ದೆಹಲಿಯ ಕರ್ನಾಟಕ ಭವನದಲ್ಲಿ ಕಿಚನ್ ವಿಭಾಗದ ನೌಕರನಾಗಿದ್ದ ಯುವಕ ಆತ್ಮಹತ್ಯೆ!

Published : Jul 03, 2024, 12:24 PM IST
ದೆಹಲಿಯ ಕರ್ನಾಟಕ ಭವನದಲ್ಲಿ ಕಿಚನ್ ವಿಭಾಗದ ನೌಕರನಾಗಿದ್ದ ಯುವಕ ಆತ್ಮಹತ್ಯೆ!

ಸಾರಾಂಶ

ದೆಹಲಿಯ ಕರ್ನಾಟಕ ಭವನದಲ್ಲಿ ಕಿಚನ್ ವಿಭಾಗದ ನೌಕರನಾಗಿದ್ದ ತಾಲೂಕಿನ ಎಂ.ಬಿ. ಅಯ್ಯನಹಳ್ಳಿ ಯುವಕ ಹೊಸಹಳ್ಳಿ ಹೊರವಲಯದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 

ಕೂಡ್ಲಿಗಿ (ಜು.3): ದೆಹಲಿಯ ಕರ್ನಾಟಕ ಭವನದಲ್ಲಿ ಕಿಚನ್ ವಿಭಾಗದ ನೌಕರನಾಗಿದ್ದ ತಾಲೂಕಿನ ಎಂ.ಬಿ. ಅಯ್ಯನಹಳ್ಳಿ ಯುವಕ ಹೊಸಹಳ್ಳಿ ಹೊರವಲಯದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಸುಕಿನ ಜಾವ ನಡೆದಿದೆ. ಎಂ.ಬಿ. ಅಯ್ಯನಹಳ್ಳಿಯ ಮಾರುತಿ (35) ನೇಣಿಗೆ ಶರಣಾದ ದುರ್ದೈವಿ.

ಕೂಡ್ಲಿಗಿ ತಾಲೂಕು ಎಂ.ಬಿ. ಅಯ್ಯನಹಳ್ಳಿ ನಿವೃತ್ತ ಶಿಕ್ಷಕ ರಾಮಣ್ಣನವರ ಮಗನಾದ ಈ ಯುವಕ ದೆಹಲಿಯ ಕರ್ನಾಟಕ ಭವನದಲ್ಲಿ ಕಿಚನ್ ವಿಭಾಗದ ನೌಕರನಾಗಿದ್ದನು. ಈತ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಪತ್ನಿಯೊಂದಿಗೆ ಜೂನ್ 27ರಂದು ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ಈತ ನಂತರ ಚಳ್ಳಕೆರೆಗೆ ಬಂದು ಪತ್ನಿಯನ್ನು ತವರು ಮನೆಗೆ ಬಿಟ್ಟು ಹೆತ್ತವರನ್ನು ನೋಡಿಕೊಂಡು ಬರಲು ಎಂ.ಬಿ. ಅಯ್ಯನಹಳ್ಳಿಗೆ ಬಂದಿದ್ದ. ಮಾನಸಿಕವಾಗಿ ನೊಂದಿದ್ದ ಈತ ಸೋಮವಾರ ನಸುಕಿನ ಜಾವ ಹೊಸಹಳ್ಳಿ ಹೊರವಲಯದ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುತ್ತಾನೆ ಎಂದು ಪತ್ನಿ ನೀಡಿದ ದೂರಿನಂತೆ ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆತ್ತವರು, ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು.

ಬೆಂಗಳೂರು: ಮದುವೆಯಾದ ಹರೆಯದ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ತವರು ಮನೆ ಸೇರಿದ ಸೊಸೆ, ನೊಂದು ಅತ್ತೆ-ಮಾವ ನೇಣಿಗೆ!
ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ಪತಿ ತೊರೆದು ಸೊಸೆ ತವರು ಮನೆ ಸೇರಿದಳು ಎಂಬ ಕಾರಣಕ್ಕೆ ಮನನೊಂದು ಅತ್ತೆ-ಮಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.

ಕಾರು ಕದ್ದು ₹15 ಲಕ್ಷಕ್ಕೆ ರಾಜ್ಯ ಬಿಜೆಪಿ ಮುಖಂಡಗೆ ಮಾರಿದ ಕಳ್ಳರು!

ಬೈಯಪ್ಪನಹಳ್ಳಿ ನಿವಾಸಿಗಳಾದ ಚಂದ್ರಶೇಖರ್‌(54), ಶಾರದಾ(45) ಆತ್ಮಹತ್ಯೆಗೆ ಶರಣಾದವರು. ದಂಪತಿಗೆ ಇಬ್ಬರು ಗಂಡು ಮಕ್ಕಳು. ಹಿರಿಯ ಮಗ ಪ್ರಶಾಂತ್‌ಗೆ ಮೂರು ತಿಂಗಳ ಹಿಂದೆಯಷ್ಟೇ ಕೆ.ಆರ್‌.ಪುರದ ದೀಕ್ಷಾ ಜತೆ ಮದುವೆ ಮಾಡಿದ್ದರು. ಮಗ-ಸೊಸೆಗೆ ಹೊಂದಾಣಿಕೆ ಬಾರದೆ ಸಣ್ಣಪುಟ್ಟ ವಿಚಾರಕ್ಕೂ ಗಲಾಟೆಗಳು ನಡೆಯುತ್ತಿದ್ದವು. ಇತ್ತೀಚೆಗೆ ಸೊಸೆ ದೀಕ್ಷಾ ಪತಿಯನ್ನು ತೊರೆದು ತವರು ಮನೆ ಸೇರಿದ್ದಳು. ಇದರಿಂದ ಚಂದ್ರಶೇಖರ್‌ ದಂಪತಿ ನೊಂದಿದ್ದರು. ಕಿರಿಯ ಮಗನನ್ನು ಸೋಮವಾರ ಸಂಜೆ ಅಂಗಡಿಗೆ ಹೋಗುವಂತೆ ದಂಪತಿ ಕಳುಹಿಸಿದ್ದರು. ಬಳಿಕ ರೂಮ್‌ ಬಾಗಿಲನ್ನು ಲಾಕ್‌ ಮಾಡಿ ಫ್ಯಾನಿಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ