
ಬೆಂಗಳೂರು, (ನ.09): ರಾಜ್ಯದಲ್ಲಿ ಡ್ರಗ್ ಜಾಲ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಈ ಡ್ರಗ್ ಪ್ರಕರಣದಲ್ಲಿ ಇದೀಗ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಕುಮಾರ್ ಸೇರಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
"
ಡ್ರಗ್ ಪ್ರಕರಣದಲ್ಲಿ ಈಗಾಗಲೇ ಬಂಧನವಾಗಿರುವ ಸುಜಯ್ ಎಂಬುವರು ನೀಡಿರುವ ಮಾಹಿತಿ ಆಧರಿಸಿ, ಸದಾಶಿವನಗರದ ರಿಸೆಟ್ ಜಿಮ್ ನಲ್ಲಿ ಕಚೇರಿಯ ಮೇಲೆ, ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ವನ್ ಆಪ್ ವಿಟಮಿನ್ ಕಂಪನಿಯ ಸಿಇಒ ಹೇಮಂತ್ ಹಾಗೂ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಕುಮಾರ್ ಸೇರಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
2 ತಿಂಗಳಾಯ್ತು ರಾಗಿಣಿ ಜೈಲು ಸೇರಿ; ಯಾಕೆ ಸಿಗುತ್ತಿಲ್ಲ ಬೇಲ್?
ಬಂದಿತರೆಲ್ಲರೂ ಬಹುತೇಕ ಸದಾಶಿವನಗರದ ನಿವಾಸಿಗಳಾಗಿದ್ದಾರೆ. ಫಾರಿನ್ ಪೋಸ್ಟ್ ಆಫೀಸ್ ಗೆ ಬಂಧಿತರಿಂದ 500 ಗ್ರಾಂ ಹೈಡ್ರೋ ಗಾಂಜಾ ಕೂಡ ದಾಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ