೊತಗೆ ಆಸ್ಪತ್ರೆಗೆ ಬಂದು ಶಿಶುವಿಗೆ ಜನ್ಮ ಕೊಟ್ಟಿರುವುದೇ, ಮಗುವಿನ ಜನನ ಮರೆ ಮಾಚಲು ಹಾಗೂ ಮಗುವಿನ ಮೃತದೇಹವನ್ನು ರಹಸ್ಯವಾಗಿ ಎಲೆ ಮಾಡಲು ಎಸಗಿರುವ ಕೃತ್ಯವಾಗಿದೆ. 

ಆಸ್ಪತ್ರೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆಗೆ ಒಳಪಡಿಸಿ ಇನ್ನಷ್ಟು ವಿಚಾರಗಳು ತನಿಖೆಯಿಂದ ತಿಳಿದು ಬರಬೇಕಿದೆ. ಡಾ.ಚಂದ್ರಮ್ಮ ದಯಾನಂದ ಸಾಗರ್ ಆಸ್ಪತ್ರೆಯ ಆಡಳಿತ ವಿಭಾಗದ ವೈದ್ಯಕೀಯ ಅಧೀಕ್ಷಕ ಡಾ.ಎಸ್. ಮಧು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಭೀಕರ ಅಗ್ನಿ ದುರಂತ: 10 ನವಜಾತ ಶಿಶುಗಳ ಸಾವು

ಝಾನ್ಸಿ: ಇಲ್ಲಿನ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾಡ್ 9ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಆತಂಕ ಇದೆ. 

ರಾತ್ರಿ 10.30ರ ವೇಳೆಗೆ ನವಜಾತ ಶಿಶುಗಳ ವಾರ್ಡ್‌ನಲ್ಲಿ ಸಿಲಿಂಡ‌ರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಅವಘಡದ ಕುರಿತು ಎಚ್ಚರಿಕೆ ನೀಡಬೇಕಿದ್ದ ಅಲರಾಂ ಹೊಡೆಯದೇ ಇದ್ದ ಕಾರಣ ತಕ್ಷಣವೇ ರಕ್ಷಣಾ ಕಾರ್ಯ ಸಾಧ್ಯವಾಗಿಲ್ಲ.

Anekal Crime: ಹಸುಗೂಸನ್ನು ನೀರಿನ ಸಿಂಟೆಕ್ಸ್‌ ಟ್ಯಾಂಕ್‌ಗೆ ಎಸೆದು ಕೊಲೆ!

ಬಳಿಕ ಆಸ್ಪತ್ರೆ ಸಿಬ್ಬಂದಿ ಕೆಲ ಮಕ್ಕಳನ್ನು ಬೇರೆಡೆಗೆ ಸಾಗಿಸುವಲ್ಲಿ ಯಶಸ್ವಿಯಾದರೂ 10 ಮಕ್ಕಳು ಆ ಅದೃಷ್ಟವಿಲ್ಲದೇ ಅಲ್ಲೇ ಸಾವನ್ನಪ್ಪಿವೆ. ಈ ಮಕ್ಕಳೆಲ್ಲಾ ಬೆಂಕಿ/ ಉಸಿರುಕಟ್ಟಿ ಸಾವನ್ನಪ್ಪಿವೆ ಎಂದು ವೈದ್ಯರು ತಿಳಿಸಿದ್ದಾರೆ. ತಡರಾತ್ರಿವರೆಗೆ 35ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ. 16 ಶಿಶುಗಳು ಗಾಯಗೊಂಡಿವೆ. ಎಂದು ವರದಿಗಳು ತಿಳಿಸಿವೆ. 

ಬೆಂಕಿ ಸುದ್ದಿ ತಿಳಿಯುತ್ತಲೇ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದಿಗ್ಧಮೆ ವ್ಯಕ್ತಪಡಿಸಿದ್ದಾರೆ. ಮಡಿದ ಮಕ್ಕಳ ಕುಟುಂಬ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?