Suicide Cases in Karnataka: ಸಾಲದ ಬಾಧೆಗೆ ಸಿಲುಕಿ ರೈತ ಆತ್ಮಹತ್ಯೆಗೆ ಶರಣು

Published : Apr 24, 2022, 10:09 AM IST
Suicide Cases in Karnataka: ಸಾಲದ ಬಾಧೆಗೆ ಸಿಲುಕಿ ರೈತ ಆತ್ಮಹತ್ಯೆಗೆ ಶರಣು

ಸಾರಾಂಶ

*   ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದ ಘಟನೆ *   ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ ರೈತ *  ಈ ಸಂಬಂಧ ರಿಪ್ಪನ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು   

ಶಿವಮೊಗ್ಗ(ಏ.24):  ಸತತ ಶುಂಠಿ ಧಾರಣೆ ಕುಸಿತವಾದ ಹಿನ್ನೆಲೆಯಲ್ಲಿ ಸಾಲದ ಬಾಧೆಗೆ ಸಿಲುಕಿದ ರೈತನೋರ್ವ(Farmer) ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ(Hosanagar) ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಇಂದು(ಭಾನುವಾರ) ನಡೆದಿದೆ.  ಬಸವಾಪುರ ಗ್ರಾಮದ ವಸಂತ (34) ಎಂಬ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ. 

ಕಳೆದ ಐದು ವರ್ಷಗಳಿಂದ ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದ ಮೃತ ವಸಂತ. ಸತತ ಮೂರು ವರ್ಷಗಳಿಂದ ಶುಂಠಿ(Ginger) ಧಾರಣೆ ಕುಸಿತಗೊಂಡಿದ್ದರಿಂದ ತೀವ್ರ ಸಂಕಷ್ಟಗೊಳಗಾಗಿದ್ದ ವಸಂತ. ನಷ್ಟದಲ್ಲಿದ್ದ ರೈತ ವಸಂತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದನು ಅಂತ ತಿಳಿದು ಬಂದಿದೆ. 

Raichur Suicide: ಸಿಂಧನೂರಲ್ಲಿ ಒಂದೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು: ಕಾರಣ?

ಸಾಲಗಾರರ(Loan) ಕಾಟಕ್ಕೆ ಹೆದರಿ ಕೋಟೆತಾರಿಗಾ ಗ್ರಾಮದ ಹಿಂಡ್ಲೆಮನೆ ರಸ್ತೆಯ ಪಕ್ಕದ ಕಾಡಿನಲ್ಲಿ ಕಳೆನಾಶಕ ಕುಡಿದು ರೈತ ವಸಂತ ಸಾವನ್ನಪ್ಪಿದ್ದಾನೆ. ಈ ಸಂಬಂಧ ರಿಪ್ಪನ್ ಪೇಟೆ ಪೋಲಿಸ್(Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಮನೆಯಲ್ಲಿ ಜಗಳ ಮಾಡಿಕೊಂಡು ಕೆರೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು(Chikkamagaluru) ಜಿಲ್ಲೆ ಮೂಡಿಗೆರೆ ತಾಲೂಕಿನ ಚೇಗು ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. ಪ್ರಮೋದ್ (19) ಎಂಬುವವೇ ಅತ್ಮಹತ್ಯೆ(Suicide) ಮಾಡಿಮೊಂಡ ಮೃತ ದುರ್ದೈವಿಯಾಗಿದ್ದಾನೆ. 

ಸಿದ್ದು-ಪ್ರೇಮ ದಂಪತಿಯ ಪುತ್ರನಾದ ಪ್ರಮೋದ್ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅಂತ ತಿಳಿದು ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಅನಾರೋಗ್ಯದಿಂದ ಮಾನಸಿಕ ಖಿನ್ನತೆ: ಆತ್ಮಹತ್ಯೆಗೆ ಶರಣು

ಬೆಂಗಳೂರು:  ಅನಾರೋಗ್ಯದಿಂದ ಮಾನಸಿಕ ಖಿನ್ನತೆಯಿಂದ ಒಳಗಾಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುಳ್ಯದಲ್ಲಿ ಚಲಿಸುತ್ತಿರುವ ಲಾರಿ ಅಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ವಿಡಿಯೋ

ಶ್ರೇಯಸ್‌ ಕಾಲೋನಿಯ ನಿವಾಸಿ ಚಂದ್ರಶೇಖರ್‌ (62) ಆತ್ಮಹತ್ಯೆ ಮಾಡಿಕೊಂಡವರು. ಖಾಸಗಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಚಂದ್ರಶೇಖರ್‌, ಅನಾರೋಗ್ಯದ ಹಿನ್ನೆಲೆಯಲ್ಲಿ ಐದು ವರ್ಷದ ಹಿಂದೆಯೇ ಸ್ವಯಂ ನಿವೃತ್ತಿ ಪಡೆದಿದ್ದರು. ಪತ್ನಿ ಖಾಸಗಿ ಕಂಪನಿಯಲ್ಲಿ ಅಸಿಸ್ಟೆಂಟ್‌ ಮ್ಯಾನೇಜರ್‌ ಆಗಿದ್ದಾರೆ. ಇಬ್ಬರು ಮಕ್ಕಳು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಶುಕ್ರವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ಮರಣಪತ್ರ ಬರೆದಿಟ್ಟು ಹಗ್ಗದಿಂದ ಸೀಲಿಂಗ್‌ ಹುಕ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಪತ್ನಿ ಮನೆಗೆ ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಚಂದ್ರಶೇಖರ್‌ ಅವರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದರು. ಇತ್ತೀಚೆಗೆ ಕಣ್ಣುಗಳು ಸಹ ಸರಿಯಾಗಿ ಕಾಣುತ್ತಿರಲಿಲ್ಲ. ಹೀಗಾಗಿ ಜೀವನದ ಮೇಲೆ ಜಿಗುಪ್ಸೆಗೊಂಡಿದ್ದರು. ನಾನು ಬದುಕಿರಬಾರದು ಎಂದು ಪತ್ನಿ ಹಾಗೂ ಸಂಬಂಧಿಕರ ಜತೆ ಈ ಹಿಂದೆ ಹಲವು ಬಾರಿ ಹೇಳಿಕೊಂಡಿದ್ದರು ಎಂದು ತಿಳಿದು ಬಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Darshan The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ ದರ್ಶನ್‌ ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು