ಕಾರ್‌ಲ್ಲಿದ್ದವರಿಗೆ ಚಾಕು ತೋರಿಸಿ ಸುಲಿಗೆ; ಚಿನ್ನದ ಸರ, ಮೊಬೈಲ್ ಕಸಿದು ಪರಾರಿ

Published : Dec 13, 2022, 09:50 PM IST
ಕಾರ್‌ಲ್ಲಿದ್ದವರಿಗೆ ಚಾಕು ತೋರಿಸಿ ಸುಲಿಗೆ; ಚಿನ್ನದ ಸರ, ಮೊಬೈಲ್ ಕಸಿದು ಪರಾರಿ

ಸಾರಾಂಶ

ನಿದ್ದೆ ಬರುತ್ತಿದ್ದ ಕಾರಣಕ್ಕೆ ಕಾರ್‌ನ್ನು ರಸ್ತೆ ಬದಿಗೆ ಹಾಕಿ ವಿಶ್ರಾಂತಿ ಪಡೆಯುತ್ತಿದ್ದ ತೆಲಂಗಾಣ ಮೂಲದ ಇಬ್ಬರು ವ್ಯಕ್ತಿಗಳಿಗೆ ದುಷ್ಕರ್ಮಿಗಳು ಚಾಕು ತೋರಿಸಿ ಅವರಿಂದ ಹಣ, ಮೊಬೈಲ್‌ ಹಾಗೂ 2 ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ (ಡಿ.13) : ನಿದ್ದೆ ಬರುತ್ತಿದ್ದ ಕಾರಣಕ್ಕೆ ಕಾರ್‌ನ್ನು ರಸ್ತೆ ಬದಿಗೆ ಹಾಕಿ ವಿಶ್ರಾಂತಿ ಪಡೆಯುತ್ತಿದ್ದ ತೆಲಂಗಾಣ ಮೂಲದ ಇಬ್ಬರು ವ್ಯಕ್ತಿಗಳಿಗೆ ದುಷ್ಕರ್ಮಿಗಳು ಚಾಕು ತೋರಿಸಿ ಅವರಿಂದ ಹಣ, ಮೊಬೈಲ್‌ ಹಾಗೂ 2 ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾದ ಘಟನೆ ನಡೆದಿದೆ.

ನಗರದ ಹೊರ ವಲಯದ ಬೆಂಗಳೂರು- ಹೈದ್ರಾಬಾದ್‌ ನಡುವಿನ ರಾಷ್ಟ್ರೀಯ ಹೆದ್ದಾರಿ 44 ರ ಚದಲುಪುರ ಸಮೀಪದ ಕೀರ್ತಿ ಡಾಬಾ ಬಳಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಈ ಕುರಿತು ತೆಲಂಗಾಣ ರಾಜ್ಯದ ಹೈದ್ರಾಬಾದ್‌ ನಿವಾಸಿÜ ಶಂಕರದತ್ತ ಬಿನ್‌ ನರಸಿಂಹಶರ್ಮ ಎಂಬುವರು ನಂದಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ತಾನು ಹಾಗೂ ತನ್ನ ಅಣ್ಣ ಮುರಳಿ ಶರ್ಮ ಕಾರ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿರುವಾಗ ನಿದ್ದೆ ಬಂದಿದ್ದರಿಂದ ಚಿಕ್ಕಬಳ್ಳಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಕೀರ್ತಿ ಡಾಬಾ ಪಕ್ಕದಲ್ಲಿ ವಾಹನವನ್ನು ನಿಲ್ಲಿಸಿಕೊಂಡು ವಿಶ್ರಾಂತಿ ಪಡೆಯುತ್ತಿದ್ದೆವು. ಬೆಳಗಿನ ಜಾವ ಸುಮಾರು 4.30 ಗಂಟೆ ಸಮಯದಲ್ಲಿ ಯಾರೋ ಮೂವರು ನಮ್ಮ ಕಾರ್‌ನ ಕಿಟಕಿಯನ್ನು ತಟ್ಟಿನಮ್ಮನ್ನು ಎಬ್ಬಿಸಿ ಚಾಕು ತೋರಿಸಿ ಬೆದರಿಸಿದರು. ಬಳಕ ನನ್ನ ಕತ್ತಿನಲ್ಲಿದ್ದ ಚೈನ್‌, ನನ್ನ ಅಣ್ಣನ ಬಳಿಯಿದ್ದ 6900 ನಗದು ಹಾಗೂ ಪಾಸಿಲ್‌ ಕಂಪನಿಯ ಕೈ ವಾಚ್‌ ಮತ್ತು ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಈ ವೇಳೆ ಸ್ವಲ್ಪ ದೂರಿನಲ್ಲಿದ್ದ ಪೊಲೀಸ್‌ ಗಸ್ತು ವಾಹನಕ್ಕೆ ಕಾರು ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾರಣೆ ನಡೆಸಿದರೂ ಪತ್ತೆ ಆಗಲಿಲ್ಲ.

ಎಟಿಎಂ ಕಾರ್ಡ್ ಬದಲಿಸಿ ಹಣ ಕದಿಯುತ್ತಿದ್ದ ಕಳ್ಳ ಬಂಧನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!