ಬೆಳಗಾವಿ ವಿಠ್ಠಲ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಮಹಾರಾಷ್ಟ್ರ ಪುಂಡರು!

Published : Jul 20, 2024, 08:06 AM ISTUpdated : Jul 20, 2024, 09:26 AM IST
ಬೆಳಗಾವಿ ವಿಠ್ಠಲ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಮಹಾರಾಷ್ಟ್ರ ಪುಂಡರು!

ಸಾರಾಂಶ

ಬೆಳಗಾವಿಯಿಂದ ಪಂಡರಾಪುರಕ್ಕೆ ತೆರಳಿದ್ದ ವಿಠ್ಠಲ ಭಕ್ತರ ಮೇಲೆ ಪಾನಮತ್ತ ಗೂಂಡಾಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ ಮಿರಜ್ ತಾಲೂಕಿನ ಮಾಲಗಾಂವ ಗ್ರಾಮದಲ್ಲಿ ನಡೆದಿದೆ. 

ಬೆಳಗಾವಿ (ಜು.20): ಬೆಳಗಾವಿಯಿಂದ ಪಂಡರಾಪುರಕ್ಕೆ ತೆರಳಿದ್ದ ವಿಠ್ಠಲ ಭಕ್ತರ ಮೇಲೆ ಪಾನಮತ್ತ ಗೂಂಡಾಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ ಮಿರಜ್ ತಾಲೂಕಿನ ಮಾಲಗಾಂವ ಗ್ರಾಮದಲ್ಲಿ ನಡೆದಿದೆ. 

ಸುರೇಶ್ ರಾಜುಕರ್, ಪರಶುರಾಮ ಜಾಧವ್, ಲಾರಿ ಚಾಲಕ ಹಲ್ಲೆಗೊಳಗಾದ ಭಕ್ತರು. ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗಾವಿ ತಾಲೂಕಿನ ತುರಮುರಿ ಗ್ರಾಮದ ಭಕ್ತರು. ಆಷಾಢ ಏಕಾದಶಿ ನಿಮಿತ್ತ ತುರಮುರಿ ಗ್ರಾಮದಿಂದ ಬಾಡಿಗೆ ಲಾರಿ ಮಾಡಿಕೊಂಡು ಪಂಡರಾಪುರಕ್ಕೆ ತೆರಳಿದ್ದರು. 

ಸ್ವಂತ ಜ್ಯುವೆಲರಿ ಅಂಗಡಿ ತೆರೆಯಲು ಕೆಲಸಕ್ಕಿದ್ದಮಳಿಗೆಯಲ್ಲಿ ಚಿನ್ನ ಕದ್ದ ಭೂಪ!

ಪಂಡರಾಪುರ ವಿಠ್ಠಲನ ದರ್ಶನ ಪಡೆದು ಬೆಳಗಾವಿಗೆ ವಾಪಸ್ ಬರುತ್ತಿದ್ದ ವೇಳೆ ದಾರಿ ತಪ್ಪಿದ್ದಾರೆ. ಬೆಳಗಾವಿಗೆ ಬದಲು ಮಾಲಗಾಂವ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಲಾರಿಗೆ ಅಡ್ಡ ಬಂದ ಕಾರು. ಪಾನಮತ್ತನಾಗಿದ್ದ ಕಾರಿನ ಚಾಲಕ ಭಕ್ತರೊಂದಿಗೆ ಕಿರಿಕ್ ಮಾಡಿದ್ದಾನೆ.  ಬಳಿಕ ಮೊಬೈಲ್ ಕರೆ ಮಾಡಿ ಸ್ಥಳಕ್ಕೆ ಪುಂಡರನ್ನು ಕರೆಸಿಕೊಂಡು ಭಕ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳು.

20 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ: ಮತ್ತೊಬ್ಬ ನಟ ಪರಪ್ಪನ ಅಗ್ರಹಾರದ ಜೈಲುಪಾಲು!

ಭಕ್ತರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಮಹಾರಾಷ್ಟ್ರ ಪುಂಡರು. ದಾಳಿಯಿಂದ ಮೂವರು ವಿಠ್ಠಲ ಭಕ್ತರು ಗಾಯಗೊಂಡಿದ್ದು ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮಿರಜ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಭಕ್ತರಿಗೆ ರಕ್ಷಣೆ ನೀಡುವಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಬೆಳಗಾವಿ ಭಕ್ತರು ಮನವಿ ಮಾಡಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್