ಹೈಕೋರ್ಟ್‌ ನ್ಯಾಯಾಧಿಶರ ಹೆಸರಲ್ಲಿ ನಕಲಿ ಆದೇಶ, ₹1.53 ಕೋಟಿ ವಂಚನೆ, ಆರೋಪಿಗಳು ಅರೆಸ್ಟ್

Published : Mar 07, 2025, 09:02 AM ISTUpdated : Mar 07, 2025, 09:11 AM IST
ಹೈಕೋರ್ಟ್‌ ನ್ಯಾಯಾಧಿಶರ ಹೆಸರಲ್ಲಿ ನಕಲಿ ಆದೇಶ, ₹1.53 ಕೋಟಿ ವಂಚನೆ, ಆರೋಪಿಗಳು ಅರೆಸ್ಟ್

ಸಾರಾಂಶ

ಕೋರ್ಟ್ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಸಿದ್ಧಪಡಿಸಿ ಯುವತಿ ಸೇರಿ ನಾಲ್ವರಿಗೆ ಕಳುಹಿಸಿ ₹1.53 ಕೋಟಿ ಹಣ ಪಡೆದು ವಂಚಿಸಿದ್ದ ಆರೋಪದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮಾ.7): ಕೋರ್ಟ್ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಸಿದ್ಧಪಡಿಸಿ ಯುವತಿ ಸೇರಿ ನಾಲ್ವರಿಗೆ ಕಳುಹಿಸಿ ₹1.53 ಕೋಟಿ ಹಣ ಪಡೆದು ವಂಚಿಸಿದ್ದ ಆರೋಪದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಕೆಆರ್‌ಎಸ್‌ ಅಗ್ರಹಾರ ನಿವಾಸಿ ವಿಜೇತ್‌ ಅಲಿಯಾಸ್‌ ವಿಜೇತ್‌ ರಾಜೇಗೌಡ (32) ಮತ್ತು ನೆಮಮಂಗಲ ತಾಲೂಕು ಚಿನ್ನಮಂಗಲ ನಿವಾಸಿ ಲೋಹಿತ್‌ (30) ಬಂಧಿತರು. ಹೈಕೋರ್ಟ್‌ ಲೀಗಲ್‌ ಸೆಲ್‌ ಜಂಟಿ ರಿಜಿಸ್ಟ್ರಾರ್‌ ಎಂ.ರಾಜೇಶ್ವರಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾ ರಾವ್ ಬಿಗ್ ಟ್ವಿಸ್ಟ್! 27 ಸಲ ದುಬೈ ಯಾತ್ರೆ| ಮೊಬೈಲ್‌ನಲ್ಲಿ ಸಿಕ್ಕಿದ್ದೇನು?

ಮ್ಯಾಟ್ರಿಮೊನಿಯಲ್ಲಿ ಯುವತಿ ಪರಿಚಯ:

ಆರೋಪಿಗಳ ಪೈಕಿ ಲೋಹಿತ್ ಐಟಿಐ ವ್ಯಾಸಂಗ ಮಾಡಿದ್ದು, ವಿಜೀತ್ ಡಿಪ್ಲೋಮಾ ವ್ಯಾಸಂಗ ಮಾಡಿದ್ದಾನೆ. ಆರೋಪಿ ವಿಜೇತ್‌ ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ಗೆ ತನ್ನ ಪ್ರೊಫೈಲ್‌ ಹಾಕಿ, ಅದರಲ್ಲಿ ತಾನು ಸಿವಿಲ್‌ ಇಂಜಿನಿಯರ್‌ ಎಂದು ಉಲ್ಲೇಖಿಸಿದ್ದ. ಈ ಪ್ರೊಫೈಲ್‌ ನೋಡಿದ್ದ ಯುವತಿಯೊಬ್ಬಳು ಆತನನ್ನು ಮದುವೆಯಾಗಲು ಆಸಕ್ತಿ ತೋರಿದ್ದರು. ಬಳಿಕ ಇಬ್ಬರು ಪರಸ್ಪರ ಮೊಬೈಲ್‌ ಸಂಖ್ಯೆ ವಿನಿಮಯ ಮಾಡಿಕೊಂಡು ಮಾತನಾಡಲು ಆರಂಭಿಸಿದ್ದಾರೆ.

ಇಡಿ ದಾಳಿ ಎಂದು ಕಥೆ ಕಟ್ಟಿದ:

ಈ ನಡುವೆ ಆರೋಪಿ ವಿಜೇತ್‌ ತನ್ನ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಈ ಹಿಂದೆ ದಾಳಿ ಮಾಡಿ 1.50 ಕೋಟಿ ರು. ಜಪ್ತಿ ಮಾಡಿದ್ದಾರೆ. ಈ ಪ್ರಕರಣದ ಹೈಕೋರ್ಟ್‌ನಲ್ಲಿದ್ದು, ನಾಯ್ಯಾಲಯವು ಈ ಇಡಿ ದಾಳಿಯಲ್ಲಿ ಯಾವುದೇ ಹುರುಳಿಲ್ಲ. ಕೂಡಲೇ ಹಣವನ್ನು ವಾಪಾಸ್‌ ನೀಡುವಂತೆ ಆದೇಶಿಸಿದೆ ಮತ್ತು ಅನಗತ್ಯ ದಾಳಿ ಮಾಡಿದ ಇಡಿ ಅಧಿಕಾರಿಗಳಿಗೆ ದಂಡ ವಿಧಿಸಿದೆ ಎಂದು ಹೈಕೋರ್ಟ್‌ನ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಸಿದ್ಧಪಡಿಸಿ ಯುವತಿಗೆ ಕಳುಹಿಸಿದ್ದಾನೆ. ಇದು ನಿಜವೆಂದ ಯುವತಿ ಭಾವಿಸಿದ್ದಾಳೆ.

ಬಳಿಕ ಆರೋಪಿ ವಿಜೇತ್‌, ಇಡಿ ಜಪ್ತಿ ಮಾಡಿರುವ ಹಣ ಸದ್ಯದಲ್ಲೇ ನನ್ನ ಖಾತೆಗೆ ಬರಲಿದೆ. ಹೀಗಾಗಿ ಕೆಲ ತಿಂಗಳ ಮಟ್ಟಿಗೆ ಹಣ ಕೊಡುವಂತೆ ಯುವತಿಗೆ ಕೇಳಿದ್ದೇನೆ. ಈತನ ಮಾತು ನಂಬಿದ ಯುವತಿ ವಿವಿಧ ಹಂತಗಳಲ್ಲಿ ಆರೋಪಿ ವಿಜೇತ್‌ ಖಾತೆಗೆ ₹50 ಲಕ್ಷ ಹಣ ಹಾಕಿದ್ದಾಳೆ. ಬಳಿಕ ಮತ್ತಷ್ಟು ಹಣ ಬೇಕು ಎಂದು ಆರೋಪಿ ಕೇಳಿದ್ದಾನೆ. ಆಗ ಯುವತಿ ಪರಿಚಿತ ಮೂವರು ಇಂಜಿನಿಯರ್‌ಗಳಿಂದ ಆರೋಪಿ ಖಾತೆಗೆ ಹಣ ಹಾಕಿಸಿದ್ದಾಳೆ. ನಾಲ್ವರು ಸೇರಿ ಆರೋಪಿಗೆ ಒಟ್ಟು ₹1.53 ಕೋಟಿ ಹಣ ಕೊಟ್ಟಿದ್ದಾರೆ.

ಇದನ್ನೂ ಓದಿ: News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

ಹಣ ಪಡೆದು ಬಳಿಕ ಪ್ರೊಫೈಲ್‌ ಡಿಲಿಟ್‌

ಹಣದ ಪಡೆದ ಬಳಿಕ ಆರೋಪಿ ವಿಜೇತ್‌, ಮ್ಯಾಟ್ರಿಮೋನಿಯಲ್‌ ವೆಬ್‌ಸೈಟ್‌ನಲ್ಲಿ ತನ್ನ ಪ್ರೊಫೈಲ್‌ ಡಿಲೀಟ್‌ ಮಾಡಿದ್ದಾನೆ. ಮೊಬೈಲ್‌ ಸ್ವಿಚ್ಡ್‌ ಆಫ್‌ ಮಾಡಿ ಯುವತಿಯ ಸಂಪರ್ಕ ಕಡಿದುಕೊಂಡಿದ್ದಾನೆ. ವಿಜೇತ್‌ನ ಈ ವಂಚನೆಗೆ ಸ್ನೇಹಿತ ಲೋಹಿತ್‌ ಸಾಥ್‌ ನೀಡಿದ್ದಾನೆ. ಬಳಿಕ ತಾವು ವಂಚನೆಗೆ ಒಳಗಾಗಿರುವುದು ಯುವತಿ ಸೇರಿ ನಾಲ್ವರಿಗೂ ಅರಿವಿಗೆ ಬಂದಿದೆ. ಈ ಸಂಬಂಧ ಹೈಕೋರ್ಟ್‌ನ ಲೀಗಲ್‌ ಸೆಲ್‌ ರಿಜಿಸ್ಟ್ರಾರ್‌ಗೆ ದೂರು ನೀಡಿದ್ದರು. ಈ ಸಂಬಂಧ ರಿಜಿಸ್ಟ್ರಾರ್‌ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ