
ನವದೆಹಲಿ( ಡಿ. 06) ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಹತ್ಯೆಯಾಗಿದೆ. ಗುರುನಾನಕರ ಸಂದೇಶ ಸಾರುವ ಗ್ರಂಥಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಆರ್ ಕೆ ಪುರಂ ನಲ್ಲಿ ಘಟನೆ ನಡೆದಿದೆ.
ಕೀರ್ತನೆ ಮಾಡುವಾಗ ಉಂಟಾದ ಸಣ್ಣ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಂಥಾ ಪತ್ನಿ.. ಪತಿಗೆ ನಿದ್ದೆ ಮಾತ್ರೆ ಕೊಟ್ಟು ಇನ್ನೊಬ್ಬನ ಜತೆ ಪಲ್ಲಂಗದಾಟ
ಮೃತ ರವೀಂದರ್ ಸಿಂಗ್ ಮತ್ತು ಆರೋಪಿ ದರ್ಶನ್ ಸಿಂಗ್ ಇಬ್ಬರೂ ಗುರುದ್ವಾರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದರು.
ಶುಕ್ರವಾರ ಬೆಳಿಗ್ಗೆ, ಕೀರ್ತಕನೆ ಮಾಡುವಾಗ ಸಣ್ಣ ವಿಷಯದ ಬಗ್ಗೆ ಜಗಳ ಶುರುವಾಗಿದೆ. ಈ ವೇಳೆ ಸಿಟ್ಟಿಗೆದ್ದ ಆರೋಪಿ ದರ್ಶನ್ ಸಿಂಗ್ ರವೀಂದರ್ ತಲೆಗೆ ತಬಲಾದಿಂದ ಹೊಡೆದಿದ್ದಾನೆ.
ಗಂಭೀರ ಗಾಯಗೊಂಡಿದ್ದ ರವೀಂದರ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗೆರೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೊಂದು ಕಡೆ ಪತ್ನಿಯ ಸ್ಥಿತಿಯೂ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ