ಹುಡುಗಿ ಹೆಸರಲ್ಲಿ ಫೇಸ್‌ಬುಕ್; ಬರೋಬ್ಬರಿ ₹6.87  ಲಕ್ಷ ರೂ.ವಂಚಿಸಿದ ಭೂಪ!

Published : Dec 15, 2023, 10:47 AM ISTUpdated : Dec 15, 2023, 10:49 AM IST
ಹುಡುಗಿ ಹೆಸರಲ್ಲಿ ಫೇಸ್‌ಬುಕ್; ಬರೋಬ್ಬರಿ  ₹6.87  ಲಕ್ಷ ರೂ.ವಂಚಿಸಿದ ಭೂಪ!

ಸಾರಾಂಶ

ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87  ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ (ಡಿ.15): ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87  ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ. ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ.

ಬ್ರಿಗೇಡ್ ರೋಡ್ ಗೆ ಹೊಸ ವರ್ಷ ಸಂಭ್ರಮಾಚರಣೆಗೆ ಹೋಗುವ  ಕಪಲ್ಸ್ ಗಳಿಗೆ  ಸಿಹಿ ಸುದ್ದಿ; ಪ್ರತ್ಯೇಕ ಜಾಗ ವ್ಯವಸ್ಥೆ!

ಭರತ್ ಕುಮಾರ್’ಗೆ ಫೇಸ್ ಬುಕ್’ನಲ್ಲಿ ಪರಿಚಯ ಮಾಡಿಕೊಂಡ ಆರೋಪಿಗಳು ಶರ್ಮಿಳ ಮತ್ತು ದಿವ್ಯ ಎಂಬ ಹೆಸರಿನಲ್ಲಿ ಮೆಸೆಂಜರ್ ಹಾಗೂ ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದಾನೆ. ಬಳಿಕ ಕಷ್ಟ ಇದೆ ಎಂದು ನಂಬಿಸಿ ಹಣವನ್ನು ಫೋನ್ ಪೇ, ಪೇಟಿಎಂ, ಗೂಗಲ್ ಪೇ ಹಾಗೂ ಬ್ಯಾಂಕ್ ಖಾತೆಗಳಿಗೆ ಹಾಕಿಸಿಕೊಂಡು ವಂಚಿಸಿದ್ದಾರೆ. 

ಸಂತ್ರಸ್ತ ವಿದ್ಯಾರ್ಥಿಯಾಗಿದ್ದು,  ಹಣ ಕಳೆದುಕೊಂಡ ಉದ್ಯಮಿ ಆತನ ತಂದೆ ಶಾಂತಕುಮಾರ್ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಡಿಸೆಂಬರ್ 12ರಂದು ಶಿವಮೊಗ್ಗ ನಗರ, ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಟೌನ್ ನಿವಾಸಿ ಸುಜೇಂದ್ರ ಎಂ.ಬಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇತರೆ ಆರೋಪಿಗಳ ಬಂಧನಕ್ಕೆ ತನಿಖೆ ಮುಂದುವರಿದಿದೆ.

ವಿಚಾರಣೆ ವೇಳೆ ಆರೋಪಿ ತಾನು ಆನ್‌ಲೈನ್ ಜೂಜಾಟದ ಚಟ ಹೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸಂತ್ರಸ್ತನಿಂದ ಪಡೆದಿದ್ದ ಹಣವನ್ನು ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ.. ಸಿಇಎನ್ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ನೇತೃತ್ವದ ತಂಡ ತನಿಖೆ ಕೈಗೊಂಡಿದೆ.

ಹೊಸ ವರ್ಷದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ನಿಮ್ಮ ಅದೃಷ್ಟ ಬದಲಾಗುತ್ತದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು