ದಿವ್ಯಾಂಗ ಯುವತಿ ಮೇಲೆ ಬಲತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!

Published : Dec 13, 2025, 04:37 PM IST
Disabled Woman assaults Cheated After Pregnancy in Mandya Accused Booked

ಸಾರಾಂಶ

ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ, ದಿವ್ಯಾಂಗ ಯುವತಿಯ ಮೇಲೆ ಬಲತ್ಕಾರ ಎಸಗಿದ ನೆರೆಮನೆಯ ಯುವಕ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ. ಸಂತ್ರಸ್ತೆ ಗರ್ಭಿಣಿಯಾದ ಬಳಿಕ ಮದುವೆಗೆ ನಿರಾಕರಿಸಿದ್ದರಿಂದ, ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಡ್ಯ (ಡಿ.13): ದಿವ್ಯಾಂಗ ಯುವತಿಯ ಮೇಲೆ ಬಲತ್ಕಾರ ನಡೆಸಿ, ಬಳಿಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾರಿಗೂ ಹೇಳದಂತೆ ಆರೋಪಿ ಬೆದರಿಕೆ:

ಪುರ ಗ್ರಾಮದ ನಿವಾಸಿ ರಮ್ಯಾ (26) ದೂರು ನೀಡಿದ ಯುವತಿಯಾಗಿದ್ದು, ಇವರು ದಿವ್ಯಾಂಗರಾಗಿದ್ದಾರೆ. ರಮ್ಯಾ ಮನೆಯಲ್ಲಿ ಒಬ್ಬರೇ ಇದ್ದಾಗ, ಪಕ್ಕದ ಮನೆಯ ಪೃಥ್ವಿ ಎಂಬಾತ ಈಕೆಯ ಮೇಲೆ ಬಲತ್ಕಾರ ಎಸಗಿದ್ದಾನೆ. ಆದರೆ ಈ ವಿಷಯವನ್ನು ಯಾರಿಗೂ ಹೇಳದಂತೆ ಆತ ಸಂತ್ರಸ್ತೆಗೆ ನಿರಂತರ ಬೆದರಿಕೆ ಹಾಕಿದ್ದಾನೆ. ಒಂದು ವೇಳೆ ಈ ವಿಚಾರ ಯಾರಿಗಾದರೂ ಹೇಳಿದರೆ, ರಮ್ಯಾ ಅವರ ಅಪ್ಪ, ಅಮ್ಮನನ್ನು ಕೊಲ್ಲುವುದಾಗಿ ಬೆದರಿಸಿದ್ದ ಎನ್ನಲಾಗಿದೆ.

ಸಂತ್ರಸ್ತೆ ಗರ್ಭಿಣಿ: ಮದುವೆಯಾಗಲು ನಿರಾಕರಿಸಿ ಮೋಸ:

ಕಳೆದ ಅಕ್ಟೋಬರ್ ತಿಂಗಳಲ್ಲಿ ರಮ್ಯಾ ಅವರಿಗೆ ವಾಂತಿ ಶುರುವಾಗಿದ್ದರಿಂದ, ವೈದ್ಯರ ಬಳಿ ತಪಾಸಣೆ ಮಾಡಿಸಿದ್ದಾರೆ. ವೈದ್ಯರ ಸಲಹೆಯಂತೆ ಸ್ಕ್ಯಾನಿಂಗ್ ಮಾಡಿಸಿದಾಗ ರಮ್ಯಾ ಅವರು ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ, ರಮ್ಯಾ ಅವರು ಪೃಥ್ವಿಯ ಕುಟುಂಬದವರೊಂದಿಗೆ ಮದುವೆ ಮಾಡುವಂತೆ ಮಾತುಕತೆ ನಡೆಸಿದ್ದರು. ಆರಂಭದಲ್ಲಿ ಮದುವೆಗೆ ಒಪ್ಪಿದ್ದ ಪೃಥ್ವಿ ಮತ್ತು ಆತನ ಮನೆಯವರು, ಇದೀಗ ಮದುವೆಯಾಗಲು ನಿರಾಕರಿಸಿ ಮೋಸ ಮಾಡಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ.

ರಮ್ಯಾ ತಮ್ಮ ಮೇಲೆ ನಡೆದ ದೌರ್ಜನ್ಯ ಹಾಗೂ ಮೋಸದ ಕುರಿತು ಕೆಆರ್‌ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸದ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿ ಪೃಥ್ವಿ ವಿರುದ್ಧ ತನಿಖೆ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!
ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!