ಮದುವೆಯ ದಿನವೇ ವರದಕ್ಷಿಣೆಗೆ ಬೇಡಿಕೆ ಇಟ್ಟು ಜೈಲುಪಾಲಾದ ವರ!

Published : Jan 02, 2024, 06:03 AM IST
ಮದುವೆಯ ದಿನವೇ ವರದಕ್ಷಿಣೆಗೆ ಬೇಡಿಕೆ ಇಟ್ಟು ಜೈಲುಪಾಲಾದ ವರ!

ಸಾರಾಂಶ

ಮದುವೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡು ಇನ್ನೇನು ತಾಳಿ ಕಟ್ಟಬೇಕು ಎನ್ನುವ ಸಂದರ್ಭದಲ್ಲಿ ವರ ವರಕ್ಷಿಣೆಗಾಗಿ ಬೇಡಿಕೆ ಇಟ್ಟ ಘಟನೆ ಪಟ್ಟಣದಲ್ಲಿ ಭಾನುವಾರ ವರದಿಯಾಗಿದೆ. ಧಾರವಾಡ ಜಿಲ್ಲೆ ಹಳೇ ಹುಬ್ಬಳ್ಳಿಯ ನಿವಾಸಿ, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸಹಾಯಕ ಸಚಿನ ವಿಠ್ಠಲ ಪಾಟೀಲ ವರದಕ್ಷಿಣೆಗೆ ಬೇಡಿಕೆ ಇಟ್ಟ ವರ.

ಖಾನಾಪುರ (ಜ.2): ಮದುವೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡು ಇನ್ನೇನು ತಾಳಿ ಕಟ್ಟಬೇಕು ಎನ್ನುವ ಸಂದರ್ಭದಲ್ಲಿ ವರ ವರಕ್ಷಿಣೆಗಾಗಿ ಬೇಡಿಕೆ ಇಟ್ಟ ಘಟನೆ ಪಟ್ಟಣದಲ್ಲಿ ಭಾನುವಾರ ವರದಿಯಾಗಿದೆ. ಧಾರವಾಡ ಜಿಲ್ಲೆ ಹಳೇ ಹುಬ್ಬಳ್ಳಿಯ ನಿವಾಸಿ, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸಹಾಯಕ ಸಚಿನ ವಿಠ್ಠಲ ಪಾಟೀಲ ವರದಕ್ಷಿಣೆಗೆ ಬೇಡಿಕೆ ಇಟ್ಟ ವರ. ವಧು ನೀಡಿದ ದೂರಿನನ್ವಯ ಖಾನಾಪುರ ಠಾಣೆಯಲ್ಲಿ ವರ ಹಾಗೂ ಆತನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಾಗಿದೆ. ವರನನ್ನು ವಶಕ್ಕೆ ಪಡೆದು ನ್ಯಾಯಾಲಯದಲ್ಲಿ ಹಾಜರುಪಡಿಸಿದ ಪೊಲೀಸರು ನ್ಯಾಯಾಧೀಶರ ಸೂಚನೆ ಮೇರೆಗೆ ಆರೋಪಿ ವರನನ್ನು ಬೆಳಗಾವಿ ಜಿಲ್ಲಾ ಕಾರಾಗೃಹಕ್ಕೆ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಬೆಂಗಳೂರು: ತನ್ನ ತಪ್ಪಿಲ್ಲದಿದ್ದರೂ ಕಾಲೇಜಿಂದ ಸಸ್ಪೆಂಡ್, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಖಾನಾಪುರ ತಾಲೂಕಿನ ಗ್ರಾಮವೊಂದರ ಯುವತಿಯ ವಿವಾಹ ಸರ್ಕಾರಿ ಕೆಲಸದಲ್ಲಿರುವ ಹುಬ್ಬಳ್ಳಿಯ ಹುಡುಗ ಸಚಿನ ಜೊತೆ ನಿಗದಿಯಾಗಿತ್ತು. ಕಳೆದ ಮೇ ತಿಂಗಳಲ್ಲಿ ನಿಶ್ಚಿತಾರ್ಥ ನೆರವೇರಿತ್ತು. ಭಾನುವಾರ ಡಿ.31 ರಂದು ಇಲ್ಲಿಯ ಲೋಕಮಾನ್ಯ ಸಭಾಗೃಹದಲ್ಲಿ ಮದುವೆ ನಡೆಯಬೇಕಿತ್ತು. ಆದರೆ, ಮದುವೆಯ ಶಾಸ್ತ್ರಗಳು ನಡೆಯುವ ಸಂದರ್ಭದಲ್ಲಿ ವರ ತನಗೆ ವರದಕ್ಷಿಣೆಯಾಗಿ ₹10 ಲಕ್ಷ ನಗದು ಮತ್ತು 100 ಗ್ರಾಂ ಚಿನ್ನವನ್ನು ವರದಕ್ಷಿಣೆಯಾಗಿ ನೀಡಲು ಬೇಡಿಕೆ ಇಟ್ಟಿದ್ದ.

ತಡರಾತ್ರಿ ಅಡುಗೆ ಮಾಡದ್ದಕ್ಕೆ ಪತ್ನಿ ಕೊಂದವನಿಗೆ ಜೀವಾವಧಿ..!

ಆದರೆ, ವಧುವಿನ ಕಡೆಯವರು ವರದಕ್ಷಿಣೆ ನೀಡಲು ನಿರಾಕರಿಸಿದ್ದರು. ಅದಕ್ಕೆ ಮದುಮಗ ವರದಕ್ಷಿಣೆ ಕೊಡದ ಹೊರತು ಮದುವೆ ಆಗುವುದಿಲ್ಲ ಎಂದು ಹಠ ಹಿಡಿದಿದ್ದ. ವರದ ವರದಕ್ಷಿಣೆ ದಾಹದಿಂದ ಬೇಸತ್ತ ವಧು ಹಾಗೂ ಆಕೆಯ ಪಾಲಕರು ಈ ವಿಷಯವನ್ನು ಖಾನಾಪುರ ಪೊಲೀಸರಿಗೆ ತಿಳಿಸಿದ್ದಾರೆ. ಖಾನಾಪುರ ಠಾಣೆಯ ಇನ್ಸಪೆಕ್ಟರ್ ಸೂಚನೆಯ ಮೇರೆಗೆ ಘಟನಾ ಸ್ಥಳಕ್ಕೆ ತೆರಳಿದ ಖಾನಾಪುರ ಠಾಣೆಯ ಪಿಎಸೈ ಎಂ.ಬಿ ಬಿರಾದಾರ ಹಾಗೂ ಸಿಬ್ಬಂದಿ ವರನನ್ನು ಬಂಧಿಸಿದ್ದಾರೆ. ಮದುವೆಯ ಹಿಂದಿನ ದಿನವೂ ಅವರು ಹಣ ಮತ್ತು ಚಿನ್ನಕ್ಕಾಗಿ ಬೇಡಿಕೆ ಇಟ್ಟಿದ್ದರು. ಹಣ ಮತ್ತು ಚಿನ್ನ ನೀಡದಿದ್ದರೆ ಮದುವೆ ಆಗುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದರು ಎಂಬ ಮಾಹಿತಿಯನ್ನು ಪೊಲೀಸರಿಗೆ ನೀಡಿದರು. ಈ ಸಂದರ್ಭದಲ್ಲಿ ದೂರುದಾರರ ಸಂಬಂಧಿಗಳು, ಪಂಚರು ಮತ್ತು ಪ್ರಕರಣದ ತನಿಖಾಧಿಕಾರಿಗಳು, ಸಿಬ್ಬಂದಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ