
ಧಾರವಾಡ, (ನ.5): ಧಾರವಾಡ ಉಪನಗರ ಪೊಲೀಸ್ ಠಾಣೆಯ ಸಿಬ್ಬಂದಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಲ್ಯಾಪ್ಟಾಪ್ ಮತ್ತು ಮೊಬೈಲ್ ಕಳ್ಳತನದಲ್ಲಿ ತೊಡಗಿದ್ದ ಖತರ್ನಾಕ್ ಕಳ್ಳನ ಬಂಧಿಸಲಾಗಿದೆ.
ಯುನೂಸ್ ಖಾಜಿ ಬಂಧಿತ ಆರೋಪಿ. ಆರೋಪಿಯಿಂದ ಮೂರು ಲ್ಯಾಪ್ಟಾಪ್ಗಳು ಮತ್ತು ಏಳು ಮೊಬೈಲ್ಗಳು ಸೇರಿದಂತೆ ಸುಮಾರು 3.5 ಲಕ್ಷ ರೂಪಾಯಿಗಳ ವಸ್ತುಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮೂಲದವನಾಗಿರುವ ಯುನೂಸ್ ಖಾಜಿ ಇತ್ತೀಚೆಗಷ್ಟೇ ಧಾರವಾಡದ ಡಿಮಾನ್ಸ್ (District Institute of Medical Sciences) ಆಸ್ಪತ್ರೆಯಲ್ಲಿ ವೈದ್ಯರ ಲ್ಯಾಪ್ಟಾಪ್ಗಳನ್ನು ಕಳ್ಳತನ ಮಾಡಿದ್ದ ಇದರ ಜೊತೆಗೆ, ಕೊಪ್ಪಳ ಜಿಲ್ಲೆಯ ಆಯುರ್ವೇದಿಕ್ ಮಹಾವಿದ್ಯಾಲಯದಲ್ಲೂ ಇದೇ ರೀತಿ ಲ್ಯಾಪ್ಟಾಪ್ ಕಳ್ಳತನ ನಡೆಸಿದ್ದಾನೆ. ಬಂಧನದ ನಂತರ ವಿಚಾರಣೆಯಲ್ಲಿ ಆರೋಪಿ ತನ್ನ ಕಳ್ಳತನದ ಬಗ್ಗೆ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮುಖ್ಯವಾಗಿ ಬಸ್ ನಿಲ್ದಾಣಗಳಲ್ಲಿ ಗದ್ದಲದಿಂದಾಗಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿ, ಧಾರವಾಡದಲ್ಲಿ ಹಲವು ಕಡೆ ಇದೇ ರೀತಿ ಕಳ್ಳತನಗಳು ನಡೆದಿದ್ದವು. ಇದರಿಂದಾಗಿ ಬೇಸತ್ತಿದ್ದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ ಬಳಿಕ ಕಾರ್ಯಾಚರಗೆ ಇಳಿಸಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಶ್ವಿಯಾಗಿದ್ದಾರೆ.
ಸದ್ಯ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿ ಇನ್ನಷ್ಟು ಪ್ರಕರಣಗಳು ಬಯಲಿಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ