
ಬೆಂಗಳೂರು(ಸೆ.10): ಅದ್ಧೂರಿಯಾಗಿ ತಂಗಿ ಮದುವೆ ಮಾಡಲು ಗಾಂಜಾ ಮಾರಲು ಮುಂದಾಗಿದ್ದವನನ್ನ ಪೊಲೀಸರು ಬಂಧಿಸಿದ ಘಟನೆ ಇಂದು(ಮಂಗಳವಾರ) ನಡೆದಿದೆ. ಪುತ್ತೂರು ಮೂಲದ ಬದ್ರುದ್ದಿನ್(25) ಬಂಧಿತ ಆರೋಪಿಯಾಗಿದ್ದಾನೆ.
ಮೊದಲ ಯತ್ನದಲ್ಲಿಯೇ ಡ್ರಗ್ ಪೆಡ್ಲರ್ ಬದ್ರುದ್ದಿನ್ ಬಾಣಸವಾಡಿ ಪೊಲೀಸರಿಗೆ ಅತಿಥಿಯಾಗಿದ್ದಾನೆ. ಹೊಟೇಲ್ನಲ್ಲಿ ಕೆಲಸ ಮಾಡ್ತಿದ್ದ ಬದ್ರುದ್ದಿನ್ ಗೆ ಮನೆ ನಿರ್ವಹಣೆ ಕಷ್ಟವಾಗಿತ್ತು. ಅವಾಗ ಯಾರೋ ಸ್ನೇಹಿತರ ಮೂಲಕ ಗಾಂಜಾ ಮಾರಿ ಹಣ ಮಾಡಬಹುದು ಅಂತ ತಿಳಿದಿದೆ.
ಡ್ರಗ್ಸ್ ಜೊತೆ ಸಿಕ್ಕಿಬಿದ್ದ ಕೇರಳದ ರೂಪದರ್ಶಿ..!
ಹೇಗೋ ಮಾಡಿ ಪೆಡ್ಲರ್ ಒಬ್ಬರ ಕಾಂಟೆಕ್ಟ್ ಮಾಡಿ ಓರಿಸ್ಸಾಗೆ ಹೋಗ್ತಾನೆ. ಅಲ್ಲಿ ಲಾರಿ ಚಾಲಕನ ಮೂಲಕ ಗಾಂಜಾ ಖರೀದಿ ಮಾಡಿ ಬೆಂಗಳೂರಿಗೆ ಬರುತ್ತಿದ್ದನಂತೆ. ದುರಂತ್ ಎಕ್ಸ್ ಪ್ರೆಸ್ ಟ್ರೈನ್ ಮೂಲಕ ಬರ್ತಿದ್ದಾಗ ಎಸ್.ಎಂ.ಟಿ ರೆಲ್ವೆ ನಿಲ್ದಾಣದಲ್ಲಿ ಪೊಲೀಸರಿಗೆ ಲಾಕ್ ಆಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ