ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?

Kannadaprabha News, Ravi Janekal |   | Kannada Prabha
Published : Dec 06, 2025, 06:20 AM IST
Diwan Of Mysore s Granddaughter s Murder case upreme rejects Shraddhananda plea

ಸಾರಾಂಶ

ಪತ್ನಿ ಶಾಖರೆ ಖಲೀಲಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ  ಸ್ವಾಮಿ ಶ್ರದ್ಧಾನಂದನಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಶಿಕ್ಷೆ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಯಾವುದೇ ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರವನ್ನು ಸಂಪರ್ಕಿಸಲು ಸೂಚಿಸಿದೆ.

ನವದೆಹಲಿ (ಡಿ.6): ಪತ್ನಿ ಹತ್ಯೆ ಪ್ರಕರಣದಲ್ಲಿ ತನಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿರುವ ಆದೇಶ ಮರುಪರಿಶೀಲನೆ ಕೋರಿ ಬೆಂಗಳೂರಿನ ಸ್ವಯಂಘೋಷಿತ ದೇವಮಾನವ ಸ್ವಾಮಿ ಶ್ರದ್ಧಾನಂದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಅಲ್ಲದೆ, ಜೈಲುಶಿಕ್ಷೆ ಸಂಬಂಧಿಸಿ ಏನೇ ಸಮಸ್ಯೆಗಳೇನೇ ಇದ್ದರೂ ಕರ್ನಾಟಕ ಸರ್ಕಾರದ ಬಳಿ ಹೋಗುವಂತೆ ಸಲಹೆ ನೀಡಿದೆ. ಶ್ರದ್ಧಾನಂದ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ನ್ಯಾ. ಜೆ.ಕೆ.ಮಹೇಶ್ವರಿ ಮತ್ತು ನ್ಯಾ.ವಿಜಯ್‌ ಬಿಷ್ಣೋಯಿ ಅವರಿದ್ದ ಪೀಠ ಈ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರದ್ಧಾನಂದ ಪರ ಹಾಜರಾಗಿದ್ದ ವಕೀಲ ವರುಣ್‌ ಠಾಕೂರ್‌ ಅ‍ವರು ತಮ್ಮ ಅರ್ಜಿಯನ್ನು ವಾಪಸ್‌ ಪಡೆದರು.

ಏನಿದು ಪ್ರಕರಣ?:

ಮೈಸೂರು ರಾಜ್ಯದ ದಿವಾನರಾಗಿದ್ದ ಸರ್‌ ಮಿರ್ಜಾ ಇಸ್ಮಾಯಿಲ್‌ ಅವರ ಮೊಮ್ಮಗಳಾದ ಶಾಖರೆ ಖಲೀಲಿ ಅವರನ್ನು 1986ರಲ್ಲಿ ಮದುವೆಯಾಗಿದ್ದ ಸ್ವಾಮಿ ಶ್ರದ್ಧಾನಂದ ಅಲಿಯಾಸ್‌ ಮುರಳಿ ಮನೋಹರ್‌ ಮಿಶ್ರಾ ಆಸ್ತಿ ಆಸೆಗಾಗಿ ಆಕೆಯನ್ನು 1991ರಲ್ಲಿ ಬೆಂಗಳೂರಿನಲ್ಲಿ ಜೀವಂತ ಸಮಾಧಿ ಮಾಡಿದ್ದ. ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ವಿಚಾರಣಾ ನ್ಯಾಯಾಲಯವು ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್‌ ಕೂಡ ಎತ್ತಿಹಿಡಿದ ಹಿನ್ನೆಲೆಯಲ್ಲಿ ಶ್ರದ್ದಾನಂದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ. ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಪ್ರಕರಣದಲ್ಲಿ ಶ್ರದ್ಧಾನಂದಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಜೀವನಪರ್ಯಂತ ಜೈಲಲ್ಲೇ ಇರುವ ಶಿಕ್ಷೆಯಾಗಿ ಪರಿವರ್ತಿಸಿ 2008ರಲ್ಲಿ ತೀರ್ಪು ನೀಡಿತ್ತು. ಇದನ್ನು ಆತ ಮರುಪರಿಶೀಲನೆ ಮಾಡಿ ಎಂದು ಕೋರಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!