ದಾವಣಗೆರೆ: ಬ್ಯಾಂಕ್ ಸಾಲಕ್ಕೆ ಹೆದರಿ ರೈತ ನೇಣುಬಿಗಿದು ಆತ್ಮಹತ್ಯೆ!

Published : Jun 09, 2024, 03:16 PM ISTUpdated : Jun 09, 2024, 03:44 PM IST
ದಾವಣಗೆರೆ: ಬ್ಯಾಂಕ್ ಸಾಲಕ್ಕೆ ಹೆದರಿ ರೈತ ನೇಣುಬಿಗಿದು ಆತ್ಮಹತ್ಯೆ!

ಸಾರಾಂಶ

ಬ್ಯಾಂಕ್ ಸಾಲಕ್ಕೆ ಹೆದರಿ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಹನುಮಂತಪ್ಪ(42) ಆತ್ಮಹತ್ಯೆ ಮಾಡಿಕೊಂಡ ರೈತ.

ದಾವಣಗೆರೆ (ಜೂ.9): ಬ್ಯಾಂಕ್ ಸಾಲಕ್ಕೆ ಹೆದರಿ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಹನುಮಂತಪ್ಪ(42) ಆತ್ಮಹತ್ಯೆ ಮಾಡಿಕೊಂಡ ರೈತ. ಮನೆ ಮೇಲೆ 4 ಲಕ್ಷ್, ಕುರಿ ಮೇಲೆ 2.60 ಲಕ್ಷ ರೂ. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದ ರೈತ. ಆದರೆ ಮರುಪಾವತಿಸಲು ಸಾಧ್ಯವಾಗದ್ದರಿಂದ ರೈತನಿಗೆ ನೋಟಿಸ್ ನೀಡಿದ್ದ ಬ್ಯಾಂಕ್. ಸಾಲ ಮರುಪಾವತಿ ಮಾಡದ ಹಿನ್ನೆಲೆ ಮನೆ ಹರಾಜಿಗೆ ಬ್ಯಾಂಕ್ ನೋಟಿಸ್ ನೀಡಿತ್ತು. ಇದರಿಂದ ಗ್ರಾಮದಲ್ಲಿ ಅವಮಾನ ಒಂದು ಕಡೆ, ತೀವ್ರ ಬರಗಾಲದಲ್ಲಿ ಬೆಳೆ ಇಲ್ಲದೇ ಸಾಲ ಮರುಪಾವತಿ ಮಾಡಲಾಗದ ಅಸಹಾಯಕಸ್ಥಿತಿ ಒಂದೆಡೆ ಇದರಿಂದ ಮನನೊಂದ ರೈತ ತನ್ನ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾನೆ.

ರೈತ ಆತ್ಮಹತ್ಯೆ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳಿಯರು ಸ್ಥಳಕ್ಕೆ ಬಂದ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

ಬೈಕ್ ಮೆಕಾನಿಕ್ ಆತ್ಮಹತ್ಯೆಗೆ ಶರಣು:

ತುರುವೇಕೆರೆ: ಬೈಕ್ ಮೆಕಾನಿಕ್ ಓರ್ವ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಬಾಣಸಂದ್ರದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಾಲೂಕಿನ ತೋವಿನಕೆರೆಯ ನಿವಾಸಿ ಗೋಪಿ (೩೪) ಮೃತ ದುರ್ದೈವಿ. ಗೋಪಿ ಪಟ್ಟಣದ ಕೃಷಿ ಮಾರುಕಟ್ಟೆ ಸಮಿತಿಯ ಮುಂಭಾಗ ಬೈಕ್ ರಿಪೇರಿ ಮಾಡುವ ಅಂಗಡಿಯನ್ನು ಇಟ್ಟುಕೊಂಡಿದ್ದರು. ಶುಕ್ರವಾರ ಬೆಳಗ್ಗೆ ಎಂದಿನಂತೆ ಮನೆಯಿಂದ ಹೊರಗೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಕುಟುಂಬದವರು ಪಟ್ಟಣದ ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಪತ್ತೆಗೆ ಮುಂದಾಗ ಪೋಲಿಸರು ಮೊಬೈಲ್‌ ಟವರ್ ಲೋಕೇಷನ್ ಪರಿಶೀಲಿಸಿದಾಗ ಬಾಣಸಂದ್ರದ ಅರಣ್ಯ ಪ್ರದೇಶದಲ್ಲಿರುವುದು ಗೊತ್ತಾಗಿದೆ.

ರೈತ ಆತ್ಮಹತ್ಯೆಗೆ ಸರ್ಕಾರ, ಕೃಷಿ ವಿಜ್ಞಾನಿಗಳು ನೇರ ಹೊಣೆ: ರೈತ ಸಂಘ ಆರೋಪ

 ಸ್ಥಳಕ್ಕೆ ಹೋದಾಗ ಅಲ್ಲಿ ಮೆಕಾನಿಕ್ ಗೋಪಿ ಬಳಸುತ್ತಿದ್ದ ಬೈಕ್‌ ಪತ್ತೆಯಾಗಿದೆ. ಕೆಲ ದೂರದಲ್ಲಿ ಗೋಪಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಗೋಪಿಗೆ ಪತ್ನಿ, ಇಬ್ಬರು ಚಿಕ್ಕ ಮಕ್ಕಳು ಇದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ