
ಬೆಂಗಳೂರು[ಜ. 13] ಸೆಲ್ಫಿ ವಿಡಿಯೋ ಮಾಡಿ ವಿವಾಹಿತರೊಬ್ಬರು ಆತ್ಮಹತ್ಯೆ ಯತ್ತಿಸಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ರಂಗನಾಥ್ ಅಲಿಯಾಸ್ ಕೇಬಲ್ ರಂಗ (30) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಕೆ.ಆರ್. ಪುರಂ ದೇವಸಂದ್ರ ಪ್ರಿಯದರ್ಶಿನಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಕೌಟುಂಬುಕ ಕಲಹದ ಕಾರಣಕ್ಕೆ ಪತ್ನಿ ಇವರಿಂದ ದೂರ ಆಗಿದ್ದರು. ಮೈಸೂರು ಮೂಲದ ಭವ್ಯಶ್ರೀ ಎಂಬುವರನ್ನು ರಂಗನಾಥ್ ವಿವಾಹ ಆಗಿದ್ದರು. ಮೂರು ವರ್ಷದ ಹಿಂದೆ ಇಬ್ಬರು ಲವ್ ಮ್ಯಾರೇಜ್ ಆಗಿದ್ದರು.
ಶೀಲ ಶಂಕಿಸಿದ ಪ್ರಿಯತಮ: ಸುಳ್ಳೆಂದು ಪ್ರೂವ್ ಮಾಡಲು ಹೋದ ಪ್ರಿಯತಮೆ
ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಹಾಕಿಕೊಳ್ಳಲು ಯತ್ನಿಸಿ ಅಸ್ವಸ್ಥಗೊಂಡಿದ್ದ ರಂಗ ಅವರನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಂಗನಾಥ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ