ಕಾವೇರಿ ನದಿಗೆ ಹಾರಿ ಆತ್ಮ*ತ್ಯೆಗೆ ಯತ್ನಿಸಿದ್ದ ವೃದ್ಧೆ : ನೀರಿಲ್ಲದೆ ಮುಳುಗದ ಅಜ್ಜಿ ಸೇಫ್

Kannadaprabha News   | Kannada Prabha
Published : Feb 05, 2026, 04:56 AM IST
Old Lady

ಸಾರಾಂಶ

ಕಾವೇರಿ ನದಿಗೆ ಹಾರಿ ಆತ್ಮ*ತ್ಯೆಗೆ ಯತ್ನಿಸಿದ್ದ ವೃದ್ಧೆಯನ್ನು ಸ್ಥಳೀಯರು ನದಿಯಿಂದ ಮೇಲೆತ್ತಿ ರಕ್ಷಣೆ ಮಾಡಿದ ಘಟನೆ ಶ್ರೀರಂಗಪಟ್ಟಣದ ಉತ್ತರ ಕಾವೇರಿಯ ವೆಲ್ಲೆಸ್ಲೀ ಸೇತುವೆ ಬಳಿ ಬುಧವಾರ ನಡೆದಿದೆ.

ಶ್ರೀರಂಗಪಟ್ಟಣ : ಕಾವೇರಿ ನದಿಗೆ ಹಾರಿ ಆತ್ಮ*ತ್ಯೆಗೆ ಯತ್ನಿಸಿದ್ದ ವೃದ್ಧೆಯನ್ನು ಸ್ಥಳೀಯರು ನದಿಯಿಂದ ಮೇಲೆತ್ತಿ ರಕ್ಷಣೆ ಮಾಡಿದ ಘಟನೆ ಪಟ್ಟಣದ ಉತ್ತರ ಕಾವೇರಿಯ ವೆಲ್ಲೆಸ್ಲೀ ಸೇತುವೆ ಬಳಿ ಬುಧವಾರ ನಡೆದಿದೆ.

ಚಾಮರಾಜನಗರ ನಗರದ ಬೆಂಡರವಾಡಿಯ ಗುಂಡಮ್ಮ (78) ಆತ್ಮ*ತ್ಯೆಗೆ ಯತ್ನಿಸಿದ್ದ ವೃದ್ಧೆ ಎಂದು ತಿಳಿದು ಬಂದಿದೆ.

ಕುಟುಂಬ ಕಲಹದಿಂದ ಬೇಸತ್ತ ವೃದ್ಧೆ

ಈಕೆ ಕುಟುಂಬ ಕಲಹದಿಂದ ಬೇಸತ್ತು ಶ್ರೀರಂಗಪಟ್ಟಣಕ್ಕೆ ಬಂದು ಕಾವೇರಿ ನದಿಗೆ ಬಿದ್ದು ಆತ್ಮ8ತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನದಿಯಲ್ಲಿ ನೀರಿ ಪ್ರಮಾಣ ಕಡಿಮೆ ಇದ್ದ ಕಾರಣ ನೀರಲ್ಲಿ ಸಂಪೂರ್ಣವಾಗಿ ಮುಳುಗಲು ಸಾಧ್ಯವಾಗಿಲ್ಲ. ಸೇತುವೆ ಮೇಲೆ ಹೋಗುತ್ತಿದ್ದ ಸ್ಥಳೀಯರಾದ ವಿ.ಸುರೇಶ್ ಹಾಗೂ ಕಿಸಾರ್ ಆಹಮದ್ ಅವರು ನದಿಗೆ ಇಳಿದು ವೃದ್ಧೆಯನ್ನು ರಕ್ಷಣೆ ಮಾಡಿದ್ದಾರೆ.

ನಂತರ ನದಿಯಿಂದ ದಡಕ್ಕೆ ಆಕೆಯನ್ನು ಕರೆ ತಂದು ಸಮಾಧಾನ ಪಡಿಸಿ ಉಪಚಾರ ಮಾಡಿದ ನಂತರ ಅವರಿಂದ ವಿಳಾಸ ಹಾಗೂ ಮಾಹಿತಿ ಪಡೆದು ದೂರವಾಣಿ ಮೂಲಕ ಮನೆ ವಿಷಯ ತಿಳಿಸಿ ಸ್ಥಳಿಯ ಪೊಲೀಸರಿಗೂ ಸಹ ಮಾಹಿತಿ ನೀಡಿದ್ದಾರೆ.

ಅಷ್ಟರಲ್ಲಿ ವೃದ್ಧೆಯ ಮೊಮ್ಮಗ ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಅಜ್ಜಿ ಮಾಹಿತಿ ಪಡೆದು ಸಮಧಾನ ಪಡಿಸಿ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿಯಾಗಿ ಯುವಕ ಸಾವು

ಕಿಕ್ಕೇರಿ: ಆಟೋದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಯುವಕ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಹೋಬಳಿಯ ಲಕ್ಷ್ಮೀಪುರ ಗ್ರಾಮದ ಕೃಷ್ಣೇಗೌಡರ ಪುತ್ರ ಎಲ್.ಕೆ.ನೀರಜ್‌ಗೌಡ(20) ಅಪಘಾತದಿಂದ ಮೃತನಾದ ಯುವಕ. ಬೆಂಗಳೂರಿನಲ್ಲಿ ಆಟೋ ಚಾಲಕನಾಗಿದ್ದ ನೀರಜ್ ಗೌಡ ಆಟೋದಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದನು. ತುರ್ತು ಚಿಕಿತ್ಸೆಗಾಗಿ ಈತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ನೇತ್ರದಾನ ಮಾಡಲು ಹೈಕೋರ್ಟ್ ನಲ್ಲಿ ಸರ್ಕಾರಿ ಅಪರ ವಕೀಲ ಕಿಕ್ಕೇರಿಯ ಕೆ.ಪಿ.ಯೋಗಣ್ಣ ಮೃತ ಕುಟುಂಬದವರಿಗೆ ಮನವೊಲಿಸಿ ಮೃತನ ಶರೀರವನ್ನು ಪಂಚನಾಮೆ ನಡೆಸಿ ಸ್ವಗ್ರಾಮಕ್ಕೆ ರವಾನಿಸಲು ಕಾಳಜಿ ವಹಿಸಿದರು. ಮೃತನ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜಧಾನಿಯಲ್ಲಿ ಕೇವಲ 15 ದಿನದಲ್ಲಿ 807 ಜನ ನಾಪತ್ತೆ: ಮಕ್ಕಳು ಹದಿಹರೆಯದವರೇ ಹೆಚ್ಚು : ವರದಿ
ಜ್ಯೋತಿಷ್ಯ ಹೇಳು ಅಂದ್ರೆ ಆಂಟಿಯ ಹಿಂದೆ ಬಿದ್ದ..! ಪತ್ನಿಯ ಕಾ*ಮಕಾಂಡಕ್ಕೆ ಸಹೋದರನನ್ನು ಕಳೆದುಕೊಂಡ ಪತಿ!