
ರಾಮದುರ್ಗ(ಸೆ.12): ಸಾಲಬಾಧೆಯಿಂದಾಗಿ ರೈತನೋರ್ವ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ಪಟ್ಟಣ ಸಮೀಪದ ಮುಳ್ಳೂರ ಗುಡ್ಡದಲ್ಲಿ ಶುಕ್ರವಾರ ಸಂಭವಿಸಿದೆ.
ಸವದತ್ತಿ ತಾಲೂಕಿನ ಶಿರಸಂಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಹಾಗೂ ಇನಾಮಗೋವನಕೊಪ್ಪ ಗ್ರಾಮದ ಸಿದ್ದಪ್ಪ ಲಕ್ಷ್ಮಣ ಸುಳ್ಳದ (40) ಆತ್ಮಹತ್ಯೆ ಮಾಡಿಕೊಂಡಿರುವ ರೈತ.
ರಾಯಚೂರು: ಫೇಸ್ಬುಕ್ ಲೈವಲ್ಲಿ ಯುವಕ ಆತ್ಮಹತ್ಯೆ
ಕೂಡು ಕುಟುಂಬದಲ್ಲಿ ಸುಮಾರು 9 ಎಕರೆ ಜಮೀನು ಹೊಂದಿದ ರೈತ, ಶಿರಸಂಗಿ ಸೊಸೈಟಿಯಲ್ಲಿ .50 ಸಾವಿರ., ಶಿರಸಂಗಿ ಕೆ.ವ್ಹಿ.ಜಿ ಬ್ಯಾಂಕಿನಲ್ಲಿ 1.50 ಲಕ್ಷ, ತನ್ನ ಹೆಂಡತಿ ಹೆಸರಿನಲ್ಲಿರುವ ಸಾಲ ಸೇರಿದಂತೆ ವಿವಿಧೆಡೆ ಸುಮಾರು . 6.50 ಲಕ್ಷ ಸಾಲ ಮಾಡಿದ್ದ. ಜಮೀನಿನಲ್ಲಿ ಬೋರ್ವೆಲ್ ಕೊರೆಯಿಸಿದರೂ ಸರಿಯಾಗಿ ನೀರು ದೊರೆಯದೆ ಹಾಗೂ ಅತಿಯಾದ ಮಳೆಯಿಂದಾಗಿ ಜಮೀನಿನಲ್ಲಿರುವ ಹತ್ತಿ, ಗೋವಿನಜೋಳ ಹಾನಿಯಾಗಿದೆ. ಹೀಗಾಗಿ ಮಾಡಿದ ಸಾಲ ತೀರಿಸುವುದು ಹೇಗೆಂದು ತೋಚದೆ ಮುಳ್ಳೂರ ಗುಡ್ಡದಲ್ಲಿ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಹೆಂಡತಿ ಮಹಾದೇವಿ ಸಿದ್ದಪ್ಪ ಸುಳ್ಳದ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಿಸಿದ್ದಾಳೆ.
ಘಟನಾ ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ನಾಗನಗೌಡ ಕಟ್ಟಿಮನಿಗೌಡ್ರ ಭೇಟಿ ಪರಿಶೀಲಿಸಿದ್ದಾರೆ. ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ