Fake Police Arrested: 'ಏಯ್ ನಾನು ಪೊಲೀಸಪ್ಪ..' PSI ಅಂತಾ ಅವಾಜ್ ಹಾಕ್ತಿದ್ದ ಖಾಕಿ ವೇಷದ ಕಳ್ಳ ಅರೆಸ್ಟ್

Kannadaprabha News, Ravi Janekal |   | Kannada Prabha
Published : Jul 09, 2025, 07:30 AM ISTUpdated : Jul 09, 2025, 10:26 AM IST
Bengaluru Crime

ಸಾರಾಂಶ

ಪೊಲೀಸ್ ಐಡಿ ಕಾರ್ಡ್ ಬಳಸಿ ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ಟೋಲ್ ಪ್ಲಾಜಾಗಳಲ್ಲಿ ಪೊಲೀಸ್ ಎಂದು ನಟಿಸುತ್ತಿದ್ದ ಆರೋಪಿ, ಅಧಿಕಾರಿಗಳ ಅನುಮಾನಕ್ಕೆ ಗುರಿಯಾಗಿ ಸಿಕ್ಕಿಬಿದ್ದಿದ್ದಾನೆ.

ಪೀಣ್ಯ ದಾಸರಹಳ್ಳಿ‌ (ಜುಲೈ.9): ಪೊಲೀಸ್ ಐಡಿ ಕಾರ್ಡ್ ಹಿಡಿದು ಎಲ್ಲರಿಗೂ ಆವಾಜ್​ ಹಾಕಿಕೊಂಡು ಓಡಾಡುತ್ತಿದ್ದ ಕಳ್ಳ ಖಾಕಿಯನ್ನು ಬಂಧಿಸಲಾಗಿದೆ.

ಪಿಎಸ್‌ಐ ಮಂಜುನಾಥ್ ಎಂಬುವರ ಐಡಿ ಕಾರ್ಡ್ ಬಳಸಿ ಟೋಲ್ ಪ್ಲಾಜಾ ಮತ್ತು ವಿಮಾನ ನಿಲ್ದಾಣಗಳಲ್ಲಿ ಪೊಲೀಸ್ ಎಂದು ಹೇಳಿಕೊಂಡು ಓಡಾಡುತ್ತಿದ್ದ ಕರಿಹೋಬನಹಳ್ಳಿಯ ರವಿ ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.ಆರೋಪಿಯು ಪಿಎಸ್​​ಐ ಮಂಜುನಾಥ್ ಎಂಬುವರ ಐಡಿ ಕಾರ್ಡಿಗೆ ತನ್ನ ಫೋಟೋ ಹಾಕಿ ಆವಾಜ್ ಹಾಕುತ್ತಿದ್ದ.

ಏಯ್ ಪೊಲೀಸಪ್ಪ ನಾನು’​ ಎಂದು ಆವಾಜ್:

ಬಂಧಿತ ರವಿ ಎಲ್ಲಾ ಕಡೆ ‘ಏಯ್ ಪೊಲೀಸಪ್ಪ ನಾನು’ ಅಂತ ಐಡಿ ಕಾರ್ಡ್ ತೋರಿಸುತ್ತಿದ್ದ. ರವಿ ಶೇಷಾದ್ರಿಪುರಂನ ರೇಣುಕಾ ಶುಗರ್ಸ್​ನಲ್ಲಿ ಫೀಲ್ಡ್ ಆಫೀಸರ್ ಆಗಿ ಕೆಲಸ ಮಾಡಿಕೊಂಡಿದ್ದ. ಆದರೆ ಏಕಾಏಕಿ ಪೊಲೀಸ್ ಐಡಿ ಕಾರ್ಡ್ ಹಿಡಿದು ಓಡಾಡುವುದಕ್ಕೆ ಶುರು ಮಾಡಿದ್ದರು. 

ಇದನ್ನೂ ಓದಿ: ಕೋಲಾರ ಬೆಂಗಳೂರಲ್ಲಿ NIA ಭರ್ಜರಿ ಬೇಟೆ, ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ! ಏನಿದು ಪ್ರಕರಣ?

ಬೆಂಗಳೂರು ಕೆಂಪೇಗೌಡ ಏರ್​ಪೋರ್ಟ್​ನ ಇಮಿಗ್ರೇಷನ್ ಬಳಿಯೂ ರವಿ ಐಡಿ ಕಾರ್ಡ್ ತೋರಿಸಿದ್ದ. ಐಡಿ ಸ್ಕ್ಯಾನ್ ಮಾಡಿದ್ದ ಇಮಿಗ್ರೇಷನ್ ಅಧಿಕಾರಿಗಳಿಗೆ ಆರೋಪಿ ರವಿ ಮೇಲೆ ಅನುಮಾನ ಬಂದಿತ್ತು. ಎದುರುಗಡೆ ಇರುವ ವ್ಯಕ್ತಿನೇ ಬೇರೆ ಐಡಿ ನಂಬರೇ ಬೇರೆ ಎನ್ನುವುದು ಪಕ್ಕಾ ಆಗಿತ್ತು. ಬಳಿಕ ಇಮಿಗ್ರೇಷನ್​ನಿಂದ ನೇರವಾಗಿ ಸ್ಟೇಟ್ ಇಂಟ್​ಗೆ ಮಾಹಿತಿ ಹೋಗಿತ್ತು. ಮಾಹಿತಿ ತಿಳಿದ ಪೀಣ್ಯ ಪೊಲೀಸರು ಆರೋಪಿ ರವಿಯನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಕಿಂಗ್: ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!