ಕೇರಳದಲ್ಲಿ ಹಮಾಸ್‌ ಉಗ್ರ ಭಾಷಣ ಬೆನ್ನಲ್ಲೇ ತ್ರಿವಳಿ ಬಾಂಬ್‌ ಸ್ಪೋಟ: ಮಹಿಳೆ ಬಲಿ, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Published : Oct 29, 2023, 11:31 AM ISTUpdated : Oct 29, 2023, 12:48 PM IST
ಕೇರಳದಲ್ಲಿ ಹಮಾಸ್‌ ಉಗ್ರ ಭಾಷಣ ಬೆನ್ನಲ್ಲೇ ತ್ರಿವಳಿ ಬಾಂಬ್‌ ಸ್ಪೋಟ: ಮಹಿಳೆ ಬಲಿ, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಸಾರಾಂಶ

ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಸಮಾವೇಶ ಕೇಂದ್ರದಲ್ಲಿ ಬಾಂಬ್‌ ಸ್ಫೋಟ ನಡೆದಿದ್ದು, ಶಂಕಿತ ಭಯೋತ್ಪಾದಕ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. 

ತಿರುವನಂತಪುರಂ (ಅಕ್ಟೋಬರ್ 29, 2023): ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಸಮಾವೇಶ ಕೇಂದ್ರದಲ್ಲಿ ಮೂರು ಕಡೆ ಸ್ಫೋಟವಾಗಿರುವ ವರದಿಯಾಗಿದೆ. ಈ ಬಾಂಬ್‌ ಸ್ಫೋಟದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇದು ಭಯೋತ್ಪಾದಕ ಕೃತ್ಯವಾಗಿರೋ ಶಂಕೆ ವ್ಯಕ್ತವಾಗಿದೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಸಮಾವೇಶ ಕೇಂದ್ರದಲ್ಲಿ ಐದು ನಿಮಿಷದಲ್ಲಿ 3 ಬಾಂಬ್‌ ಸ್ಫೋಟ ನಡೆದಿದ್ದು, ಒಂದಕ್ಕಿಂತ ಹೆಚ್ಚು ಸ್ಫೋಟ ಸಂಭವಿಸಿರುವ ಬಗ್ಗೆ  ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಬೆಳಗ್ಗೆ 9:30ರ ವೇಳೆ ಸ್ಫೋಟ ನಡೆದಿದ್ದು, ಐವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕಲಮಸ್ಸೆರಿ ಮೆಡಿಕಲ್‌ ಕಾಲೇಜಿಗೆ ಸ್ಥಳಾಂತರ ಮಾಡಲಾಗಿದೆ. 

ಇದನ್ನು ಓದಿ: ಕೇರಳದ ಪ್ಯಾಲಿಸ್ತೇನ್‌ ಪರ ಸಮಾವೇಶದಲ್ಲಿ ವರ್ಚುವಲ್‌ ಆಗಿ ಮಾತನಾಡಿದ ಹಮಾಸ್‌ ಭಯೋತ್ಪಾದಕ Khaled Mashal

ಕ್ರೈಸ್ತರ ಯೆಹೋವನ ಸಾಕ್ಷಿ ಸಮಾವೇಶದ ವೇಳೆ ಈ ಸ್ಫೋಟಗಳು ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಫೋಟ ಸಂಭವಿಸಿದಾಗ ಸುಮಾರು 2,000 ಜನರು ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ವರದಿಯಾಗಿದೆ. ಇದು ಭಯೋತ್ಪಾದಕ ದಾಳಿ ಎಂದು ಪ್ರಾಥಮಿಕ ಮೌಲ್ಯಮಾಪನವು ಸೂಚಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 


 
ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಮಾಸ್ ಉಗ್ರ ಭಾಗವಹಿಸಿದ್ದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆಯೇ ಈ ಸ್ಫೋಟ ಸಂಭವಿಸಿದೆ. ಹಮಾಸ್ ನಾಯಕ ಖಲೀದ್ ಮಶಾಲ್ ಶನಿವಾರ ವಾಸ್ತವಿಕವಾಗಿ ಭಾಗವಹಿಸಿದರು ಮತ್ತು ಉಗ್ರಗಾಮಿ ಸಂಘಟನೆಯೊಂದಿಗೆ ಇಸ್ರೇಲ್‌ ದಾಳಿಯ ವಿರುದ್ಧ ರಾಜ್ಯದಲ್ಲಿ ಇಸ್ಲಾಮಿಸ್ಟ್ ಗುಂಪು ಆಯೋಜಿಸಿದ್ದ ಪ್ರತಿಭಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದರು. ಖಲೀದ್ ಮಶಾಲ್ ಹಮಾಸ್ ಪಾಲಿಟ್‌ಬ್ಯೂರೋದ ಸ್ಥಾಪಕ ಸದಸ್ಯರಾಗಿದ್ದಾರೆ ಮತ್ತು 2017 ರವರೆಗೆ ಅದರ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: ಇಸ್ರೇಲ್‌ ಭಾರಿ ದಾಳಿ ಮಾಡಿದ್ರೂ ಹಮಾಸ್‌ ಸುರಂಗ ಸೇಫ್‌: ಪೂರ್ಣ ಪ್ರಮಾಣದ ಭೂದಾಳಿ ಹಿಂದೇಟಿಗೂ ಇದೇ ಕಾರಣ!

ಮೃತರ ಸಂಖ್ಯೆ ಹಾಗೂ ಗಾಯಾಳುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಅವರು ಸ್ಫೋಟದ ಸ್ಥಳದಿಂದ ಸುಟ್ಟ ದೇಹವನ್ನು ವಶಪಡಿಸಿಕೊಂಡಿದ್ದು, ರಾಜ್ಯದ ಭಯೋತ್ಪಾದನಾ ನಿಗ್ರಹ ದಳ ಕಲಮಸ್ಸೆರಿ ತಲುಪಿದೆ.

ಪ್ಯಾಲೆಸ್ತೀನ್‌ ಪರ ಪ್ರತಿಭಟನೆ ನಡೆದ ಬೆನ್ನಲ್ಲೇ ಕ್ರಿಶ್ಚಿಯನ್ ಸಮುದಾಯದ ಸಮಾರಂಭದಲ್ಲಿ ಸ್ಪೋಟ ನಡೆದಿದ್ದು, ಸಮಾರಂಭ ಆಯೋಜಿಸಿದ್ದ ಕ್ರೈಸ್ತರು ಹಾಗೂ ಯಹೂದಿ ಸಮುದಾಯ ಸಂಪ್ರದಾಯಗಳು ಬಹುತೇಕ ಸಾಮ್ಯತೆ ಇದೆ. ಅಲ್ಲದೆ, ಭಯೋತ್ಪಾದಕ ಕೃತ್ಯಗಳ ಆರೋಪ ಎದುರಿಸುತ್ತಿರುವ ಅಬ್ದುಲ್‌ ನಾಸೀರ್ ಮದನಿ ಕೂಡ ಇದೇ ಪ್ರದೇಶದವನು ಎಂಬುದು ಮುಖ್ಯ ಅಂಶವಾಗಿದೆ. 


ಕಳೆದ ಮೂರು ದಿನಗಳಿಂದ ಈ ಸಮಾವೇಶ ನಡೆಯುತ್ತಿತ್ತು. ಇಂದು ಸಮಾವೇಶದ ಕೊನೆಯ ದಿನವಾಗಿತ್ತು ಎಂದೂ ತಿಳದುಬಂದಿದೆ. ಕಲಮಸೇರಿ ಸ್ಫೋಟ ಪ್ರಕರಣದ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ನಿರ್ದೇಶಕರು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚಿಸಿದ್ದಾರೆ. ಇನ್ನು,  ಎಲ್ಲ ಆಸ್ಪತ್ರೆಗಳಿಗೂ ಎಚ್ಚರಿಕೆ ನೀಡಲಾಗಿದ್ದು, ರಜೆಯಲ್ಲಿರುವ ವೈದ್ಯರು ಸೇರಿದಂತೆ ಎಲ್ಲ ಆರೋಗ್ಯ ಕಾರ್ಯಕರ್ತರನ್ನು ಕೂಡಲೇ ಹಿಂತಿರುಗುವಂತೆ ಸಚಿವರು ಸೂಚಿಸಿದರು. ಕಲಮಸೇರಿ ವೈದ್ಯಕೀಯ ಕಾಲೇಜು, ಎರ್ನಾಕುಲಂ ಜನರಲ್ ಆಸ್ಪತ್ರೆ ಮತ್ತು ಕೊಟ್ಟಾಯಂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚುವರಿ ಸೌಲಭ್ಯಗಳನ್ನು ಸಿದ್ಧಪಡಿಸಲು ಸೂಚನೆಗಳನ್ನು ನೀಡಲಾಗಿದೆ. ಹಾಗೂ, ಹೆಚ್ಚುವರಿ ಸಿಬ್ಬಂದಿಯನ್ನೂ ಒದಗಿಸಲಾಗುವುದು ಮತ್ತು ಜಿಲ್ಲೆಯ ಇತರೆ ಆಸ್ಪತ್ರೆಗಳಲ್ಲೂ ಸೌಲಭ್ಯ ಕಲ್ಪಿಸಲು ಕೇರಳ ಸಚಿವೆ ವೀಣಾ ಜಾರ್ಜ್‌ ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ