
ನವದೆಹಲಿ (ಜೂ. 05) ಪೂರ್ವ ದೆಹಲಿಯಲ್ಲೊಂದು ಅಮಾನುಷ ಘಟನೆ ನಡೆದಿದೆ. ವೃದ್ಧ ಮಹಿಳೆಯೊಬ್ಬಳ ಮೇಲೆ ಕಾರು ಹರಿದಿದೆ. ವೇಗವಾಗಿ ಬಂದ ಕಾರು ಹರಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.
ವೇಗವಾಗಿ ಬಂದ ಕಾರು ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಮೇಲೆ ಹಾರಿ ನೆಲಕ್ಕೆ ಬಿದ್ದಿದ್ದಾರೆ. ಹತ್ತಿರದಲ್ಲಿದ್ದ ಜನ ಮಹಿಳೆಯ ರಕ್ಷಣೆಗೆ ಓಡಿ ಬಂದಿದ್ದಾರೆ. ಆದರೆ ಕಾರು ಚಾಲಕ ಮಾತ್ರ ಸುಮ್ಮನಾಗಿಲ್ಲ. ಮತ್ತೆ ಕಾರು ಸ್ಟಾರ್ಟ್ ಮಾಡಿ ಮಹಿಳೆಯ ಮೇಲೆ ಹಾಯಿಸಲು ಬಂದಿದ್ದಾನೆ.
ವಿಧಾನಸೌಧದಲ್ಲೇ ಅಪಘಾತವಾದರೂ ಕೇಳುವವರಿಲ್ಲ
ಕಾರನ್ನು ಅಡ್ಡ ಹಾಕಿದರೂ ಚಾಲಕ ವೇಗವಾಗಿ ಪರಾರಿಯಾಗಿದ್ದಾನೆ. ಸದ್ಯ ಕಾರು ಚಾಲಕನ ಬಂಧನವಾಗಿದ್ದು ವಿಚಾರಣೆ ನಡೆಯುತ್ತಿದೆ. ವೃದ್ಧೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾಳೆ.ಮಹಿಳೆ ತಪ್ಪಿಸಿಕೊಳ್ಳಲು ಯತ್ನ ಮಾಡಿದಕ್ಕೆ ಕಾರು ಹತ್ತಿಸಲಾಗಿದೆಯಾ ಅಥವಾ ಇದರ ಹಿಂದೆ ಬೇರೆ ಏನಾದರೂ ಕಾರಣ ಇದೇಯಾ ಎಂಬ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ