
ಬೆಂಗಳೂರು(ಜು.03): ಜಾಮೀನು ಪಡೆದು ಜೈಲಿನಿಂದ ಹೊರಬಂದು ಮತ್ತೆ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ಸ್ ಪೆಡ್ಲರ್ನನ್ನು ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ.
ಮಾಗಡಿ ರಸ್ತೆ ನಿವಾಸಿ ನಾರಾಯಣ(42) ಬಂಧಿತ. ಆರೋಪಿಯು ನಂದಿನಿ ಲೇಔಟ್, ಶ್ರೀರಾಮಪುರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ. ಈತ 2017ರಿಂದಲೂ ಮಾದಕವಸ್ತು ಮಾರಾಟ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಈತನ ವಿರುದ್ಧ ಈ ಹಿಂದೆ ಶ್ರೀರಾಮಪುರ, ನಂದಿನಿ ಲೇಔಟ್ ಪೊಲೀಸ್ ಠಾಣೆಗಳಲ್ಲಿ ಆರು ಎನ್ಡಿಪಿಎಸ್ ಪ್ರಕರಣಗಳು ಹಾಗೂ ಒಂದು ಕೊಲೆ ಯತ್ನ ಪ್ರಕರಣ ದಾಖಲಾಗಿವೆ.
Bengaluru: 28 ಟನ್ ತೂಕದ 60 ಕೋಟಿ ಡ್ರಗ್ಸ್ ನಾಶ ಮಾಡಿದ ಪೊಲೀಸರು!
ಕಳೆದ ಜನವರಿಯಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಯು ಬಳಿಕವೂ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ. ಈ ವೇಳೆ ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದರು.
ಆರೋಪಿಯು ಜಾಮೀನಿನ ಮೇಲೆ ಹೊರಬಂದು ಜಾಮೀನು ಷರತ್ತುಗಳನ್ನು ಪದೇ ಪದೇ ಉಲ್ಲಂಘಿಸಿ ಮಾದಕವಸ್ತು ಮಾರಾಟ ದಂಧೆ ಮುಂದುವರಿಸಿದ್ದರಿಂದ ಶ್ರೀರಾಮಪುರ ಠಾಣೆ ಪೊಲೀಸರ ವರದಿ ಮೇರೆಗೆ ನಗರ ಪೊಲೀಸ್ ಆಯುಕ್ತರು ಆರೋಪಿಯನ್ನು ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಲು ಆದೇಶಿಸಿದ್ದರು. ಅದರಂತೆ ಆರೋಪಿಯನ್ನು ಒಂದು ವರ್ಷದ ಅವಧಿಗೆ ಬಂಧನದಲ್ಲಿರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ