
ಬೆಂಗಳೂರು, (ನ.22): ಐಎಂಎ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರಿನ ಶಿವಾಜಿನಗರದ ಮಾಜಿ ಶಾಸಕರಾಗಿರುವ ರೋಷನ್ ಬೇಗ್ ಅವರನ್ನ ಇಂದು (ಭಾನುವಾರ) ವಿಚಾರಣೆಗೆ ಕರೆಯಿಸಿಕೊಂಡು ಬಳಿಕ ಬಂಧನ ಮಾಡಿದ್ದಾರೆ. ನಂತರ ನೇರವಾಗಿ ಸಿಬಿಐ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯ್ತು.
ಐಎಂಎ ಕೇಸ್ ಆರೋಪಿ ಐಎಎಸ್ ಅಧಿಕಾರಿ ಆತ್ಮಹತ್ಯೆ!
ವಿಚಾರಣೆ ನಡೆಸಿದ ಕೋರ್ಟ್, 14 ದಿನ ನ್ಯಾಯಾಂಗ ಬಂಧನಕ್ಕೆ ಬೇಗ್ ಅವರನ್ನ ಒಪ್ಪಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರೋಷನ್ ಬೇಗ್ ಅವರನ್ನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಿದ್ದಾರೆ
ಬೇಗ್ ವಿರುದ್ಧ ಮನ್ಸೂರ್ ಖಾನ್ನಿಂದ 200 ಕೋಟಿ ಹಣ ಪಡೆದ ಆರೋಪವಿದೆ. ಈ ಸಂಬಂಧ ಬೆಳಗ್ಗೆ 11.30ಕ್ಕೆ ವಿಚಾರಣೆಗೆ ಎಂದು ರೋಷನ್ ಬೇಗ್ ಅವರನ್ನ ಸಿಬಿಐ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ