
ತುಮಕೂರು(ಜೂ. 18) ಕೊರೋನಾದೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ನಕಲಿ ಖಾತೆಗಳ ಹಾವಳಿ ಜೋರಾಗಿದೆ. ಗಣ್ಯವ್ಯಕ್ತಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದದು ಹಣಕ್ಕೆ ಬೇಡಿಕೆ ಇಡುವ ಪ್ರಕರಣಗಳು ಒಂದಾದ ಮೇಲೊಂದು ವರದಿಯಾಗುತ್ತಲೇ ಇವೆ.
ಕನ್ನಡಪ್ರಭ, ಸುವರ್ಣ ನ್ಯೂಸ್ ಸಂಪಾದಕ ರವಿ ಹೆಗಡೆ ಹೆಸರಿನಲ್ಲಿಯೂ ನಕಲಿ ಖಾತೆ
ಇದೀಗ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಮಾಜಿ ಸಚಿವ ಟಿ.ಬಿ ಜಯಚಂದ್ರ ಹೆಸರಿನಲ್ಲಿ ಫೇಸ್ ಬುಕ್ ನಕಲಿ ಖಾತೆ ಸೃಷ್ಟಿ ಮಾಡಿರುವ ವಂಚಕರು ಜಯಚಂದ್ರ ಆಪ್ತರಿಗೆ ಹಾಗೂ ಬೆಂಬಲಿಗರಿಗೆ ಫ್ರೆಂಡ್ ಶಿಫ್ಟ್ ರಿಕ್ವೆಸ್ಟ್ ಕಳುಹಿಸಿದ್ದಾರೆ. ರಿಕ್ವೆಸ್ಟ್ ಸ್ವೀಕರಿಸಿದವರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ..
ಜಯಚಂದ್ರ ಅವರೇ ತಮ್ಮ ಅಧಿಕೃತ ಖಾತೆಯಲ್ಲಿ ನಕಲಿ ಖಾತೆಯಿಂದ ಎಚ್ಚರವಾಗಿರಿ ಎಂದು ಬರೆದುಕೊಂಡಿದ್ದಾರೆ. ನಕಲಿ ಖಾತೆ ತೆರೆದಿದ್ದಾರೆ ಯಾರು ಹಣ ನೀಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ