ಧಾರವಾಡ: ಮಕ್ಕಳ ಕಳ್ಳ ಮಹ್ಮದ್ ಕರೀಂ ಬಂಧನ; ಬೈಕ್ ಆಕ್ಸಿಡೆಂಟ್ ಆಗದಿದ್ದರೆ ಪುಟಾಣಿಗಳ ಸ್ಥಿತಿ ಏನಾಗುತ್ತಿತ್ತು?

Published : Jan 12, 2026, 10:29 PM IST
Dharwad Kidnap Case Kids Rescued in Joida Accused Mohammed Karim Arrested

ಸಾರಾಂಶ

ಧಾರವಾಡದ ಕಮಲಾಪುರ ಶಾಲೆಯ ಇಬ್ಬರು ಮಕ್ಕಳನ್ನು ಅಪಹರಿಸಿದ್ದ ಪ್ರಕರಣವು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ಸುಖಾಂತ್ಯ ಕಂಡಿದೆ. ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದ ಆರೋಪಿ ಅಪಘಾತಕ್ಕೀಡಾದಾಗ, ಜೋಯಿಡಾ ಪೊಲೀಸರ ಸಮಯಪ್ರಜ್ಞೆಯಿಂದ ಮಕ್ಕಳು ಸುರಕ್ಷಿತವಾಗಿ ಪೋಷಕರನ್ನು ಸೇರಿದ್ದಾರೆ.

ಕಾರವಾರ(ಜ.12): ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಧಾರವಾಡದ ಕಮಲಾಪುರ ಶಾಲಾ ಮಕ್ಕಳ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಪೊಲೀಸರ ಸಮಯಪ್ರಜ್ಞೆಯಿಂದಾಗಿ ಅಪಹರಣಕ್ಕೊಳಗಾಗಿದ್ದ ಇಬ್ಬರು ಪುಟಾಣಿಗಳು ಸುರಕ್ಷಿತವಾಗಿ ಪೋಷಕರ ಕೈ ಸೇರಿದ್ದಾರೆ.

ಅಪಘಾತದಿಂದ ಸಿಕ್ಕಿಬಿದ್ದ ಮಕ್ಕಳ ಕಳ್ಳ

ಮಕ್ಕಳನ್ನು ಅಪಹರಿಸಿದ್ದ ಆರೋಪಿಯನ್ನು ಹುಬ್ಬಳ್ಳಿ ಮೂಲದ ಮಹ್ಮದ್ ಕರೀಂ ಮೇಸ್ತ್ರಿ (49) ಎಂದು ಗುರುತಿಸಲಾಗಿದೆ. ಈತ ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಅತೀ ವೇಗವಾಗಿ ಪರಾರಿಯಾಗುತ್ತಿದ್ದಾಗ ಜೋಯಿಡಾ ಬಳಿ ಬೈಕ್ ಅಪಘಾತಕ್ಕೀಡಾಗಿದೆ. ಈ ವೇಳೆ 8 ಮತ್ತು 9 ವರ್ಷದ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅಪಘಾತದಲ್ಲಿ ಆರೋಪಿಯ ತಲೆಗೆ ಬಲವಾದ ಪೆಟ್ಟಾಗಿದ್ದು, ಸದ್ಯ ಪೊಲೀಸರ ಸುಪರ್ದಿಯಲ್ಲಿ ಜೋಯಿಡಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

'ಬರುತ್ತೇವೆ ಅಂದರು, ಕರೆದುಕೊಂಡು ಹೋದೆ': ಆರೋಪಿಯ ವಿಚಿತ್ರ ಸಬೂಬು

ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿ ಕರೀಂ ವಿಚಿತ್ರ ಹೇಳಿಕೆ ನೀಡಿದ್ದಾನೆ. 'ಮಕ್ಕಳು ನನ್ನ ಜೊತೆ ಬರುತ್ತೇವೆ ಎಂದರು, ಅದಕ್ಕೆ ಕರೆದುಕೊಂಡು ಹೋದೆ' ಎಂದು ಸಬೂಬು ನೀಡುವ ಮೂಲಕ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾನೆ. ಮಧ್ಯಾಹ್ನ ಶಾಲೆಯ ಊಟದ ಸಮಯದಲ್ಲಿ ಪುಟಾಣಿಗಳನ್ನು ಪುಸಲಾಯಿಸಿ, ಅವರಿಗೆ ಆಮಿಷ ಒಡ್ಡಿ ಅಪಹರಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ಹಿಂದೂ-ಮುಸ್ಲಿಂ ಮಕ್ಕಳನ್ನೇ ಟಾರ್ಗೆಟ್ ಮಾಡಿದ್ದೇಗೆ?

ಬಂಧಿತ ಆರೋಪಿ ಕರೀಂ, ಹಿಂದೂ ಸಮುದಾಯದ ಒಬ್ಬ ಬಾಲಕಿ ಮತ್ತು ಮುಸ್ಲಿಂ ಸಮುದಾಯದ ಒಬ್ಬ ಬಾಲಕನನ್ನು ಕರೆದೊಯ್ದಿದ್ದನು. ಈ ಇಬ್ಬರು ಮಕ್ಕಳನ್ನು ಅಪಹರಿಸಲು ಆತನ ಉದ್ದೇಶವೇನಿತ್ತು? ಮಕ್ಕಳನ್ನು ಎಲ್ಲಿಗೆ ಸಾಗಿಸುತ್ತಿದ್ದ? ಇದರ ಹಿಂದೆ ಯಾವುದಾದರೂ ಮಾನವ ಸಾಗಣೆ ಜಾಲವಿದೆಯೇ? ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿ ಇನ್ನೂ ಕೃತ್ಯದ ಅಸಲಿ ಕಾರಣವನ್ನು ಬಾಯಿಬಿಟ್ಟಿಲ್ಲ.

ಮಕ್ಕಳನ್ನು ತಬ್ಬಿ ಕಣ್ಣೀರಿಟ್ಟ ಪೋಷಕರು

ವಿಷಯ ತಿಳಿಯುತ್ತಿದ್ದಂತೆಯೇ ಜೋಯಿಡಾಕ್ಕೆ ದೌಡಾಯಿಸಿದ ಪೋಷಕರು, ತಮ್ಮ ಮಕ್ಕಳನ್ನು ಕಂಡು ಕಣ್ಣೀರಿಟ್ಟರು. ಉತ್ತರ ಕನ್ನಡ ಪೊಲೀಸರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ ಪೋಷಕರು ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚೇತರಿಸಿಕೊಂಡ ನಂತರ ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಧಾರವಾಡ ಕಿಡ್ನ್ಯಾಪ್ ಕೇಸ್ ಸುಖಾಂತ್ಯ: ಜೋಯಿಡಾದಲ್ಲಿ ಪತ್ತೆಯಾದ್ರು ಶಾಲಾ ಮಕ್ಕಳು! ಅಪಹರಣಕಾರ ಸಿಕ್ಕಿಬಿದ್ದಿದ್ದೇ ರೋಚಕ!
ಹದಿಹರೆಯದ ಪ್ರೇಮ ಪ್ರಕರಣ: 'ರೋಮಿಯೋ ಜ್ಯೂಲಿಯೆಟ್‌ ನಿಯಮ' ಜಾರಿಗೆ ಸುಪ್ರೀಂಕೋರ್ಟ್​ ಕೇಂದ್ರಕ್ಕೆ ಸೂಚನೆ