
ತಿರುವನಂತಪುರ(ಆ. 06) ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣವಾಗಿರುವ ಆರೋಪಿ ಎದುರಿಸುತ್ತಿರುವ ಪತಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಕೇರಳದ ಕೊಲ್ಲಂನಲ್ಲಿ ಪತ್ನಿ ಎಸ್ವಿ ವಿಸ್ಮಯ ಅವರಿಗೆ ವರದಕ್ಷಿಣೆ ಕಿರುಕುಳ ನೀಡುವ ಮೂಲಕ ಆಕೆಯ ಸಾವಿಗೆ ಕಾರಣರಾಗಿದ್ದ ಆರೋಪಿ ಎಸ್ ಕಿರಣ್ ಕುಮಾರ್ ಅವರನ್ನು ಸೇವೆಯಿಂದ ವಜಾಗೊಳಿಸಲು ಅಲ್ಲಿನ ಸಾರಿಗೆ ಇಲಾಖೆ ನಿರ್ಧಾರ ಮಾಡಿದೆ.
30 ವರ್ಷದ ಕಿರಣ್ ಕುಮಾರ್ ಅವರು ಕೊಲ್ಲಂನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಹಾಯಕ ಮೋಟಾರ್ ವಾಹನ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದರು.. ಕಿರಣ್ ಕೆಲಸದಿಂದ ವಜಾಗೊಂಡ ನಂತರ ಇನ್ನು ಮುಂದೆ ಸರ್ಕಾರಿ ಕೆಲಸ ಸಿಗಲಾರದು.
ವಾಟ್ಸಪ್ ಮೆಸೇಜ್ ಕಳಿಸಿ ಸುಸೈಡ್ ಮಾಡಿಕೊಂಡ ವೈದ್ಯೆ
ಆಂತರಿಕ ವಿಚಾರಣೆಯಲ್ಲಿ ಕಿರಣ್ ಕುಮಾರ್ ವಿರುದ್ಧದ ಆರೋಪ ಸಾಬೀತಾದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆಂಟನಿ ರಾಜು ಅವರು ತಿಳಿಸಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿದ ಆರೋಪಿ ನೌಕರನನ್ನು ಸೇವೆಯನ್ನು ವಜಾಗೊಳಿಸುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು. ಈ ರೀತಿಯ ಪ್ರಕರಣ ಮುಂದೆ ಘಟಸಿಬಾರದು ಎನ್ನುವ ಕಾರಣಕ್ಕೆ ಕಠಿಣ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಕಿರಣ್ ಕುಮಾರ್ ಪತ್ನಿ, 24 ವರ್ಷದ ವಿಸ್ಮಯ ಅವರು ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ ವಿದ್ಯಾರ್ಥಿಯಾಗಿದ್ದು, ಜೂನ್ 21 ರಂದು ಶವವಾಗಿ ಪತ್ತೆಯಾಗಿದ್ದಳು. ವರದಕ್ಷಿಣೆ ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು ಕುಟುಂಬಸ್ಥರು ದೂರು ದಾಖಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ