
ಬೆಂಗಳೂರು(ಅ.07): ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಕ್ರಮಗಳನ್ನು ಮತ್ತಷ್ಟುಬಿಗಿಗೊಳಿಸಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ರೌಡಿಯೊಬ್ಬನ ವಿರುದ್ಧ ಅಕ್ರಮ ಮಾದಕ ವಸ್ತು ಸಾಗಾಣಿಕೆ ತಡೆ ಕಾಯ್ದೆ (ಪಿಐಟಿ ಎನ್ಡಿಪಿಎಸ್ ಕಾಯ್ದೆ-1988) ಪ್ರಯೋಗಿಸಿದ್ದಾರೆ.
ನಗರದಲ್ಲಿ ರೌಡಿಯೊಬ್ಬನ ಮೊದಲ ಬಾರಿಗೆ ಪಿಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿಂದೆ ನೈಜೀರಿಯಾ ಪೆಡ್ಲರ್ನನ್ನು ಇದೇ ಕಾಯ್ದೆಯಡಿ ಬಂಧಿಸಿ ಸಿಸಿಬಿ ಪೊಲೀಸರು ಜೈಲಿಗೆ ಅಟ್ಟಿದ್ದರು. ಈ ಗೂಂಡಾ ಕಾಯ್ದೆ ಮಾದರಿಯ ಕಾಯ್ದೆ ಇದಾಗಿದ್ದು, ಒಂದು ವರ್ಷಗಳ ಪೆಡ್ಲರ್ಗೆ ಜಾಮೀನು ಸಿಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
'ಡ್ರಗ್ ಕೇಸ್ : ಹೀರೋಗಳ ಮೇಲೆ ಯಾಕೆ ತನಿಖೆ ಆಗುತ್ತಿಲ್ಲ?'
ಪಿಳ್ಳಣ್ಣ ಗಾರ್ಡನ್ ನಿವಾಸಿ ಸೈಯದ್ ನಾಜೀಮ್ ಬಂಧಿತನಾಗಿದ್ದು, 2009ರಿಂದಲೂ ಗಾಂಜಾ ಮಾರಾಟದಲ್ಲಿ ಆತ ನಿರತನಾಗಿದ್ದ. ಈ ಸಂಬಂಧ ಆತನ ಮೇಲೆ 6 ಪ್ರಕರಣಗಳು ದಾಖಲಾಗಿವೆ. ಗಾಂಜಾ ಕೃತ್ಯದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದ ಆರೋಪಿ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿ ಮತ್ತೆ ಗಾಂಜಾ ಮಾರಾಟ ಚಟುವಟಿಕೆಯಲ್ಲಿ ಮುಂದುವರೆದಿದ್ದ. ಈ ಕೃತ್ಯಗಳ ಹಿನ್ನೆಲೆಯಲ್ಲಿ ಆತನ ವಿರುದ್ಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ರೌಡಿಪಟ್ಟಿ ರೆಯಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇತ್ತೀಚಿಗೆ ಸೈಯದ್ ನಾಜೀಮ್ ವಿರುದ್ಧ ಮಾದಕ ವಸ್ತು ಸಾಗಾಣಿಕೆ ನಿಯಂತ್ರಣ ಕಾಯ್ದೆ (ಪಿಐಟಿ)ಯಡಿ ಪ್ರಕರಣ ದಾಖಲಿಸಲು ಅನುಮತಿ ಕೋರಿ ಆಯುಕ್ತರಿಗೆ ಕೆ.ಜಿ.ಹಳ್ಳಿ ಪೊಲೀಸರು ವರದಿ ಸಲ್ಲಿಸಿದ್ದರು. ಈ ವರದಿಗೆ ಮಾನ್ಯ ಮಾಡಿದ ಆಯುಕ್ತ ಕಮಲ್ ಪಂತ್ ಅವರು, ಆರೋಪಿ ವಿರುದ್ಧ ಪಿಐಟಿ ಕಾಯ್ದೆ ಪ್ರಯೋಗಕ್ಕೆ ಅಸ್ತು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ