
ಮಂಗಳೂರು: ಕರಾವಳಿಯಲ್ಲಿ ಮತ್ತೆ ಲಾಂಗ್ ಮಚ್ಚುಗಳು ಝಳಪಿಸಿದ್ದು ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ರೌಡಿ ಶೀಟರ್ ಒಬ್ಬನನ್ನು ಕೊಲೆ ಮಾಡಿದ್ದಾರೆ. 46 ವರ್ಷದ ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ ಕೊಲೆಯಾದ ವ್ಯಕ್ತಿ.
ಆರಿಫ್ ಯಾನೆ ಟಾಬ್ಲೆಟ್ ಆರಿಫ್, ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿಯಾಗಿದ್ದಾನೆ. ಈತ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ. ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆಯೇ ಈ ಭಯಾನಕ ಕೊಲೆ ನಡೆದಿದೆ. ಬೈಕ್ನಲ್ಲಿ ತೆರಳುತ್ತಿದ್ದ ಆರಿಫ್ಗೆ ದುಷ್ಕರ್ಮಿಗಳ ತಂಡ ಹಿಂಬದಿಂದ ಕಾರ್ ಡಿಕ್ಕಿ ಹೊಡಿಸಿ ಕೆಳಗೆ ಬೀಳಿಸಿದ್ದಾರೆ. ರಸ್ತೆಗೆ ಬಿದ್ದ ಆರಿಫ್ನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ಬಳಿಕ ಕಾರ್ನಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ.
ಈ ಹಿಂದೆಯೂ ನಡೆದಿತ್ತು ಕೊಲೆಗೆ ಸಂಚು
ಈ ಘಟನೆಗೆ ಗ್ಯಾಂಗ್ ವಾರ್ ಕಾರಣ ಎಂಬ ಶಂಕೆ ಮೂಡಿದೆ. ಕಳೆದ 2022ರ ಮೇ ತಿಂಗಳಲ್ಲಿಯೂ ಇದೇ ರೀತಿ ಆರೀಫ್ ಕೊಲೆಗೆ ಯತ್ನ ನಡೆದಿತ್ತು. ಬೆಳಗ್ಗೆ ಬೈಕಲ್ಲಿ ಧಕ್ಕೆಗೆ ತೆರಳುತ್ತಿದ್ದ ವೇಳೆ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ದಾಳಿ ನಡೆಸಿ ಚೂರಿ ಇರಿದು ಕೊಲೆಗೆ ಯತ್ನಿಸಿತ್ತು.
ಇದನ್ನೂ ಓದಿ: ಇವ ಗೋವಾದ ಪ್ರಜ್ವಲ್ ರೇವಣ್ಣ: 30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ
ಪತ್ನಿ ನಾಲ್ವರು ಮಕ್ಕಳನ್ನು ಹೊಂದಿರುವ ಆರೀಫ್
ವಿವಾಹಿತನಾಗಿರುವ ಆರೀಫ್ ಪತ್ನಿ ಹಾಗೂ ಮೂರು ಗಂಡು, ಒಂದು ಹೆಣ್ಣು ಒಟ್ಟು ನಾಲ್ವರು ಮಕ್ಕಳನ್ನು ಅಗಲಿದ್ದಾನೆ. ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಕಳೆದ ಆರೇಳು ವರುಷದಿಂದ ಕುಟುಂಬ ಸಮೇತ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಇದನ್ನೂ ಓದಿ: ಪತ್ನಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪತಿ: ತಿಂಗಳ ಬಳಿಕ ಲವರ್ ಜೊತೆ ಸಿಕ್ಕ ಹೆಂಡ್ತಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ